AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಎಡಿಷನ್ ವಾಚ್​ ಧರಿಸಿದ ಸಲ್ಮಾನ್ ಖಾನ್; ‘ಹರಾಮ್’ ಎಂದು ಕರೆದ ಮುಸ್ಲಿಮರು

ಸಲ್ಮಾನ್ ಖಾನ್ ರಾಮ ಜನ್ಮಭೂಮಿ ಆವೃತ್ತಿಯ ಗಡಿಯಾರ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಧರ್ಮಗುರುಗಳು ಇದನ್ನು 'ಹರಾಮ್' ಎಂದು ಖಂಡಿಸಿದ್ದಾರೆ ಮತ್ತು ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ. ಸಲ್ಮಾನ್ ಖಾನ್ ಎಲ್ಲಾ ಧರ್ಮಗಳನ್ನು ಗೌರವಿಸುತ್ತಾರೆ ಎಂದು ಅವರ ಬೆಂಬಲಿಗರು ವಾದಿಸಿದ್ದಾರೆ. ಸಲ್ಮಾನ್ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ವಿವಾದ ಆಗಿದೆ.

ರಾಮ ಮಂದಿರ ಎಡಿಷನ್ ವಾಚ್​ ಧರಿಸಿದ ಸಲ್ಮಾನ್ ಖಾನ್; ‘ಹರಾಮ್’ ಎಂದು ಕರೆದ ಮುಸ್ಲಿಮರು
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Mar 29, 2025 | 7:35 AM

Share

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ವಿಶೇಷ ವಾಚ್ ಧರಿಸಿ ಪೋಸ್ ಕೊಟ್ಟಿದ್ದರು. ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ವಾಚ್ ಆಗಿತ್ತು. ಇದು ಅನೇಕರ ಕಣ್ಣು ಕುಕ್ಕಿದೆ. ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಸಲ್ಮಾನ್ ಖಾನ್ (Salman Khan) ‘ಹರಾಮ್’ ಮಾಡಿದ್ದಾರೆ ಎಂದು ದೂರಿದ್ದಾರೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಜೋರಾಗುತ್ತಿವೆ. ಅವರು ಕ್ಷಮೆ ಕೇಳಬೇಕು ಎನ್ನುವ ಆಗ್ರಹವೂ ವ್ಯಕ್ತವಾಗಿದೆ.

ಸಲ್ಮಾನ್ ಖಾನ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರದವರಾಗಿರಬಹುದು, ಆದರೆ, ಅವರು ಎಲ್ಲಾ ಧರ್ಮದವರನ್ನು ಗೌರವಿಸುತ್ತಾರೆ. ಸಿನಿಮಾಗಳಲ್ಲಿ ಭಜರಂಗಿ ಪಾತ್ರವನ್ನು ಅವರು ಮಾಡುತ್ತಾರೆ. ಅದೇ ರೀತಿ ನಿಜ ಜೀವನದಲ್ಲೂ ಅವರು ಎಲ್ಲಾ ದೇವರುಗಳನ್ನು ಸಮಾನವಾಗಿ ಕಾಣುತ್ತಾರೆ. ಇದೇ ಮನಸ್ಥಿತಿಯಲ್ಲಿ ಅವರು ರಾಮ ಜನ್ಮಭೂಮಿ ದೇವಾಲಯ ಇರುವ ವಾಚ್ ಧರಿಸಿದ್ದಕ್ಕೆ ಟೀಕೆ ಎದುರಿಸಬೇಕಾಗಿದೆ.

ಇದನ್ನೂ ಓದಿ
Image
ಒಂದು ಕಾಲದಲ್ಲಿ ಬೇಡಿಕೆಯ ಹೀರೋ ಆಗಿದ್ದ ಅಜಯ್​ ರಾವ್​ಗೆ ಈಗ ಕೋಟಿ ರೂ. ಸಾಲ
Image
ಉತ್ತಮ TRP ಮಧ್ಯೆಯೂ ಕೊನೆಯಾಗಲಿದೆ ಕಲರ್ಸ್​ನ ಈ ಸೂಪರ್ ಹಿಟ್ ಧಾರಾವಾಹಿ?
Image
ದಂಡಿಗೆ, ದಾಳಿಗೆ ಹೆದರಲಿಲ್ಲ, ಹಲ್ಲಿಗೆ ಹೆದರೋದಾ; ಪಾಪ ಗೌತಮಿ ಸ್ಥಿತಿ ನೋಡಿ
Image
ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

‘ಸಲ್ಮಾನ್ ಖಾನ್ ಅವರು ರಾಮ ಮಂದಿರದ ಪ್ರಚಾರಕ್ಕಾಗಿ ತಯಾರಿಸಿದ ರಾಮ ಮಂದಿರ ಆವೃತ್ತಿಯ ವಾಚ್ ಧರಿಸಿದ್ದಾರೆ. ಮುಸ್ಲಿಂ ಆಗಿರುವಾಗ ಕೈಯಲ್ಲಿ ಅಂತಹ ಗಡಿಯಾರವನ್ನು ಧರಿಸುವುದು ಹರಾಮ್’ ಎಂದು ಆಲ್ ಇಂಡಿಯಾ ಮುಸ್ಲಿಂ ಜಮಾತ್​ನ ಮೌಲಾನಾ ಶಹಾಬುದ್ದೀನ್ ರಾಜ್ವಿ ಅವರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

‘ಸಲ್ಮಾನ್ ಖಾನ್ ಭಾರತದ ಜನಪ್ರಿಯ ವ್ಯಕ್ತಿ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಸಲ್ಮಾನ್ ಖಾನ್ ಕೂಡ ಮುಸ್ಲಿಂ. ಹೀಗಿರುವಾಗ ಈ ರೀತಿ ವಾಚ್ ಧರಿಸೋದು ಎಷ್ಟು ಸರಿ? ಸಲ್ಮಾನ್ ಖಾನ್ ಆಗಿರಲಿ ಅಥವಾ ಇನ್ಯಾವುದೇ ಮುಸ್ಲಿಂ ಆಗಿರಲಿ, ರಾಮ ಮಂದಿರ ಅಥವಾ ಯಾವುದೇ ಇತರ ಮುಸ್ಲಿಮೇತರ ವಿಷಯವನ್ನು ಪ್ರಚಾರ ಮಾಡುತ್ತಿದ್ದರೆ ಅದನ್ನು ಕಾನೂನುಬಾಹಿರ ಮತ್ತು ಹರಾಮ್ ಎಂದು ಪರಿಗಣಿಸಲಾಗುತ್ತದೆ. ಸಲ್ಮಾನ್ ಖಾನ್ ಅವರು ಶರಿಯತ್ ತತ್ವಗಳನ್ನು ಅನುಸರಿಸಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದು ಮೌಲಾನಾ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಧರಿಸಿರುವುದು ಜಾಕೋಬ್ ಆ್ಯಂಡ್ ಕೋ ಅವರ ಎಪಿಕ್ ರಾಮ್ ಜನ್ಮಭೂಮಿ ಟೈಟಾನಿಯಮ್ ಎಡಿಷನ್ 2 ವಾಚ್ ಇದಾಗಿದೆ. ಇದರ ಬೆಲೆ 34 ಲಕ್ಷ ರೂಪಾಯಿ. ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಮಾರ್ಚ್ 30ರಂದು ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ