AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ

ಸಲ್ಮಾನ್ ಖಾನ್ ಅವರು 59 ವರ್ಷ ವಯಸ್ಸಿನಲ್ಲೂ ಮದುವೆಯಾಗದಿರುವ ಬಗ್ಗೆ 'ದಿ ಗ್ರೇಟ್ ಇಂಡಿಯನ್ ಕಪಿಲ್' ಶೋನಲ್ಲಿ ಮಾತನಾಡಿದ್ದಾರೆ. ವಿಚ್ಛೇದನದ ಭಯ ಅವರ ಮದುವೆಗೆ ತಡೆಯಾಗಿದೆ ಎಂದು ಹೇಳಲಾಗುತ್ತಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗುತ್ತಿರುವ ಈ ಶೋನಲ್ಲಿ ಸಲ್ಮಾನ್ ತಮ್ಮ ಸೋದರ ಅಳಿಯಂದಿರೊಂದಿಗೆ ಕಾಣಿಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Jun 16, 2025 | 7:38 AM

Share

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ವಯಸ್ಸು ಈಗ 59 ವರ್ಷ. ಈವರೆಗೆ ಅವರು ವಿವಾಹ ಆಗುವ ಬಗ್ಗೆ ಆಲೋಚಿಸಿಲ್ಲ. ಅವರು ಮದುವೆ ಆಗದಿರಲು ಕಾರಣ ಏನು ಎಂಬುದು ಕೂಡ ಅವರು ರಿವೀಲ್ ಮಾಡಿಲ್ಲ. ನೂರಾರು ಕೋಟಿ ರೂಪಾಯಿ ಆಸ್ತಿ ಮಾಡಿಟ್ಟರೂ ಅವರಿಗೆ ಮಕ್ಕಳನ್ನು ಹೊಂದಬೇಕು ಎಂಬ ಆಸೆ ಬಂದಿಲ್ಲ. ಈಗ ಈ ಬಗ್ಗೆ ಮಾತನಾಡಿದ್ದಾರೆ. ಡಿವೋರ್ಸ್ ಆಗುತ್ತದೆ ಎನ್ನುವ ಭಯಕ್ಕೆ ಸಲ್ಮಾನ್ ಖಾನ್ ಮದುವೆ ಆಗಿಲ್ಲವೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ.

ನೆಟ್​ಫ್ಲಿಕ್ಸ್ ಈಗ ‘ದಿ ಗ್ರೇಟ್ ಇಂಡಿಯನ್ ಕಪಿಲ್’ ಶೋನ ಮೂರನೇ ಸೀಸನ್ ಆರಂಭಿಸಿದೆ. ಈ ಶೋಗೆ ಸಲ್ಮಾನ್ ಖಾನ್ ಅವರು ತಮ್ಮ ಸೋದರ ಅಳಿಯಂದಿರಾದ ಅರ್ಹಾನ್, ನಿರ್ವಣ್ ಮತ್ತು ಅಯಾನ್ ಜೊತೆ ಆಗಮಿಸಿದ್ದಾರೆ. ಈ ಮೂಲಕ ಹೊಸ ಸೀಸನ್​ನ ಮೊದಲ ಎಪಿಸೋಡ್ ಅದ್ದೂರಿಯಾಗಿ ಆರಂಭ ಆಗುತ್ತಿದೆ. ಸದ್ಯ ಈ ಎಪಿಸೋಡ್ ಎಲ್ಲರ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
Image
ಸಲ್ಮಾನ್ ಖಾನ್​ ವೃತ್ತಿ ಜೀವನದ ಅತಿ ಕೆಟ್ಟ ಚಿತ್ರಗಳಿವು..
Image
ದಾಖಲೆ ಬೆಲೆಗೆ ‘ಘಾಟಿ’ ಚಿತ್ರದ ಹಕ್ಕು ಮಾರಾಟ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

ದಂಪತಿಗಳ ಮಧ್ಯೆ ಏಕೆ ವಿಚ್ಛೇದನ ಆಗುತ್ತಿದೆ ಎನ್ನುವ ಬಗ್ಗೆ ಕಪಿಲ್ ಶರ್ಮಾ ಮಾತನಾಡಿದ್ದಾರೆ. ‘ಮೊದಲೆಲ್ಲ ತ್ಯಾಗ ಮಾಡುತ್ತಿದ್ದರು. ಇದರ ಜೊತೆ ಸಹಿಷ್ಣುತೆಯ ಮನೋಭಾವ ಇತ್ತು. ಅಚಾನಕ್ಕಾಗಿ ಒಂದು ಕಾಲು ಮತ್ತೊಬ್ಬರ ಮೇಲೆ ಬಿದ್ದರೆ ವಿಚ್ಛೇದನ ಉಂಟಾಗುತ್ತದೆ. ಗೊರಕೆ ಕೂಡ ದಂಪತಿ ಬೇರೆ ಆಗಲು ಕಾರಣ ಆಗಬಹುದು. ಸಣ್ಣ ತಪ್ಪು ತಿಳುವಳಿಕೆಯಿಂದ ಪತಿ-ಪತ್ನಿ ಬೇರೆ ಆಗಬಹುದು’ ಎಂದಿದ್ದಾರೆ ಅವರು.

ಸದ್ಯ ಸಲ್ಮಾನ್ ಖಾನ್ ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಅವರು ವಿಚ್ಛೇದನದ ಭಯಕ್ಕೆ ವಿವಾಹ ಆಗುತ್ತಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ನೆಟ್​ಫ್ಲಿಕ್ಸ್ ರಿಲೀಸ್ ಮಾಡಿರೋ ಪ್ರೋಮೋ ಎಲ್ಲರ ಗಮನ ಸೆಳೆದಿದೆ. ವಿವಾಹ ಆಗದೆ ಇರಲು ಸಲ್ಲು ಏನಾದರೂ ಸ್ಪಷ್ಟ ಕಾರಣ ನೀಡಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಈ ಬಾರಿಯ ಬಿಗ್ ಬಾಸ್​ಗೆ ಪಡೆಯೋ ಸಂಭಾವನೆ ಇಷ್ಟೊಂದಾ?

‘ದಿ ಗ್ರೇಟ್ ಇಂಡಿಯನ್ ಕಪಿಲ್’ ಸೋ ಗ್ರ್ಯಾಂಡ್ ಎಂಟ್ರಿ ಕೊಡಲು ರೆಡಿ ಆಗಿದೆ. ವಿಶೇಷ ಎಂದರೆ ನವಜೋತ್ ಸಿಂಗ್ ಸಿಧು ಅವರನ್ನು ಮತ್ತೆ ಕರೆಸಲಾಗಿದೆ. ಇದೇ ಮೊದಲ ಬಾರಿಗೆ ಕಪಿಲ್ ಶರ್ಮಾ ಶೋಗೆ ಇಬ್ಬರು ಜಡ್ಜ್​​ಗಳು. ನವಜೋತ್ ಅವರು ರಾಜಕೀಯದಲ್ಲಿ ಬ್ಯುಸಿ ಆದ ಬಳಿಕ ಶೋನ ತೊರೆದಿದ್ದರು. ಆ ಬಳಿಕ ಅರ್ಚನಾ ಪುರಾನಾ ಸಿಂಗ್ ಅವರು ಆ ಸ್ಥಾನ ತುಂಬಿದ್ದರು. ಈಗ ನವಜೋತ್ ಬಂದಿರುವುದರಿಂದ ಇಬ್ಬರೂ ಶೋನಲ್ಲಿ ಇರಲಿದ್ದಾರೆ. ಜೂನ್ 21ರಂದು ಮೊದಲ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!