AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು

Salman Khan: ಸಲ್ಮಾನ್ ಖಾನ್ ಬಳಿ ಹಲವು ಐಶಾರಾಮಿ ವಸ್ತುಗಳಿವೆ. ದೊಡ್ಡ ಸಂಖ್ಯೆಯ ದುಬಾರಿ ಕಾರುಗಳಿವೆ. ಆದರೆ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಧರಿಸಿರುವುದು ವಿಶ್ವದ ಅತ್ಯಂತ ದುಬಾರಿ ವಾಚುಗಳಲ್ಲಿ ಒಂದು.

ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 12, 2024 | 3:03 PM

Share

ಸಲ್ಮಾನ್ ಖಾನ್ ಅವರು ಯಾವಾಗಲೂ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಇತ್ತೀಚೆಗೆ ಜಾಕೋಬ್ ಅರಾಬೋ ಕಂಪನಿಯ ವಾಚ್ ಧರಿಸಿದ್ದರು. ವಾಚ್ನ ಧರಿಸಿ ಅವರು ಪೋಸ್ ಕೊಟ್ಟಿದ್ದಾರೆ. ಇದು ಬಿಲಿಯನೇರ್ III ವಾಚ್ ಅನ್ನೋದು ವಿಶೇಷ. ಇದರಲ್ಲಿ ನೂರಾರು ಡೈಮಂಡ್ಸ್ ಇದೆ. ಜಾಕೋಬ್ ಅವರೇ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿದೆ.

ಜಾಕೋಬ್ ಅವರು ಸಲ್ಲುಗೆ ವಾಚ್ ತೊಡಿಸುತ್ತಿರುವ ಫೋಟೋ ವೈರಲ್ ಆಗಿದೆ. ನಂತರ ಸಲ್ಲು ಅವರು ವಾಚ್ನ ಕ್ಯಾಮೆರಾಗೆ ಶೋ ಮಾಡಿದ್ದಾರೆ. ಯಾರಿಗೂ ಈ ವಾಚ್ನ ಧರಿಸೋಕೆ ನಾನು ಅವಕಾಶ ನೀಡುವುದಿಲ್ಲ ಎಂದಿರುವ ಅವರು ಸಲ್ಲು ಮೇಲಿನ ವಿಶೇಷ ಗೌರವದಿಂದಾಗಿ ಅವರು ವಿಶೇಷವಾಗಿ ಈ ಅವಕಾಶ ನೀಡಿದ್ದಾರೆ.

ಇದನ್ನೂ ಓದಿ:ಐಶ್ವರ್ಯಾ ಜೊತೆ ಡೇಟಿಂಗ್; ವಿವೇಕ್ ಒಬೆರಾಯ್ ಕರಿಯರ್ ಮುಗಿಸಿದ್ದ ಸಲ್ಮಾನ್ ಖಾನ್  

ಈ ವಾಚ್ನಲ್ಲಿ 152 ವೈಟ್ ಡೈಮಂಡ್ಸ್ ಇದೆ. ಪ್ರತಿ ಸೆಗ್ಮೆಂಟ್ನಲ್ಲಿ 76 ಡೈಮಂಡ್ಸ್ ಇದೆ. ಬ್ರೆಸ್ಲೆಟ್ನಲ್ಲಿ 504 ಡೈಮಂಡ್ಗಳು ಇವೆ. ಇದು ಸೇರಿದಂತೆ ವಾಚ್ನಲ್ಲಿ 714 ಡೈಮಂಡ್ಸ್ ಇವೆ. ಈ ವಾಚ್ನ ಬೆಲೆ 41.5 ಕೋಟಿ ರೂಪಾಯಿ ಎನ್ನಲಾಗಿದೆ. ಈ ವಿಡಿಯೋ ನೋಡಿ ಅನೇಕರು ಅಚ್ಚರಿಪಟ್ಟಿದ್ದಾರೆ. ಈ ವಾಚ್ ಮಾರಿದರೆ ಏನಿಲ್ಲವೆಂದರೂ 5 ರೋಲ್ಸ್ ರಾಯ್ಸ್ ಬರುತ್ತದೆ ಎಂದು ಅನೇಕರು ಹೇಳಿದ್ದಾರೆ.

ಸಲ್ಮಾನ್ ಖಾನ್ ಅವರು ಈ ವಾಚ್ನ ಖರೀದಿ ಮಾಡಿಲ್ಲ. ಅದನ್ನು ಧರಿಸಿ ಪೋಸ್ ಕೊಟ್ಟಿದ್ದಾರಷ್ಟೇ. ಹಾಗಂತ ಸಲ್ಲು ಮನಸ್ಸು ಮಾಡಿದರೆ ಇಷ್ಟು ದುಬಾರಿ ವಾಚ್ನ ಖರೀದಿಸೋದು ಅವರಿಗೆ ಎಷ್ಟು ಹೊತ್ತಿನ ಕೆಲಸವೂ ಅಲ್ಲ. ಸಲ್ಮಾನ್ ಖಾನ್ ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಜಿದ್ ನಾಡಿಯಾದ್ವಾಲಾ ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಎಆರ್ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಅಟ್ಲಿ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ