AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಒಳ್ಳೆ ನಿರ್ದೇಶಕರ ಜೊತೆ ಕೈ ಜೋಡಿಸಿದ ಸಲ್ಮಾನ್ ಖಾನ್

Salman Khan: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸತತ ಸೋಲುಗಳಿಂದ ಕಂಗೆಟ್ಟಿದ್ದಾರೆ. ಒಂದು ದೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. ಇದೀಗ ಸಲ್ಮಾನ್ ಖಾನ್, ಬಾಲಿವುಡ್​ನ ಪ್ರತಿಭಾವಂತ ನಿರ್ದೇಶಕಿಯೊಟ್ಟಿಗೆ ಕೈ ಜೋಡಿಸಿದ್ದಾರೆ.

ಕೊನೆಗೂ ಒಳ್ಳೆ ನಿರ್ದೇಶಕರ ಜೊತೆ ಕೈ ಜೋಡಿಸಿದ ಸಲ್ಮಾನ್ ಖಾನ್
ಮಂಜುನಾಥ ಸಿ.
|

Updated on: Aug 17, 2024 | 11:34 AM

Share

ಬಾಲಿವುಡ್​ನ ಭಾಯ್​ಜಾನ್ ಸಲ್ಮಾನ್ ಖಾನ್ ಹಲವು ವರ್ಷಗಳಿಂದಲೂ ಒಂದೊಳ್ಳೆ ಹಿಟ್ ಸಿನಿಮಾ ಇಲ್ಲದೆ ತತ್ತರಿಸಿದ್ದಾರೆ. ಮಾಡಿದ ಎಲ್ಲ ಸಿನಿಮಾಗಳು ಒಂದರ ಹಿಂದೊಂದರಂತೆ ತೋಪು ಸೇರುತ್ತಿವೆ. ಭಾರಿ ನಿರೀಕ್ಷೆ ಇರಿಸಿದ್ದ ‘ಟೈಗರ್ 3’ ಸಿನಿಮಾ ಸಹ ಮಕಾಡೆ ಮಲಗಿತು. ಆದರೆ ಶಾರುಖ್ ಖಾನ್ ಮಾತ್ರ ಒಂದೇ ವರ್ಷದಲ್ಲಿ ಮೂರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದರು. ಸತತ ಸೋಲುಗಳಿಂದ ಕಂಗೆಟ್ಟ ಸಲ್ಮಾನ್ ಖಾನ್, ಇದೀಗ ತಮ್ಮ ಸಿನಿಮಾ ಆಯ್ಕೆ ಶೈಲಿ ಬದಲಿಸಿದಂತಿದ್ದಾರೆ. ಇಷ್ಟು ದಿನ ಬರೀ ಆಕ್ಷನ್ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಲ್ಮಾನ್ ಖಾನ್ ಇದೀಗ ಭಿನ್ನ ಮಾದರಿ ಸಿನಿಮಾಗಳನ್ನು ಮಾಡುವ ನಿರ್ದೇಶಕರೊಟ್ಟಿಗೆ ಕೈ ಜೋಡಿಸಿದ್ದಾರೆ.

ಕ್ಲಾಸಿಕ್ ಎನಿಸಿಕೊಂಡಿರುವ ‘ಜಿಂದಗಿ ನಾ ಮಿಲೇಗಿ ದುಬಾರಾ’, ‘ಗಲ್ಲಿ ಬಾಯ್’ ಇನ್ನಿತರೆ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಜನಪ್ರಿಯ ನಿರ್ದೇಶಕಿ ಜೋಯಾ ಅಖ್ತರ್ ಜೊತೆಗೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದಾರೆ. ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ಸಲ್ಮಾನ್ ಖಾನ್ ನಟಿಸಲಿದ್ದಾರೆ. ಸಲ್ಮಾನ್ ಖಾನ್​ರ ಈ ಹಿಂದಿ ಸಿನಿಮಾಗಳ ರೀತಿ ಅಲ್ಲದೆ, ಬಹಳ ಭಿನ್ನವಾದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆಯಂತೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಜೋಯಾ ಅಖ್ತರ್, ‘ಸಲ್ಮಾನ್ ಖಾನ್ ಜೊತೆಗೆ ಕೆಲಸ ಮಾಡುವುದು ಅತ್ಯದ್ಭುತ ಅನುಭೂತಿ ಆಗಲಿದೆ. ಇಬ್ಬರಿಗೂ ಒಟ್ಟಿಗೆ ಕೆಲಸ ಮಾಡುವ ಆಸೆಯಿದೆ. ಆದರೆ ಸಲ್ಮಾನ್ ಖಾನ್, ಸೂಪರ್ ಸ್ಟಾರ್ ಅವರ ನಿರೀಕ್ಷೆಗಳ ಜೊತೆಗೆ ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಗಳೂ ಸಹ ಜೊತೆಗಿರುತ್ತವೆ. ಹಾಗಾಗಿ ಸಲ್ಮಾನ್ ಖಾನ್​, ಅವರ ಅಭಿಮಾನಿಗಳು ಹಾಗೂ ನನಗೆ ಮೂವರಿಗೂ ಒಪ್ಪಿಗೆ ಆಗುವ ವಿಷಯದ ಹುಡುಕಾಟದಲ್ಲಿದ್ದೇನೆ. ವಿಷಯ ಸಿಕ್ಕಿದ ಕೂಡಲೇ ತಡ ಮಾಡುವುದಿಲ್ಲ’ ಎಂದಿದ್ದಾರೆ.

ಸಲ್ಮಾನ್ ಖಾನ್ ಪ್ರಸ್ತುತ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಪ್ರಸ್ತುತ ಚೋಪ್ರಾ ಫಿಲಮ್ಸ್​ನ ಗೂಢಚಾರಿ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ಅವರ ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿರುವ ಹೊಸ ಆಕ್ಷನ್ ಸಿನಿಮಾ ಒಂದರಲ್ಲಿಯೂ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ತಮಿಳಿನ ಜನಪ್ರಿಯ ಆಕ್ಷನ್ ನಿರ್ದೇಶಕ ಎಆರ್ ಮುರುಗದಾಸನ್ ನಿರ್ದೇಶನ ಮಾಡುತ್ತಿದ್ದು, ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ