AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಖಂದರ್’ ಸಿನಿಮಾದಲ್ಲಿ ಆ್ಯಂಗ್ರಿ ಯಂಗ್​ಮ್ಯಾನ್ ಲುಕ್​ನಲ್ಲಿ ಸಲ್ಲು

Salman Khan: ಸಲ್ಮಾನ್ ಖಾನ್, ‘ಸಿಖಂಧರ್’ ಹೆಸರಿನ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾದಲ್ಲಿ ‘ಆಂಗ್ರಿ ಯಂಗ್ ಮ್ಯಾನ್’ ಲುಕ್​ನಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

‘ಸಿಖಂದರ್’ ಸಿನಿಮಾದಲ್ಲಿ ಆ್ಯಂಗ್ರಿ ಯಂಗ್​ಮ್ಯಾನ್ ಲುಕ್​ನಲ್ಲಿ ಸಲ್ಲು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 07, 2024 | 7:28 PM

Share

ಸಲ್ಮಾನ್ ಖಾನ್ ಹಾಗೂ ಸಾಜಿದ್ ನಾಡಿಯಾವಾಲಾ ಈ ಮೊದಲಿನಿಂದಲೂ ಒಟ್ಟಾಗಿ ಹಲವು ಸಿನಿಮಾ ಮಾಡಿದ್ದಾರೆ. ಇವರ ಗೆಳೆತನ ದಶಕದ ಹಳೆಯದು. ಇಬ್ಬರ ಮಧ್ಯೆ ಯಾವುದೇ ಕಿರಿಕ್ ಆಗಿಲ್ಲ. ಅವರ ಒಟ್ಟಾಗಿ ಕೆಲಸ ಮಾಡಿದ್ದು ‘ಕಿಕ್’ ಸಿನಿಮಾದಲ್ಲಿ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಈ ಚಿತ್ರಕ್ಕೆ ಫ್ಯಾನ್ಸ್ ಸೀಕ್ವೆಲ್ ಕೇಳುತ್ತಿದ್ದಾರೆ. ಇದಕ್ಕೂ ಮೊದಲು ಸಲ್ಲು ಹಾಗೂ ಸಾಜಿದ್ ‘ಸಿಖಂದರ್’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಎಆರ್ ಮುರುಗದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಆ್ಯಂಗ್ರಿ ಯಂಗ್ ಮ್ಯಾನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಸಲ್ಮಾನ್ ಖಾನ್.

ಸಲ್ಮಾನ್ ಖಾನ್ ‘ಸಿಖಂದರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಸಿನಿಮಾದಲ್ಲಿ ಸಂಪೂರ್ಣ ಪವರ್ ತೋರಿಸಲಿದ್ದಾರೆ. ಈ ಮೊದಲಿನ ಸಿನಿಮಾಗಳಲ್ಲಿ ಸಲ್ಲು ಅವರು ಫನ್ ಆಗಿಯೂ ತೋರಿಸಲಾಗುತ್ತಿತ್ತು. ಆದರೆ, ಈ ಚಿತ್ರದಲ್ಲಿ ಆ ರೀತಿ ಇಲ್ಲ. ಸಖತ್ ಫೈಟ್ ದೃಶ್ಯಗಳು ಇರಲಿದ್ದು, ಇದರ ಜೊತೆಗೆ ಒಂದು ಸಂದೇಶ ಕೂಡ ಇರಲಿದೆ.

ಇದನ್ನೂ ಓದಿ:ಐಶ್ವರ್ಯಾ ಜೊತೆ ಡೇಟಿಂಗ್; ವಿವೇಕ್ ಒಬೆರಾಯ್ ಕರಿಯರ್ ಮುಗಿಸಿದ್ದ ಸಲ್ಮಾನ್ ಖಾನ್  

ಎಆರ್ ಮುರುದಾಸ್ ಸಿನಿಮಾದಲ್ಲಿ ಸಖತ್ ಆ್ಯಕ್ಷನ್ ಇರಲಿದೆ. ಜೊತೆಗೆ ಎಂಟರ್ಟೇನ್ಮೆಂಟ್ ಕೂಡ ಹೆಚ್ಚೇ ಇರಲಿದೆ. ಸಲ್ಮಾನ್ ಖಾನ್ ಅವರನ್ನು ಆ್ಯಂಗ್ರಿ ಯಂಗ್ ಮ್ಯಾನ್ ಲುಕ್ನಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾದಲ್ಲಿ ಜನರಿಗಾಗಿ, ಅವರ ಹಕ್ಕಿಗಾಗಿ ಸಲ್ಲು ಹೋರಾಟ ಮಾಡಲಿದ್ದಾರಂತೆ.

2025ರ ಈದ್ಗೆ ‘ಸಿಖಂದರ್’ ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚಿನ ವರ್ಷಗಳಲ್ಲಿ ಸಲ್ಮಾನ್ ಖಾನ್ಗೆ ದೊಡ್ಡ ಗೆಲುವು ಸಿಕ್ಕಿಲ್ಲ. ಅವರ ಗೆಲುವ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆಯೂ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅವರ ಪಾತ್ರ ಹೇಗೆ ಇರಲಿದೆ ಎನ್ನುವ ಬಗ್ಗೆ ಇನ್ನೂ ರಿವೀಲ್ ಆಗಿಲ್ಲ.

ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ವಿಡಿಯೋ ವೈರಲ್ ಆಗಿತ್ತು. ಅವರು ಆ್ಯಕ್ಷನ್ ಸಿನಿಮಾ ಮಾಡಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗಿತ್ತು. ಇನ್ನು ಸಲ್ಲು ಅವರು ಹಿಂದಿ ಬಿಗ್ ಬಾಸ್ ಹೊಸ ಸೀಸನ್ ಕೂಡ ನಡೆಸಿಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?