AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಮೇಲಿನ ಪ್ರೀತಿಗೆ ಯಾರನ್ನೂ ಹಗ್ ಮಾಡುತ್ತಿರಲಿಲ್ಲ ಸಲ್ಮಾನ್

ಶೀಬಾ ಚಡ್ಡಾ ಅವರು ‘ಹಮ್ ದಿಲ್ ದೇ ಚುಕೇ ಸನಮ್’ ಚಿತ್ರೀಕರಣದ ಸಮಯದಲ್ಲಿ ಸಲ್ಮಾನ್ ಖಾನ್ ಅವರ ಕೋಪ ಮತ್ತು ಐಶ್ವರ್ಯಾ ರೈ ಅವರ ಮೇಲಿನ ಅಪಾರ ಪ್ರೀತಿಯ ಬಗ್ಗೆ ಬಹಿರಂಗಪಡಿಸಿದ್ದಾರೆ. ಸಲ್ಮಾನ್ ಅವರು ಚಿತ್ರೀಕರಣದ ಸಮಯದಲ್ಲಿ ತಮ್ಮ ಕೋಪವನ್ನು ತೋರಿಸಿದ್ದರು ಮತ್ತು ಐಶ್ವರ್ಯಾ ಅವರ ಮೇಲಿನ ಪ್ರೀತಿಯಿಂದಾಗಿ ಚಿತ್ರದಲ್ಲಿ ಬೇರೊಬ್ಬರನ್ನು ಹಗ್ ಮಾಡಲು ನಿರಾಕರಿಸಿದ್ದರು ಎಂದು ಶೀಬಾ ಹೇಳಿದ್ದಾರೆ.

ಐಶ್ವರ್ಯಾ ಮೇಲಿನ ಪ್ರೀತಿಗೆ ಯಾರನ್ನೂ ಹಗ್ ಮಾಡುತ್ತಿರಲಿಲ್ಲ ಸಲ್ಮಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on:Aug 07, 2025 | 2:55 PM

Share

ಸಲ್ಮಾನ್ ಖಾನ್ (Salaman Khan) ಅವರು ತಮ್ಮ ವೃತ್ತಿ ಜೀವನದ ಆರಂಭದಲ್ಲಿ ತುಂಬಾನೇ ದುಡುಕು ಸ್ವಭಾವ ಹೊಂದಿದ್ದರು. ಅವರ ಈ ಸ್ವಭಾವದಿಂದ ಸಾಕಷ್ಟು ತೊಂದರೆಗಳು ಕೂಡ ಆದವು. ಈ ಬಗ್ಗೆ ಶೀಬಾ ಚಡ್ಡಾ ಅವರು ಸಂದರ್ಶನ ಒಂದರಲ್ಲಿ ಹೇಳಿದ್ದಾರೆ. ‘ಹಮ್ ದಿಲ್ ದೇ ಚುಕೇ ಸನಮ್’ ಚಿತ್ರದಲ್ಲಿ ಶೀಬಾ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾ ಶೂಟಿಂಗ್ ವೇಳೆ ನಡೆದ ಘಟನೆ ಬಗ್ಗೆ ಹೇಳಿದ್ದಾರೆ. ಐಶ್ವರ್ಯಾ ಬಗ್ಗೆ ಸಲ್ಲು ಯಾವ ರೀತಿಯ ಪ್ರೀತಿ ಹೊಂದಿದ್ದರು ಕೂಡ ಎಂಬುದನ್ನು ಕೂಡ ವಿವರಿಸಿದ್ದರು.

‘ಹಮ್ ದಿಲ್ ದೇ ಚುಕೇ ಸನಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ ಅವರು ಒಟ್ಟಾಗಿ ನಟಿಸಿದ್ದರು. ಈ ಸಿನಿಮಾಗೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಇತ್ತು. ಈ ಸಿನಿಮಾ ಹಿಟ್ ಆಯಿತು. ಈ ಚಿತ್ರದಲ್ಲಿ ಶೀಬಾ ಕೂಡ ನಟಿಸಿದ್ದರು. ಸಿನಿಮಾದ ಸೆಟ್​​ನಲ್ಲಿ ನಡೆದ ಒಂದು ಘಟನೆಯಿಂದ ಶೀಬಾ ಶಾಕ್ ಆಗಿದ್ದರು.

‘ಸಲ್ಮಾನ್ ಖಾನ್ ಎಡವಿ ಬಿದ್ದರು. ಈ ವೇಳೆ ಅವರಿಗೆ ಸಾಕಷ್ಟು ಸಿಟ್ಟು ಬಂತು. ಅದೇ ಕೋಪದಲ್ಲಿ ಅವರು ಬಾಗಿಲ್ಲನ್ನು ಜೋರಾಗಿ ತೆಗೆದರು. ಹಿಂದೆ ನಿಂತಿದ್ದ ವಯಸ್ಸಾದ ಲೈಟ್ ಮ್ಯಾನ್​ಗೆ ಬಾಗಿಲು ತಾಗಿ ಗಾಯ ಆಯಿತು. ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡುವಾಗ ಹೀಗೆಲ್ಲ ಆಗುತ್ತದೆಯೇ ಎಂದು ನನಗೆ ನಾನೇ ಕೇಳಿಕೊಂಡೆ’ ಎಂದು ಶೀಬಾ ಹೇಳಿದ್ದಾರೆ.

ಇದನ್ನೂ ಓದಿ
Image
ದಕ್ಷಿಣ ಚಿತ್ರರಂಗಲ್ಲಿ ಹೊಕ್ಕುಳದ ಗೀಳು ಜಾಸ್ತಿ ಎಂದು ಆರೋಪಿಸಿದ ಮಾಳವಿಕಾ
Image
50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು?
Image
ಪತಿಗೆ ಎಂದೂ ಮರೆಯಲಾರದ ಉಡುಗೊರೆ ಕೊಟ್ಟ ಸೋನಲ್; ಭಾವುಕರಾಗಿ ಕೈ ಮುಗಿದ ತರುಣ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

‘ಹಮ್ ದಿಲ್ ದೇ ಚುಕೇ ಸನಮ್’ ಸಿನಿಮಾ ಶೂಟ್ ಸಂದರ್ಭದಲ್ಲಿ ಸಲ್ಮಾನ್ ಹಾಗೂ ಐಶ್ವರ್ಯಾ ರೈ ಆಳವಾದ ಪ್ರೀತಿಯಲ್ಲಿ ಇದ್ದರು. ಪ್ರೀತಿ ಅದೆಷ್ಟು ಗಾಢವಾಗಿತ್ತು ಎಂದರೆ ಸಲ್ಮಾನ್ ಖಾನ್ ಬೇರೆಯವರನ್ನು ಹಗ್ ಮಾಡಲು ಕೂಡ ರೆಡಿ ಇರಲಿಲ್ಲ.

ಇದನ್ನೂ ಓದಿ: ರಿಯಾಲಿಟಿ ಶೋ ಸಂಭಾವನೆಯಲ್ಲಿ ಸಲ್ಮಾನ್ ಖಾನ್ ಹಿಂದಿಕ್ಕಿದ ಅಮಿತಾಭ್ ಬಚ್ಚನ್

‘ಸಲ್ಮಾನ್ ಖಾನ್ ನನ್ನ ಹಗ್ ಮಾಡುವ ದೃಶ್ಯ ಇತ್ತು. ಆದರೆ, ಇದಕ್ಕೆ ಅವರು ಒಪ್ಪಲಿಲ್ಲ. ಸ್ಕ್ರಿಪ್ಟ್​ ಅದನ್ನು ಕೇಳುತ್ತಿದೆ ಎಂದರೂ ಅವರು ಮಾಡಲು ಒಪ್ಪಲಿಲ್ಲ. ಇದರಿಂದ ಶೂಟ್ ಕೂಡ ನಿಂತಿತ್ತು. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಬಂದು ಸಲ್ಮಾನ್​ ಅವರ ಮನ ಒಲಿಸಬೇಕಾಯಿತು’ ಎಂದು ಹೇಳಿದ್ದಾರೆ ಶೀಬಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:55 pm, Thu, 7 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!