AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಪ್ರಮುಖ ದಿನ ಮಿಸ್ ಮಾಡಿಕೊಳ್ಳಲಿದ್ದಾರೆ ಸಲ್ಮಾನ್ ಖಾನ್

ಸದ್ಯ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಈ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಲಿದ್ದಾರೆ. 2025ರ ಈದ್​ಗೆ ಈ ಚಿತ್ರ ರಿಲೀಸ್ ಆಗಲಿದೆ. 2026ರ ಈದ್​ನ ಮಿಸ್​ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

Salman Khan: ಪ್ರಮುಖ ದಿನ ಮಿಸ್ ಮಾಡಿಕೊಳ್ಳಲಿದ್ದಾರೆ ಸಲ್ಮಾನ್ ಖಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 16, 2024 | 2:05 PM

Share

ಸಲ್ಮಾನ್ ಖಾನ್ ಹಾಗೂ ಈದ್​ಗೆ ಎಲ್ಲಿಲ್ಲದ ನಂಟು. ಅವರು ಈ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಮಾಡಲು ಆದ್ಯತೆ ನೀಡುತ್ತಾರೆ. ಈ ಮೊದಲು ಅವರು ಹಲವು ಸಿನಿಮಾಗಳನ್ನು ಈ ದಿನ ರಿಲೀಸ್ ಮಾಡಿ ಗೆದ್ದಿದ್ದಾರೆ. 2025ರಲ್ಲಿ ‘ಸಿಖಂದರ್’ ಸಿನಿಮಾ ರಿಲೀಸ್ ಮಾಡುವ ಉದ್ದೇಶ ಇಟ್ಟುಕೊಂಡಿದ್ದಾರೆ. ಆದರೆ, 2026ರ ಈದ್ ಹಬ್ಬವನ್ನು ಅವರು ಮಿಸ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಸದ್ಯ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಈ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಲಿದ್ದಾರೆ. ಈ ಚಿತ್ರ 2025ರ ಈದ್​ಗೆ ರಿಲೀಸ್ ಆಗಲಿದೆ. ಆ ಬಳಿಕ ಅವರು ಅಟ್ಲೀ ಸಿನಿಮಾ ನಿರ್ದೇಶನದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ನಟಿಸುತ್ತಿದ್ದಾರೆ. 2025ರಲ್ಲಿ ಅವರು ಸಂಪೂರ್ಣವಾಗಿ ಅಟ್ಲಿ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಇದರ ವಿಎಫ್​ಎಕ್ಸ್ ಕೆಲಸಗಳು ಹೆಚ್ಚಿರಲಿದ್ದು, 2026ರ ಮಧ್ಯಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಹೀಗಾಗಿ, ಅವರಿಗೆ ಹಬ್ಬ ಮಿಸ್ ಆಗಲಿದೆ.

ಇನ್ನು, 2026ರ ಈದ್​ಗೆ ಹಲವು ಸಿನಿಮಾಗಳು ಬರೋಕೆ ರೆಡಿ ಆಗಿವೆ. ಶಾರುಖ್ ಖಾನ್ ನಟನೆಯ ‘ಕಿಂಗ್’, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಸಿನಿಮಾ ಕೂಡ ಇದೇ ದಿನಾಂಕದಂದು ಬರುತ್ತಿವೆ. ಇವುಗಳ ಜೊತೆ ಕ್ಲ್ಯಾಶ್ ಬೇಡ ಎಂದು ಸಲ್ಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು

ಈ ವರ್ಷ ಈದ್​ಗೆ ಸಲ್ಲು ಸಿನಿಮಾ ರಿಲೀಸ್ ಆಗಿಲ್ಲ. ಆದರೆ, ಅವರು ಹೊಸ ಸಿನಿಮಾ ಅನೌನ್ಸ್ ಮಾಡಿ ಅಪ್​ಡೇಟ್ ಕೊಟ್ಟರು. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರದ ನಾಯಕಿ. ಸದ್ಯ ಈ ಸಿನಿಮಾಗೆ ಶೂಟ್​ ನಡೆಯುತ್ತಿದೆ. ವಿದೇಶದಲ್ಲಿ ಶೂಟ್ ನಡೆಯಬೇಕಿದೆ. ಎಆರ್​ ಮುರುಗದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ