AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ ಅಂತ್ಯಕ್ಕೆ ದಕ್ಷಿಣ ಭಾರತಕ್ಕೆ ಬರಲಿದ್ದಾರೆ ಸಲ್ಮಾನ್​ ಖಾನ್​; ಇದಕ್ಕಿದೆ ಮಹತ್ವದ ಕಾರಣ

ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಆದಾಗ್ಯೂ ಚಿತ್ರತಂಡಗಳು ಸೂಕ್ತ ಮುಂಜಾಗೃತ ಕ್ರಮ ಕೈಗೊಂಡು ಶೂಟಿಂಗ್​ ನಡೆಸುತ್ತಿವೆ. ‘ಗಾಡ್​​ಫಾದರ್​’ ತಂಡ ಕೂಡ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದೆ. ಜನವರಿ ಅಂತ್ಯದ ವೇಳೆ ಹೊಸ ಶೆಡ್ಯೂಲ್​ ಆರಂಭವಾಗುವ ನಿರೀಕ್ಷೆ ಇದೆ.

ಜನವರಿ ಅಂತ್ಯಕ್ಕೆ ದಕ್ಷಿಣ ಭಾರತಕ್ಕೆ ಬರಲಿದ್ದಾರೆ ಸಲ್ಮಾನ್​ ಖಾನ್​; ಇದಕ್ಕಿದೆ ಮಹತ್ವದ ಕಾರಣ
ಸಲ್ಮಾನ್​ ಖಾನ್
TV9 Web
| Edited By: |

Updated on: Jan 10, 2022 | 8:48 PM

Share

ಮೆಗಾಸ್ಟಾರ್​ ಚಿರಂಜೀವಿ 153ನೇ ಸಿನಿಮಾ ‘ಗಾಡ್​​ಫಾದರ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಮಲಯಾಳಂನ ಸೂಪರ್​ ಹಿಟ್​ ಚಿತ್ರ ‘ಲೂಸಿಫರ್’ ರಿಮೇಕ್​ ಇದಾಗಿದೆ. ಈ ಸಿನಿಮಾದ ಶೂಟಿಂಗ್​ ಈಗಾಗಲೇ ಆರಂಭಗೊಂಡಿದೆ. ಚಿತ್ರದಲ್ಲಿ ಸಲ್ಮಾನ್​ ಖಾನ್​ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ಪೃಥ್ವಿರಾಜ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೋಹನ್​ಲಾಲ್​​ಗೆ ಸಹಾಯ ಮಾಡುವ ಡಾನ್​ ಪಾತ್ರ ಇದಾಗಿತ್ತು. ಅವರು ತೆರೆಮೇಲೆ ಕಾಣಿಸೋದು ಕಡಿಮೆಯಾದರೂ ಇಡೀ ಚಿತ್ರದಲ್ಲಿ ತುಂಬಾನೇ ಮುಖ್ಯ ಎನಿಸಿಕೊಳ್ಳುತ್ತದೆ ಆ ಪಾತ್ರ. ತೆಲುಗಿನಲ್ಲಿ ಸಲ್ಲು ಈ ಪಾತ್ರದಲ್ಲಿ ನಟಿಸಲಿದ್ದಾರೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಬಂದಿದೆ.

ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಆದಾಗ್ಯೂ ಚಿತ್ರತಂಡಗಳು ಸೂಕ್ತ ಮುಂಜಾಗೃತ ಕ್ರಮ ಕೈಗೊಂಡು ಶೂಟಿಂಗ್​ ನಡೆಸುತ್ತಿವೆ. ‘ಗಾಡ್​​ಫಾದರ್​’ ತಂಡ ಕೂಡ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದೆ. ಜನವರಿ ಅಂತ್ಯದ ವೇಳೆ ಹೊಸ ಶೆಡ್ಯೂಲ್​ ಆರಂಭವಾಗುವ ನಿರೀಕ್ಷೆ ಇದೆ. ಇದರಲ್ಲಿ ಸಲ್ಮಾನ್ ಖಾನ್​ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

‘ಹಿಂದಿ ಬಿಗ್ ಬಾಸ್ 15’ ಕೊನೆಯ ಹಂತಕ್ಕೆ ಬಂದು ನಿಂತಿದೆ. ಸಲ್ಮಾನ್ ಖಾನ್​ ಅವರು ಇದರ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದರೂ ವಾರಾಂತ್ಯಕ್ಕೆ ಅವರು ಮುಂಬೈಗೆ ಮರಳಬೇಕು. ಜನವರಿ ಅಂತ್ಯದ ವೇಳೆಗೆ ಈ ಶೋ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ, ಸಂಪೂರ್ಣ ಸಮಯವನ್ನು ಸಲ್ಮಾನ್​ ಖಾನ್​ ಶೂಟಿಂಗ್​ನಲ್ಲಿ ಕಳೆಯಬಹುದು. ‘ಗಾಡ್​ಫಾದರ್​’ನಲ್ಲಿ ತಮ್ಮ ಭಾಗದ ಶೂಟಿಂಗ್​ ಮುಗಿಸಿಯೇ ಅವರು ಮುಂಬೈಗೆ ಮರಳಬಹುದು.

ಸಲ್ಮಾನ್​ ಖಾನ್​ ಹಾಗೂ ಚಿರುಗೋಸ್ಕರ ವಿಶೇಷ ಸಾಂಗ್​ ಮಾಡೋಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಮೂಲ ಸಿನಿಮಾ ‘ಲೂಸಿಫರ್​’ನಲ್ಲಿ ಈ ರೀತಿಯ ಸಾಂಗ್ ಇಲ್ಲ. ಆದರೆ, ಸಲ್ಲು ಬಾಲಿವುಡ್​ ಅಂಗಳದಿಂದ ದಕ್ಷಿಣಕ್ಕೆ ಬರುವ ಕಾರಣಕ್ಕೆ ಚಿತ್ರತಂಡ ಈ ಆಲೋಚನೆ ಮಾಡಿದೆ. ತಮನ್​ ಈ ಸಿನಿಮಾ ಸಂಗೀತ ಸಂಯೋಜನೆ ಮಾಡುತ್ತಿದ್ದು, ವಿದೇಶಿ ಗಾಯಕರನ್ನು ತರುವ ಆಲೋಚನೆಯಲ್ಲಿದ್ದಾರೆ. ಆದರೆ, ಈ ಆಲೋಚನೆಯನ್ನು ಸಲ್ಮಾನ್​ ಖಾನ್​ ತಿರಸ್ಕರಿಸಿದ್ದಾರೆ ಎಂದು ವರದಿ ಆಗಿತ್ತು. ಬಾಲಿವುಡ್​ನ ಸಾಕಷ್ಟು ಸಿಂಗರ್​ಗಳು ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಲ್ಲಿ ಕೆಲವರು ದಕ್ಷಿಣಕ್ಕೆ ಬಂದಿಲ್ಲ. ವಿದೇಶಿ ಸಿಂಗರ್​ಗಳಿಗೆ ಹೆಚ್ಚಿನ ಹಣ ನೀಡಿ ಅವರನ್ನು ಕರೆ ತರುವ ಬದಲು, ಬಾಲಿವುಡ್​ ಮಂದಿಯನ್ನೇ ಕರೆತರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

ಬಿಗ್​ ಬಾಸ್​ ಸ್ಪರ್ಧಿಗೆ ಕೊವಿಡ್​ ಪಾಸಿಟಿವ್​? ಅರ್ಧಕ್ಕೆ ಕೊನೆಯಾಗಲಿದೆ ಸಲ್ಲು ಶೋ?

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ