AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್​ನ ಐಶ್ವರ್ಯಾ​ ಮದುವೆ ಆದ ಬಗ್ಗೆ ಸಲ್ಲುಗೆ ಇತ್ತು ಖುಷಿ; ಇಲ್ಲಿದೆ ವಿಡಿಯೋ

ಐಶ್ವರ್ಯಾ ರೈ ಹಾಗೂ ಸಲ್ಮಾನ್ ಖಾನ್ ಒಂದೇ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವವರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ನಂತರ ಅದು ಪ್ರೀತಿಗೆ ತಿರುಗಿತ್ತು. ಹಲವು ವರ್ಷಗಳ ಕಾಲ ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ಸುತ್ತಾಡಿದರು. ಆದರೆ, ಸಲ್ಲುಗೆ ಸಂಬಂಧವನ್ನು ಸರಿಯಾಗಿ ಇಟ್ಟುಕೊಂಡು ಹೋಗಲು ಸಾಧ್ಯವೇ ಆಗಿಲ್ಲ. ಅವರ ಸಂಬಂಧ ಮುರಿದು ಬಿತ್ತು.

ಅಭಿಷೇಕ್​ನ ಐಶ್ವರ್ಯಾ​ ಮದುವೆ ಆದ ಬಗ್ಗೆ ಸಲ್ಲುಗೆ ಇತ್ತು ಖುಷಿ; ಇಲ್ಲಿದೆ ವಿಡಿಯೋ
ಅಭಿಷೇಕ್​ ಬಚ್ಚನ್​. ಐಶ್ವರ್ಯಾ ರೈ, ಸಲ್ಮಾನ್​ ಖಾನ್
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on:Feb 11, 2024 | 9:50 AM

Share

ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ (Aishwarya Rai) ರಿಲೇಶನ್​ಶಿಪ್​ನಲ್ಲಿ ಇದ್ದರು. ನಂತರ ಇವರ ರಿಲೇಶನ್​ಶಿಪ್ ಕೊನೆ ಆಯಿತು. ಸಲ್ಮಾನ್ ಖಾನ್ (Salman Khan) ಇನ್ನೂ ಬ್ಯಾಚುಲರ್. ಐಶ್ವರ್ಯಾ ರೈಗೆ ಮದುವೆ ಆಗಿ ಮಗಳಿದ್ದಾಳೆ. ಇವರ ಸಂಬಂಧದ ಬಗ್ಗೆ ಹುಟ್ಟಿಕೊಂಡ ಚರ್ಚೆಗಳು ಕೊನೆಯಾಗುವಂಥದ್ದಲ್ಲ. ಇವರ ಸಂಬಂಧ ಕೊನೆಗೊಂಡು ಎರಡು ದಶಕಗಳೇ ಕಳೆದಿವೆ. ಆದಾಗ್ಯೂ ಇವರ ಕುರಿತ ಚರ್ಚೆ ಹಾಗೂ ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಹರಿದಾಡುವುದು ನಿಂತಿಲ್ಲ. ಅಭಿಷೇಕ್ (Abhishek Bachchan) ಅವರನ್ನು ಐಶ್ವರ್ಯಾ ಮದುವೆ ಆದ ಬಳಿಕ ಸಲ್ಮಾನ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದರು. ಆ ವಿಡಿಯೋ ಈಗ ಅಭಿಮಾನಿಗಳ ವಲಯದಲ್ಲಿ ಮತ್ತೆ ವೈರಲ್ ಆಗುತ್ತಿದೆ.

ಲವ್ ಸ್ಟೋರಿ

ಐಶ್ವರ್ಯಾ ರೈ ಹಾಗೂ ಸಲ್ಮಾನ್ ಖಾನ್ ಒಂದೇ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವವರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ನಂತರ ಅದು ಪ್ರೀತಿಗೆ ತಿರುಗಿತ್ತು. ಹಲವು ವರ್ಷಗಳ ಕಾಲ ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ಸುತ್ತಾಡಿದರು. ಆದರೆ, ಸಲ್ಲುಗೆ ಸಂಬಂಧವನ್ನು ಸರಿಯಾಗಿ ಇಟ್ಟುಕೊಂಡು ಹೋಗಲು ಸಾಧ್ಯವೇ ಆಗಿಲ್ಲ. ಅವರ ಸಂಬಂಧ ಮುರಿದು ಬಿತ್ತು. ಇದಕ್ಕೆ ಕಾರಣವಾಗಿದ್ದು ಸಲ್ಮಾನ್ ಖಾನ್ ಅವರ ಕೋಪ ಎನ್ನಲಾಗಿದೆ. ಸಲ್ಮಾನ್ ಖಾನ್ ಅವರು ಐಶ್ವರ್ಯಾ ರೈ ವಿರುದ್ಧ ಸಿಟ್ಟಾಗಿದ್ದರು. ಮನೆಗೆ ತೆರಳಿ ಅವರು ವಸ್ತುಗಳನ್ನು ಹಾಳು ಮಾಡಿದ್ದರು. ಐಶ್ವರ್ಯಾ ಮೇಲೆ ಕೈ ಕೂಡ ಮಾಡಿದ್ದರು ಎನ್ನಲಾಗಿದೆ.

ಬ್ರೇಕಪ್ ಬಳಿಕ ಮಾತು

ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ಬೇರೆ ಆಗಿ ಹಲವು ವರ್ಷಗಳ ಕಳೆದ ಬಳಿಕ ಸಲ್ಮಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದರು. ‘ಐಶ್ವರ್ಯಾ ಅವರು ಅಭಿಷೇಕ್ ಅವರನ್ನು ಮದುವೆ ಆಗಿದ್ದಕ್ಕೆ ಖುಷಿ ಆಗಿದೆ. ಅಭಿಷೇಕ್ ಒಳ್ಳೆಯ ವ್ಯಕ್ತಿ. ಅವರು ಖುಷಿ ಆಗಿದ್ದಾರೆ. ಯಾವುದೇ ಎಕ್ಸ್ ಬಾಯ್​ಫ್ರೆಂಡ್ ಇದನ್ನೇ ನಿರೀಕ್ಷಿಸೋದು’ ಎಂದು ಅವರು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿದೆ.

ಬೆದರಿಕೆ ಹಾಕಿದ್ದ ಸಲ್ಲು?

ಸಲ್ಮಾನ್ ಖಾನ್ ಜೊತೆಗಿನ ಬ್ರೇಕಪ್ ಬಳಿಕ ಐಶ್ವರ್ಯಾ ರೈ ಅವರು ವಿವೇಕ್ ಒಬೆರಾಯ್ ಜೊತೆ ಸುತ್ತಾಟ ನಡೆಸಿದ್ದರು ಎನ್ನಲಾಗಿದೆ. ಇದು ಸಲ್ಲು ಕೋಪಕ್ಕೆ ಕಾರಣ ಆಗಿತ್ತು. ಸಲ್ಮಾನ್ ಖಾನ್ ಅವರು ವಿವೇಕ್ ವೃತ್ತಿ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರಿದರು ಎನ್ನಲಾಗಿದೆ. ಬೇಡಿಕೆಯ ಹೀರೋ ಆಗಿದ್ದ ವಿವೇಕ್ ನಂತರ ಸಿನಿಮಾ ಆಫರ್ ಸಿಗದೆ ಪರದಾಡಬೇಕಾಯಿತು. ಇದಕ್ಕೆ ಸಲ್ಮಾನ್ ಖಾನ್ ಕಾರಣ ಎನ್ನಲಾಗಿದೆ.

ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಿನಿಮಾ ವಿವರ

ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ ಅವರು ಒಟ್ಟಾಗಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. 1999ರಲ್ಲಿ ರಿಲೀಸ್ ಆದ ‘ಹಮ್ ದಿಲ್​ ದೇ ಚುಕೆ ಸನಮ್’ ಇವರು ನಟಿಸಿದ ಮೊದಲ ಸಿನಿಮಾ. ಇದಾದ ಬಳಿಕ ‘ದಾಯಿ ಅಕ್ಷರ್ ಪ್ರೇಮ್ ಕೆ’ ಚಿತ್ರದಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡರು. 2002ರಲ್ಲಿ ರಿಲೀಸ್ ಆದ ‘ಹಮ್ ತುಮಾರೆ ಹೈ ಸನಮ್’ ಚಿತ್ರದಲ್ಲಿ ನಟಿಸಿದರು. ನಂತರ ಸಲ್ಲು ಹಾಗೂ ಐಶ್ವರ್ಯಾ ಒಟ್ಟಾಗಿ ಸಿನಿಮಾ ಮಾಡಿಲ್ಲ. ಹಲವು ಪಾರ್ಟಿಗಳಲ್ಲಿ ಇವರು ಭೇಟಿ ಆಗುವ ಸಂದರ್ಭ ಬಂದಾಗಲೂ ಅದರಿಂದ ತಪ್ಪಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:49 am, Sun, 11 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!