AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಕೈಫ್ – ವಿಕ್ಕಿ ಕೌಶಲ್​ ಮದುವೆಗೆ ಸೆಕ್ಯುರಿಟಿ ಒದಗಿಸಲಿರುವ ಸಲ್ಮಾನ್​ ಖಾನ್​ ಬಾಡಿಗಾರ್ಡ್

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್ ಮದುವೆಗೆ ಬಾಲಿವುಡ್ ಬಾದ್​ಶಾ ಸಲ್ಮಾನ್​ ಖಾನ್​ ಅವರ ವಯಕ್ತಿಕ ಬಾಡಿಗಾರ್ಡ್ ಗುರ್ಮಿತ್​ ಸಿಂಗ್(ಶೇರಾ) ಭದ್ರತೆ ಒದಗಿಸುತ್ತಿದ್ದಾರೆ. ರಾಜಸ್ಥಾನದ ಸಾವಿ ಮಾಧೊಪುರದಲ್ಲಿರುವ ಸಿಕ್ಸ್ ಸೆನ್ಸಸ್ ಪೋರ್ಟ್​ನಲ್ಲಿ ಕತ್ರಿನಾ ವಿಕ್ಕಿ ಕೌಶಲ್ ಮದುವೆ ನಡೆಯಲಿದೆ.

ಕತ್ರಿನಾ ಕೈಫ್ - ವಿಕ್ಕಿ ಕೌಶಲ್​ ಮದುವೆಗೆ ಸೆಕ್ಯುರಿಟಿ ಒದಗಿಸಲಿರುವ ಸಲ್ಮಾನ್​ ಖಾನ್​ ಬಾಡಿಗಾರ್ಡ್
ಬಾಡಿಗಾರ್ಡ್​ ಶೇರಾನೊಂದಿಗೆ ಸಲ್ಮಾನ್​ ಖಾನ್​
TV9 Web
| Edited By: |

Updated on: Dec 07, 2021 | 4:23 PM

Share

ಹಸಮಣೆ ಏರಲು ಸಜ್ಜಾದ ಬಾಲಿವುಡ್​ ಜೋಡಿ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್ ಮದುವೆಗೆ ಬಾಲಿವುಡ್ ಬ್ಯಾಡ್​ಬಾಯ್​ ಸಲ್ಮಾನ್​ ಖಾನ್​ ಅವರ ವಯಕ್ತಿಕ ಬಾಡಿಗಾರ್ಡ್ ಗುರ್ಮಿತ್​ ಸಿಂಗ್(ಶೇರಾ) ಭದ್ರತೆ ಒದಗಿಸುತ್ತಿದ್ದಾರೆ. ರಾಜಸ್ಥಾನದ ಸಾವಿ ಮಾಧೊಪುರದಲ್ಲಿರುವ ಸಿಕ್ಸ್ ಸೆನ್ಸಸ್ ಪೋರ್ಟ್​ನಲ್ಲಿ ಕತ್ರಿನಾ ವಿಕ್ಕಿ ಕೌಶಲ್ ಮದುವೆ ನಡೆಯಲಿದೆ. ಡಿ.9ರಂದು ಮದುವೆ ನಡೆಯಲಿದೆ. ಈಗಾಗಲೇ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್​ ಸೇರಿದಂತೆ ಅವರ ಕುಟುಂಬ ರಾಜಸ್ಥಾನಕ್ಕೆ ತೆರಳಿದೆ. ರಾಜಸ್ಥಾನದ ಸಿಕ್ಸ್ ಸೆನ್ಸಸ್ ಪೋರ್ಟ್ ಖಾಸಗಿ ಹೊಟೇಲ್​ನಲ್ಲಿ ಮದುವೆಗೆ ಅದ್ದೂರಿ ತಯಾರಿ ನಡೆದಿದೆ.

ನಾಳೆ ಮೆಹಂದಿ ಕಾರ್ಯಕ್ರಮ ನಡೆಯಲಿದೆ.  ಇಂದು ಸಂಗೀತ ಕಾರ್ಯಕ್ರಮ ನಡೆಯಲಿದ್ದು, ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿರುವ ಕತ್ರಿನಾ ಕೈಪ್​ ಹಾಘೂ ವಿಕ್ಕಿ ಕೌಶಲ್​ ಹೆಜ್ಜೆ ಹಾಕಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ನಟ ಸಲ್ಮಾನ್​ ಖಾನ್ ವಯಕ್ತಿಕ ಬಾಡಿಗಾರ್ಡ್​ ಸೆಕ್ಯುರಿಟಿ ನೀಡಲಿದ್ದಾರೆ. ಶೇರಾ ತಮ್ಮದೇ ಆದ ಸೆಕ್ಯುರಿಟಿ ತಂಡವನ್ನು ಹೊಂದಿದ್ದಾರೆ. ಆ ಮೂಲಕ ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಮದುವೆಗೆ ಭದ್ರತೆ ನೀಡುತ್ತಿದ್ದಾರೆಇದರ ಜತೆಗೆ  ಡಿ.9ರವರೆಗೆ ವಿವಾಹ ನಡೆಯುವ ಸ್ಥಳದ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ. ಕತ್ರಿನಾ ವಿಕ್ಕಿ ಮದುವೆಗೆ 120 ಜನರನ್ನು ಮಾತ್ರ ಆಹ್ವಾನಿಸಲಾಗಿದೆ. ಮದುವೆಯ ಬಳಿಕ ಮುಂಬೈನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕತ್ರಿನಾ ಕೈಫ್ ಹಾಗೂ ಅವರ ಕುಟುಂಬ ಸಲ್ಮಾನ್​ ಖಾನ್​ ಜತೆ ಉತ್ತಮ ಬಾಂದವ್ಯ ಹೊಂದಿದ್ದಾರೆ. ಆದರೂ ತಮಗೆ ಮದುವೆಗೆ ಆಹ್ವಾನ ನೀಡಲಿಲ್ಲ ಎಂದು ಸಲ್ಮಾನ್​ ಸಹೋದರಿ ಅರ್ಪಿತಾ ಆರೋಪಿಸಿದ್ದಾರೆ. ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಮದುವೆಗೆ ಇಟಲಿಯಂದ ವಿಶೇಷವಾಗಿ​ ವೆಡ್ಡಿಂಗ್​ ಕೇಕ್​ ತರಿಸಲಾಗುತ್ತಿದೆ.

ಇನ್ನು ಇವರ ಮದುವೆಯ ವಿಶೇಷವೆಂದರೆ, ಆಹ್ವಾನಿತರಿಗೆ  ಸಮಾರಂಭದಲ್ಲಿ ಮೊಬೈಲ್​ ಬಳಸುವಂತಿಲ್ಲ ಎಂದು ನಿಯಮ ಜಾರಿ ಮಾಡಲಾಗಿದೆ. ಜತೆಗೆ ಯಾವುದೇ ರೀತಿಯ ಫೋಟೋ ಅಥವಾ ವೀಡಿಯೋಗಳನ್ನು ತೆಗೆಯುವುವಂತಿಲ್ಲ , ಯಾವುದೇ ರೀತಿಯ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ ಹಾಗೂ ಸಮಾರಂಭದಲ್ಲಿ ಇರುವಷ್ಟು ಹೊತ್ತು ಹೊರಗಿನವರೊಂದಿಗೆ ಸಂಪರ್ಕದಲ್ಲಿ ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ​​

ಇದನ್ನೂ ಓದಿ:

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ಥಾನ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ ಕೌಶಲ್

Katrina Kaif- Vicky Kaushal: ಕತ್ರೀನಾ- ವಿಕ್ಕಿ ಕೌಶಲ್​ಗೆ ಒಟಿಟಿಯಿಂದ 100 ಕೋಟಿ ರೂಪಾಯಿಯ ಆಫರ್​; ಏಕೆ ಗೊತ್ತಾ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ