AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ನಟಿಸಬೇಕಿದ್ದ 3 ಬಿಗ್ ಬಜೆಟ್ ಚಿತ್ರಗಳಿಗೆ ಬ್ರೇಕ್; ಕುಸಿದು ಹೋಯ್ತಾ ಭಾಯಿಜಾನ್ ಮಾರ್ಕೆಟ್?

ಸಲ್ಮಾನ್ ಖಾನ್ ನಟನೆಯ ಹಲವು ಬೃಹತ್ ಬಜೆಟ್ ಚಿತ್ರಗಳು ನಿರ್ಮಾಣ ಹಂತದಲ್ಲೇ ನಿಂತುಹೋಗಿವೆ. ಅತಿ ಹೆಚ್ಚು ಬಜೆಟ್ ಮತ್ತು ನಿರೀಕ್ಷಿತ ಯಶಸ್ಸು ಸಾಧಿಸಲು ವಿಫಲವಾಗುತ್ತಿರುವುದು ನಿರ್ಮಾಪಕರನ್ನು ಆತಂಕಕ್ಕೀಡು ಮಾಡಿದೆ. 'ಸಿಕಂದರ್' ಚಿತ್ರದ ಯಶಸ್ಸು ಸಲ್ಮಾನ್ ಖಾನ್‌ರ ಭವಿಷ್ಯದ ಚಿತ್ರಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ.

ಸಲ್ಮಾನ್ ನಟಿಸಬೇಕಿದ್ದ 3 ಬಿಗ್ ಬಜೆಟ್ ಚಿತ್ರಗಳಿಗೆ ಬ್ರೇಕ್; ಕುಸಿದು ಹೋಯ್ತಾ ಭಾಯಿಜಾನ್ ಮಾರ್ಕೆಟ್?
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Mar 27, 2025 | 6:58 AM

Share

ಸಲ್ಮಾನ್ ಖಾನ್ (Salman Khan) ಸಿನಿಮಾ ಎಂದರೆ ನಿರ್ಮಾಪಕರು ಕಣ್ಣು ಮುಚ್ಚಿಕೊಂಡು ಹಣ ಹಾಕುತ್ತಿದ್ದ ಕಾಲ ಒಂದಿತ್ತು. ಏಕೆಂದರೆ ಅವರ ಸಿನಿಮಾಗಳು ಒಂದಷ್ಟು ಬಿಸ್ನೆಸ್ ಮಾಡಿಯೇ ಮಾಡುತ್ತವೆ ಎನ್ನುವ ನಂಬಿಕೆ ನಿರ್ಮಾಪಕರಿಗೆ ಇತ್ತು. ಆದರೆ, ಇತ್ತೀಚೆಗೆ ಸಲ್ಮಾನ್ ಖಾನ್ ಸಿನಿಮಾಗಳಿಂದ ನಿರ್ಮಾಪಕ ನಷ್ಟ ಅನುಭವಿಸುತ್ತಾ ಇದ್ದಾನೆ. ಇದು ನಿರ್ಮಾಪಕರನ್ನು ಚಿಂತೆಗೆ ಒಡ್ಡಿದೆ. ಈ ಕಾರಣಕ್ಕೆ ಒಂದಲ್ಲ ಬರೋಬ್ಬರಿ ಮೂರು ಬಿಗ್ ಬಜೆಟ್ ಚಿತ್ರಗಳು ಅರ್ಧಕ್ಕೆ ನಿಂತು ಹೋಗಿವೆ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಅಟ್ಲಿ ಅವರ ಜೊತೆ ಸಲ್ಮಾನ್ ಖಾನ್ ಸಿನಿಮಾ ಮಾಡಬೇಕಿತ್ತು. ಆದರೆ, ಇದು ಸಾಧ್ಯವಾಗಿಲ್ಲ. ‘ಈ ಸಿನಿಮಾ ಸದ್ಯಕ್ಕೆ ಸೆಟ್ಟೇರುತ್ತಿಲ್ಲ. ಈ ಸಿನಿಮಾ ಮಾಡಲು ತುಂಬಾನೇ ಪ್ರಯತ್ನಿಸಿದೆವು. ಸಿನಿಮಾ ನಿಲ್ಲಲು ಕಾರಣ ಸರಿಯಾಗಿ ತಿಳಿದಿಲ್ಲ. ಚಿತ್ರದ ಬಜೆಟ್ ಹೆಚ್ಚಿದ್ದು ಇದಕ್ಕೆ ಕಾರಣ ಎಂದು ನಾನು ಅಂದುಕೊಂಡಿದ್ದೇನೆ. ಚಿತ್ರದ ಬಜೆಟ್ ತುಂಬಾನೇ ಹೆಚ್ಚಿತ್ತು’ ಎಂದಿದ್ದಾರೆ ಸಲ್ಮಾನ್. ಈ ಚಿತ್ರಕ್ಕೆ 600 ಕೋಟಿ ರೂಪಾಯಿ ಅವಶ್ಯಕತೆ ಇತ್ತು ಎನ್ನಲಾಗಿದೆ.

‘ಭಜರಂಗಿ ಭಾಯಿಜಾನ್’ ಚಿತ್ರಕ್ಕೆ ಸೀಕ್ವೆಲ್ ಬರುತ್ತದೆ ಎನ್ನಲಾಗಿತ್ತು. ಆದರೆ, ಈ ಬಗ್ಗೆಯೂ ಅಪ್​ಡೇಟ್ ಇಲ್ಲ. ‘ಸ್ಕ್ರಿಪ್ಟ್ ರೆಡಿ ಆದ ಬಳಿಕ ಮುನ್ನಿ ಈ ಬಗ್ಗೆ ಮಾತನಾಡುತ್ತಾರೆ’ ಎಂದಿದ್ದಾರೆ ಸಲ್ಲು. ಮತ್ತೊಂದು ನಿರೀಕ್ಷಿತ ಚಿತ್ರಗಳಲ್ಲಿ ‘ಟೈಗರ್ vs ಪಠಾಣ್’ ಇದೆ. ಆದರೆ, ಅದು ಕೂಡ ಆಗುತ್ತಿಲ್ಲ. ಇದಕ್ಕೂ ಹೆಚ್ಚಿನ ಸಮಯದ ಅಗತ್ಯವಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ಭೂಮಿ ಮೇಲಿನ ಮೂರು ವಿಶೇಷ ಪ್ರದೇಶಗಳಲ್ಲಿ ಮನೆ ಹೊಂದಿದ್ದಾರೆ ಪ್ರಕಾಶ್ ರಾಜ್
Image
ಪೊಲೀಸರ ದಾರಿ ತಪ್ಪಿಸಿಲ್ಲ; ರಬ್ಬರ್ ಮಚ್ಚು ಕೊಟ್ಟಿದ್ದಕ್ಕೆ ರಜತ್ ಸ್ಪಷ್ಟನೆ
Image
ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
Image
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಮಾರ್ಚ್​ 30ರಂದು (ಭಾನುವಾರ) ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಸಲ್ಲುಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ, ಕಾಜಲ್ ಅಗರ್​ವಾಲ್​ ನಟಿಸಿದ್ದಾರೆ. ಈ ಸಿನಿಮಾಗೆ ಎಆರ್ ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಹಿಟ್ ಆದರೆ, ಸಲ್ಲು ಮೇಲೆ ಮತ್ತೆ ಭರವಸೆ ಹುಟ್ಟಿಕೊಳ್ಳಲಿದೆ. ಇಲ್ಲವಾದಲ್ಲಿ ಸಲ್ಮಾನ್ ಖಾನ್ ಅವರ ಮತ್ತೊಂದಷ್ಟು ಸಿನಿಮಾ ಅರ್ಧಕ್ಕೆ ನಿಲ್ಲಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ