Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

Salman Khan Birthday: ಸಲ್ಮಾನ್ ಖಾನ್ ತಮ್ಮ ಆರಂಭಿಕ ವೃತ್ತಿಜೀವನದಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದರು. "ಮೇನೆ ಪ್ಯಾರ್ ಕಿಯಾ" ಚಿತ್ರಕ್ಕೂ ಮೊದಲು ಆರ್ಥಿಕ ಸಂಕಷ್ಟದಲ್ಲಿದ್ದಾಗ ರಮೇಶ್ ತೌರಾನಿ ಅವರು ಅವರಿಗೆ ಸಹಾಯ ಮಾಡಿದ್ದರು. ತೌರಾನಿ ಅವರ ಸಹಾಯದಿಂದ "ಪತ್ತರ್ ಕೆ ಫೂಲ್" ಚಿತ್ರದಲ್ಲಿ ಅವಕಾಶ ಪಡೆದರು ಮತ್ತು ನಂತರ ಯಶಸ್ವಿಯಾದರು.

ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು
Salman Khan
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Dec 27, 2024 | 9:44 AM

ಸಲ್ಮಾನ್ ಖಾನ್ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಬಾಲಿವುಡ್ನ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರು. ಸಲ್ಮಾನ್ ಖಾನ್ ಅವರು ಚಿತ್ರರಂಗದ ಆರಂಭದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದರು. ಆ ಬಗ್ಗೆ ಅವರು ಹೇಳಿಕೊಂಡಿದ್ದರು. ‘ಟೈಗರ್ 3’ ರಿಲೀಸ್ ಸಂದರ್ಭದಲ್ಲಿ ಅವರು ಈ ಬಗ್ಗೆ ಮಾಹಿತಿ ರಿವೀಲ್ ಮಾಡಿದ್ದರು. ಸಲ್ಮಾನ್ ಎಷ್ಟು ಕಷ್ಟದಿಂದ ಬಂದಿದ್ದಾಗಿ ಹೇಳಿದ್ದರು. ಅಲ್ಲದೆ, ತಮ್ಮ ಸಹಾಯಕ್ಕೆ ಬಂದ ವ್ಯಕ್ತಿಯನ್ನು ಅವರು ನೆನಪಿಸಿಕೊಂಡಿದ್ದರು.

‘ನಾನು ಆರಂಭದಲ್ಲಿ ಸಾಕಷ್ಟು ಕಷ್ಟಪಟ್ಟೆ. ‘ಮೇ ನೆ ಪ್ಯಾರ್ ಕಿಯಾ’, ‘ಬಿವಿ ಹೋತೋ ಏಸಿ’ ಸಿನಿಮಾಗಳ ಆರಂಭಕ್ಕೂ ಮೊದಲು ನಾನು ಸಾಕಷ್ಟು ಕಷ್ಟ ಎದುರಿಸಿದೆ. ಮೊದಲ ನರೇಷನ್ನಲ್ಲೇ ಸಿನಿಮಾನ ಇಷ್ಟಪಡಬೇಕಿತ್ತು. ನನಗೆ ತುಂಬಾನೇ ಕಷ್ಟ ಆಗುತ್ತಿತ್ತು’ ಎಂದಿದ್ದಾರೆ ಅವರು. ಒಂದೊಮ್ಮೆ ಅವರಿಗೆ ಸಿನಿಮಾ ಇಷ್ಟ ಆಗಿಲ್ಲ ಅಂದರೆ ಅದು ಬೇರೆಯವರ ಕೈ ಸೇರುತ್ತಿತ್ತು.

‘ಮೇನೆ ಪ್ಯಾರ್ ಕಿಯಾ ಸಿನಿಮಾಗೂ ಮೊದಲು ಸಾಕಷ್ಟು ಸಮಸ್ಯೆ ಎದುರಿಸಿದೆ. ಆ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಸಮಸ್ಯೆ ಎದುರಾಗಿತ್ತು. ಆಗ ನಿರ್ಮಾಪಕ ರಮೇಶ್ ತೌರಾಣಿ ಸಹಾಯಕ್ಕೆ ಬಂದರು. ಅವರು ದೇವತಾ ಮನುಷ್ಯ ಎಂಬುದು ಸಲ್ಮಾನ್ ಖಾನ್ ಮಾತು.

ಇದನ್ನೂ ಓದಿ:ಸಲ್ಮಾನ್ ಖಾನ್ ಸೂಪರ್ ಹಿಟ್ ಚಿತ್ರಗಳ ಪಟ್ಟಿ ನೋಡಿ; ಈ ಸಿನಿಮಾಗಳನ್ನು ನೋಡಿದೀರಾ?

‘ಮೇನೆ ಪ್ಯಾರ್ ಕಿಯಾ’ ಯಶಸ್ಸಿನ ನಂತರ ಭಾಗ್ಯಶ್ರೀ ಮದುವೆಗಾಗಿ ಉದ್ಯಮದಿಂದ ದೂರವಿರಲು ನಿರ್ಧರಿಸಿದರು. ಈ ಚಿತ್ರದ ಸಂಪೂರ್ಣ ಕ್ರೆಡಿಟ್ ಅವರಿಗೆ ಸಿಕ್ಕಿತ್ತು. ಸಿನಿಮಾ ಇಲ್ಲದೆ ಸಲ್ಮಾನ್ ಖಾನ್ 6 ತಿಂಗಳ ವಿರಾಮಪಡೆಯುವಂತೆ ಆಯಿತು.

ತೌರಾನಿ ಅವರ ಮಧ್ಯಸ್ಥಿಕೆಯು 1991 ರಲ್ಲಿ ಸಲ್ಮಾನ್ ಅವರಿಗೆ ‘ಪತ್ತರ್ ಕೆ ಫೂಲ್’ ಎಂಬ ಹೊಸ ಸಿನಿಮಾ ಸಿಕ್ಕಿತು. ಸಲ್ಮಾನ್ ಅವರ ವೃತ್ತಿಜೀವನದ ಈ ಪ್ರಮುಖ ಕ್ಷಣಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ವ್ಯಕ್ತಪಡಿಸಿದ್ದರು. ಆ ಬಳಿಕ ಸಲ್ಮಾನ್ ಖಾನ್ ಹಿಟ್ ಚಿತ್ರಗಳನ್ನು ನೀಡುತ್ತಾ ಸಾಗಿದರು.

ಸದ್ಯ ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಶೂಟ್ನಲ್ಲಿ ಬ್ಯುಸಿ ಇದ್ದಾರೆ. ತಮಿಳಿನ ಎಆರ್ ಮುರುಗದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಕನ್ನಡದ ರಶ್ಮಿಕಾ ಈ ಚಿತ್ರಕ್ಕೆ ನಾಯಕಿ ಅನ್ನೋದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ