19 ಅಂತಸ್ತಿನ ಐಷಾರಾಮಿ ಹೋಟೆಲ್ ನಿರ್ಮಿಸಲಿದ್ದಾರೆ ಸಲ್ಮಾನ್ ಖಾನ್? ಇಲ್ಲಿದೆ ಸಂಪೂರ್ಣ ವಿವರ

Salman Khan: ಸಲ್ಮಾನ್ ಖಾನ್ ಅವರು ಮುಂಬೈನ ಹಲವು ಕಡೆಗಳಲ್ಲಿ ಪ್ರಾಪರ್ಟಿ ಹೊಂದಿದ್ದಾರೆ. ಮುಂಬೈನ ಹೊರವಲಯದಲ್ಲಿ ಫಾರ್ಮ್​ಹೌಸ್ ಇದೆ. ಈಗ ಸಲ್ಲು ಅವರು ಹೋಟೆಲ್ ಬಿಸ್ನೆಸ್​ ಕಡೆ ಗಮನ ನೀಡುತ್ತಿದ್ದಾರೆ.

19 ಅಂತಸ್ತಿನ ಐಷಾರಾಮಿ ಹೋಟೆಲ್ ನಿರ್ಮಿಸಲಿದ್ದಾರೆ ಸಲ್ಮಾನ್ ಖಾನ್? ಇಲ್ಲಿದೆ ಸಂಪೂರ್ಣ ವಿವರ
ಸಲ್ಮಾನ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 21, 2023 | 6:30 AM

ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ಅವರು ಸಾವಿರಾರ ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಆದಾಯದ ಮೂಲಕ್ಕೆ ಸಲ್ಮಾನ್ ಖಾನ್ ಕೇವಲ ಸಿನಿಮಾ ನಂಬಿಕೊಂಡಿಲ್ಲ. ಅವರು ಅನೇಕ ಕಡೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ರಿಯಲ್ ಎಸ್ಟೇಟ್​ ಬಗ್ಗೆ ಸಲ್ಲುಗೆ ವಿಶೇಷ ಆಸಕ್ತಿ ಇದೆ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಆಸ್ತಿ ಖರೀದಿ ಮಾಡುತ್ತಾರೆ. ಈಗ ಸಲ್ಲು ಐಷಾರಾಮಿ ಹೋಟೆಲ್ ನಿರ್ಮಿಸಲು ರೆಡಿ ಆಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಅವರು ಹೊಸ ಬಿಸ್ನೆಸ್​ಗೆ ಇಳಿಯುತ್ತಿದ್ದಾರೆ.

ಸಲ್ಮಾನ್ ಖಾನ್ ಅವರು ಮುಂಬೈನ ಹಲವು ಕಡೆಗಳಲ್ಲಿ ಪ್ರಾಪರ್ಟಿ ಹೊಂದಿದ್ದಾರೆ. ಮುಂಬೈನ ಹೊರವಲಯದಲ್ಲಿ ಫಾರ್ಮ್​ಹೌಸ್ ಇದೆ. ಈಗ ಸಲ್ಲು ಅವರು ಹೋಟೆಲ್ ಬಿಸ್ನೆಸ್​ ಕಡೆ ಗಮನ ನೀಡುತ್ತಿದ್ದಾರೆ. ಬಾಂದ್ರಾದಲ್ಲಿ 19 ಅಂತಸ್ತಿನ ಕಟ್ಟಡ ಹೊಂದಿದ್ದಾರೆ ಸಲ್ಮಾನ್ ಖಾನ್. ಇದನ್ನು ಅವರು ಹೋಟೆಲ್ ಆಗಿ ಬದಲಾಯಿಸುವ ಆಲೋಚನೆಯಲ್ಲಿದ್ದಾರೆ.

ವಾಸಕ್ಕೆ ಯೋಗ್ಯವಾದ ಮನೆಯನ್ನು ಕಮರ್ಷಿಯಲ್ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಬೇಕು ಎಂದರೆ ಅದಕ್ಕೆ ಒಪ್ಪಿಗೆ ಪಡೆಯಬೇಕು. ಸಲ್ಮಾನ್ ಖಾನ್ ವರ್ಷದ ಹಿಂದೆಯೇ ಒಪ್ಪಿಗೆ ಕೋರಿ ಮನವಿ ಸಲ್ಲಿಕೆ ಮಾಡಿದ್ದರು. ಮುಂಬೈ ಬೃಹತ್ ಮಹಾನಗರ ಪಾಲಿಕೆ ಇದಕ್ಕೆ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾಸಕ್ಕೆ ಯೋಗ್ಯವಾಗಿರುವ ಕಟ್ಟಡವನ್ನು ಹೋಟೆಲ್ ಆಗಿ ಬದಲಾಯಿಸುವ ಕೆಲಸ ಆಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ

ಮೊದಲ ಎರಡು ಅಂತಸ್ತಿನಲ್ಲಿ ಕೆಫೆ ಹಾಗೂ ರೆಸ್ಟೋರೆಂಟ್​ ಇರಲಿದೆ. ಮೂರನೇ ಫ್ಲೋರ್​ನಲ್ಲಿ ಸ್ವಿಮಿಂಗ್ ಪೂಲ್ ಹಾಗೂ ಜಿಮ್ ಇರಲಿದೆ. ನಾಲ್ಕನೇ ಫ್ಲೋರ್​ನಲ್ಲಿ ಸರ್ವಿಸ್ ಹಾಲ್ ಇರಲಿದೆ. ಐದು ಹಾಗೂ ಆರನೇ ಫ್ಲೋರ್​ನಲ್ಲಿ ಸಮಾರಂಭ ಮಾಡಲು ಹಾಲ್​ಗಳು ಇರಲಿವೆ. 7-19ನೇ ಫ್ಲೋರ್​​ಗಳು ಹೋಟೆಲ್​​ ಕೆಲಸಕ್ಕೆ ಬಳಕೆ ಆಗಲಿದೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಸಾಧಾರಣ ಗಳಿಕೆ ಮಾಡಿದೆ. ‘ಟೈಗರ್ 3’ ಸಿನಿಮಾ ಕೆಲಸಗಳಲ್ಲಿ ಸಲ್ಮಾನ್ ಖಾನ್ ತೊಡಗಿಕೊಂಡಿದ್ದಾರೆ. ಇದಲ್ಲದೆ, ಕರಣ್ ಜೋಹರ್ ಜೊತೆ ಅವರು ಹೊಸ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!