ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಜಾಕ್ವೆಲಿನ್​ ಲಿಂಕ್ ಹೊಂದಿದ್ದರು ಎನ್ನಲಾಗಿದೆ.

ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್
ಸಲ್ಮಾನ್​-ಜಾಕ್ವೆಲಿನ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 05, 2021 | 8:16 PM

ಸಲ್ಮಾನ್​ ಖಾನ್​ ಹಾಗೂ ಜಾಕ್ವೆಲಿನ್​ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಹಲವು ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಜೋಡಿ ಅನೇಕ ಕಡೆಗಳಿಗೆ ಒಟ್ಟಾಗಿ ತೆರಳಿದ್ದಿದೆ. ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಆದರೆ, ಈಗ ಜಾಕ್ವೆಲಿನ್​ ಅವರಿಂದ ಅಂತರ ಕಾಯ್ದುಕೊಳ್ಳುವ ನಿರ್ಧಾರಕ್ಕೆ ಸಲ್ಮಾನ್​ ಖಾನ್​ ಬಂದಿದ್ದಾರೆ. ಇದಕ್ಕೆ ಕಾರಣವಾಗಿದ್ದು ಅವರು ಮಾಡಿಕೊಂಡ ಎಡವಟ್ಟು.

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಜಾಕ್ವೆಲಿನ್​ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದಕ್ಕೆ ಸಾಕ್ಷ್ಯ ಎಂಬಂತೆ ಸುಕೇಶ್​ ಹಾಗೂ ಈ ನಟಿಯ ಕಿಸ್ಸಿಂಗ್​ ಫೋಟೋಗಳು ಲೀಕ್​ ಆಗಿವೆ. ಇದರಿಂದ ಈ ಪ್ರಕರಣ ಮತ್ತಷ್ಟು ಬಿಗಿಯಾಗಿದೆ.

ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ನಿರ್ಧರಿಸಿದೆ. ಈ ಕಾರಣಕ್ಕೆ ಅವರು ಈಗ ವಿದೇಶಕ್ಕೆ ತೆರಳುವಂತಿಲ್ಲ. ಡಿಸೆಂಬರ್​ 10ಕ್ಕೆ ರಿಯಾದ್​ನಲ್ಲಿ Da-bangg ಕಾರ್ಯಕ್ರಮ ಇದೆ. ಇದಕ್ಕೆ ಸಲ್ಮಾನ್​ ಖಾನ್​ ಹಾಗೂ ಜಾಕ್ವೆಲಿನ್​ ಒಟ್ಟಾಗಿ ತೆರಳಬೇಕಿತ್ತು. ಆದರೆ, ಜಾಕ್ವೆಲಿನ್​ ಮಾಡಿಕೊಂಡ ಎಡವಟ್ಟಿನಿಂದ ಅವರಿಗೆ ವಿದೇಶಕ್ಕೆ ತೆರಳೋಕೆ ಆಗುತ್ತಿಲ್ಲ. ಹೀಗಾಗಿ, ಅವರನ್ನು ದೂರ ಇಡಲು ಸಲ್ಲು ನಿರ್ಧರಿಸಿದ್ದಾರೆ. ಈ ಮಧ್ಯೆ ಜಾಕ್ವೆಲಿನ್​ ಇಂದು (ಡಿಸೆಂಬರ್​ 5) ದುಬೈಗೆ ಹಾರುವ ಪ್ರಯತ್ನ ಮಾಡಿದ್ದರು. ಈ ವೇಳೆ ಮುಂಬೈನ ವಿಮಾನ ನಿಲ್ದಾಣದಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದಾರೆ.

Da-bangg ಕಾರ್ಯಕ್ರಮಕ್ಕೆ ಎಂಟ್ರಿ ಪಡೆಯೋಕೆ ಅಭಿಮಾನಿಗಳು ಟಿಕೆಟ್​ ಪಡೆಯಬೇಕು. ಈ ಕಾರ್ಯಕ್ರಮದಲ್ಲಿ ಸಲ್ಮಾನ್​ ಖಾನ್​ ಹಾಗೂ ಮತ್ತಿತರರು ಡ್ಯಾನ್ಸ್​ ಮಾಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಡಿಸೆಂಬರ್​ 10ರಂದು ರಿಯಾದ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ರೊಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ. ಅಕ್ಟೋಬರ್​​ನಲ್ಲಿ ಜಾರಿ ನಿರ್ದೇಶನಾಲಯದಿಂದ ಜಾಕ್ವೆಲಿನ್ ಫರ್ನಾಂಡಿಸ್​​ಗೆ ಸಮನ್ಸ್ ನೀಡಲಾಗಿತ್ತು.

ಇದನ್ನೂ ಓದಿ: ಬಹುಕೋಟಿ ವಂಚನೆ ಆರೋಪಿ ಜತೆ ಜಾಕ್ವೆಲಿನ್​ ಲವ್ವಿಡವ್ವಿಗೆ ಸಿಕ್ತು ಇನ್ನಷ್ಟು ಫೋಟೋಗಳ ಸಾಕ್ಷಿ

ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

Published On - 8:03 pm, Sun, 5 December 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ