AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಶಾರುಖ್ ಒಡೆತನದ ‘ಮನ್ನತ್’ ನಿವಾಸ ಸಲ್ಲುದಾಗುತ್ತಿತ್ತು

ಶಾರುಖ್ ಖಾನ್ ಹಾಗೂ ಗೌರಿ ಖಾನ್ 2001ರಲ್ಲಿ ಈ ಮನೆ ಖರೀದಿ ಮಾಡಿದ್ದರು. ಸಾಕಷ್ಟು ಸಾಲ ಮಾಡಿ ಈ ಮನೆಯನ್ನು ಅವರು ಕೊಂಡುಕೊಂಡಿದ್ದರು. ಈ ಮನೆ ಈಗ ಸುಮಾರು 200 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತಿದೆ.   

ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಶಾರುಖ್ ಒಡೆತನದ ‘ಮನ್ನತ್’ ನಿವಾಸ ಸಲ್ಲುದಾಗುತ್ತಿತ್ತು
ಶಾರುಖ್-ಸಲ್ಲು
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 27, 2024 | 7:30 AM

Share

ಶಾರುಖ್ ಖಾನ್ (Shah Rukh Khan) ಅವರು ಇಂದು ಸಾವಿರಾರು ಕೋಟಿ ರೂಪಾಯಿ ಒಡೆಯ. ದುಬಾರಿ ಕಾರು, ಐಪಿಎಲ್ ಟೀಂ, ನಿರ್ಮಾಣ ಸಂಸ್ಥೆ ಹೀಗೆ ಹಣ ಮಾಡಲು ಏನೇನು ಬೇಕೋ ಅದೆಲ್ಲವನ್ನೂ ಮಾಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಂಬೈನಲ್ಲಿ ಅವರು ಐಷಾರಾಮಿ ಮನೆ ಹೊಂದಿದ್ದು, ‘ಮನ್ನತ್’ ಎಂದು ಹೆಸರು ಇಟ್ಟಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ನಿವಾಸ ಸಲ್ಮಾನ್ ಖಾನ್​ದಾಗುತ್ತಿತ್ತು. ಆದರೆ, ತಂದೆ ಇದಕ್ಕೆ ನಿರಾಕರಿಸಿದ್ದರಿಂದ ಸಲ್ಮಾನ್ ಖಾನ್ ಆ ಬಗ್ಗೆ ಆಸಕ್ತಿ ತೋರಿಸಿಲ್ಲ.

ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ‘ಪಠಾಣ್’ ಚಿತ್ರದಲ್ಲಿ ಸಲ್ಲು ಅತಿಥಿ ಪಾತ್ರ ಮಾಡಿದರೆ, ಸಲ್ಮಾನ್ ನಟನೆಯ ‘ಟೈಗರ್ 3’ ಚಿತ್ರದಲ್ಲಿ ಶಾರುಖ್ ಖಾನ್ ಅವರು ನಟಿಸಿದ್ದರು. ಇವರು ಒಟ್ಟಾಗಿ ‘ಟೈಗರ್ vs ಪಠಾಣ್’ ಸಿನಿಮಾದಲ್ಲಿ ನಟಿಸಲಿದ್ದಾರಂತೆ. ಈ ಮೊದಲು ನೀಡಿದ ಸಂದರ್ಶನ ಒಂದರಲ್ಲಿ ಸಲ್ಮಾನ್ ಖಾನ್ ಅವರು ಮನ್ನತ್ ಬಗ್ಗೆ ಮಾತನಾಡಿದ್ದರು.

‘ಶಾರುಖ್ ಖಾನ್ ಅವರಲ್ಲಿರುವ ಯಾವ ವಸ್ತು ನಿಮಗೆ ಬೇಕು ಎಂದನಿಸುತ್ತದೆ’ ಎಂದು ಸಲ್ಲುಗೆ ಕೇಳಲಾಯಿತು. ಈ ವೇಳೆ ಅವರು ಯೋಚಿಸದೇ ‘ಮನ್ನತ್’ ಹೆಸರನ್ನು ಹೇಳಿದ್ದಾರೆ. ‘ಆ ಮನೆಯ ಆಫರ್ ನನಗೆ ಮೊದಲು ಬಂದಿತ್ತು. ಆಗ ನನ್ನ ತಂದೆ (ನಿರ್ಮಾಪಕ ಹಾಗೂ ಬರಹಗಾರ ಸಲೀಂ ಖಾನ್) ಇಷ್ಟೊಂದು ದೊಡ್ಡ ಮನೆ ಇಟ್ಟುಕೊಂಡು ಏನು ಮಾಡ್ತೀಯಾ ಎಂದು ಕೇಳಿದರು. ನಾನು ಶಾರುಖ್ ಖಾನ್ ಬಳಿ ಇದೇ ಪ್ರಶ್ನೆ ಕೇಳಬೇಕು ಎಂದುಕೊಂಡಿದ್ದೇನೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದರು.

ಇದನ್ನೂ ಓದಿ: ಸಲ್ಮಾನ್​ ಖಾನ್ ಮನೆ ಎದುರು ಗುಂಡಿನ ದಾಳಿ ಪ್ರಕರಣ, ಶೂಟರ್​ಗಳಿಗೆ ಬಂದೂಕು ನೀಡಿದ್ದ ಇಬ್ಬರ ಬಂಧನ

ಶಾರುಖ್ ಖಾನ್ ಹಾಗೂ ಗೌರಿ ಖಾನ್ 2001ರಲ್ಲಿ ಈ ಮನೆ ಖರೀದಿ ಮಾಡಿದ್ದರು. ಸಾಕಷ್ಟು ಸಾಲ ಮಾಡಿ ಈ ಮನೆಯನ್ನು ಅವರು ಕೊಂಡುಕೊಂಡಿದ್ದರು. ಈ ಮನೆ ಈಗ ಸುಮಾರು 200 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್