AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ‘ಸಿಕಂದರ್’ ಕಲೆಕ್ಷನ್

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಗಳನ್ನು ಮೀರುತ್ತಿಲ್ಲ. ರಿಲೀಸ್ ಆದ ಆರು ದಿನಗಳ ನಂತರವೂ 100 ಕೋಟಿ ರೂಪಾಯಿಗಳ ಗುರಿ ತಲುಪಲು ವಿಫಲವಾಗಿದೆ. ಚಿತ್ರದ ನಿರ್ದೇಶಕರ ಆಯ್ಕೆ ಮತ್ತು ಸ್ಕ್ರಿಪ್ಟ್‌ನಲ್ಲಿ ಸಲ್ಮಾನ್ ಖಾನ್ ಹೆಚ್ಚು ಗಮನ ಹರಿಸಬೇಕೆಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ‘ಸಿಕಂದರ್’ ಕಲೆಕ್ಷನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 05, 2025 | 8:36 AM

Share

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ (Sikandar Movie) ಕುಂಟುತ್ತಾ ಸಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಆರು ದಿನ ಕಳೆದರೂ ಇನ್ನೂ ಚಿತ್ರದ ಗಳಿಕೆ 100 ಕೋಟಿ ರೂಪಾಯಿ ತಲುಪಿಲ್ಲ. ಸಲ್ಮಾನ್ ಖಾನ್ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದ್ದ ಕಾಲ ಒಂದಿತ್ತು. ಆದರೆ, ಈಗ ಸಿನಿಮಾ 100 ಕೋಟಿ ರೂಪಾಯಿ ಗಳಿಸಲೂ ಒದ್ದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗೆಯೇ ಮುಂದುವರಿದರೆ ಸಿನಿಮಾ ನಿರ್ಮಾಪಕರಿಗೆ ದೊಡ್ಡ ನಷ್ಟ ಉಂಟಾಗಲಿದೆ. ಸಲ್ಲು ಸ್ಕ್ರಿಪ್ಟ್ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಬೇಕಿದೆ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಮಾರ್ಚ್ 30ರಂದು ರಿಲೀಸ್ ಆಯಿತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಲು ವಿಫಲವಾಗಿದೆ. ಈ ಚಿತ್ರದ ಒಂದು ದಿದನ ಗಳಿಕೆ 30 ಕೋಟಿ ರೂಪಾಯಿ ದಾಟಿಲ್ಲ ಅನ್ನೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕನ್ನಡದ ‘ಕೆಜಿಎಫ್ 2’ ಸಿನಿಮಾ ಹಿಂದಿ ಒಂದರಲ್ಲೇ ಒಂದು ದಿನಕ್ಕೆ 50+ ಕೋಟಿ ರೂಪಾಯಿ ಗಳಿಸಿತ್ತು. ‘ಪುಷ್ಪ 2’ ಚಿತ್ರದ ಒಂದು ದಿನದ ಗಳಿಕೆಯಂತೂ 60 ಕೋಟಿ ರೂಪಾಯಿ ದಾಟಿತ್ತು. ಇವುಗಳಿಗೆ ಹೋಲಿಸಿದರೆ ಸಲ್ಮಾನ್ ಖಾನ್ ಸಿನಿಮಾ ಡಲ್ ಆಗಿ ಹೋಗಿದೆ.

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಏಪ್ರಿಲ್ 4ರಂದು ಕೇವಲ 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 94 ಕೋಟಿ ರೂಪಾಯಿ ಆಗಿದೆ. ಸಲ್ಲು ಸಿನಿಮಾ ಒಂದು ವಾರಕ್ಕಾದರೂ 100 ಕೋಟಿ ರೂಪಾಯಿ ಕ್ಲಬ್ ಸೇರುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ರಶ್ಮಿಕಾ ಮಂದಣ್ಣ ನಟಿಸಿದ ಸ್ಟಾರ್ ಹೀರೋಗಳ ಪಟ್ಟಿ ಬಹುದೊಡ್ಡದಿದೆ
Image
ಒಮನ್​​ನಲ್ಲಿ ಜಿಮ್ ಟ್ರೇನರ್​ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ
Image
ನಟಿ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲವೂ ಚಿನ್ನ; ಅವರ ಯಶಸ್ಸಿನ ಗುಟ್ಟಿದು
Image
‘ಬಜರಂಗಿ ಭಾಯಿಜಾನ್’ ಆಫರ್ ಮೊದಲು ಹೋಗಿದ್ದು ಆಮಿರ್ ಬಳಿ

ಸದ್ಯ ಎಲ್ಲರೂ ಸಲ್ಮಾನ್ ಖಾನ್ ಸಿನಿಮಾ ಸೋಲಲು ನಿರ್ದೇಶಕ ಎಆರ್​ ಮುರುಗದಾಸ್ ಅವರನ್ನು ದೂಷಿಸುತ್ತಾ ಇದ್ದಾರೆ. ‘ಘಜಿನಿ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ ಅವರಿಗೆ ಇದೆಂಥಾ ಪರಿಸ್ಥಿತಿ ಬಂದೊದಗಿತು ಎಂದು ಅವರ ಫ್ಯಾನ್ಸ್ ಬೇಸರ ಮಾಡಿಕೊಳ್ಳುತ್ತಾ ಇದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್-ರಶ್ಮಿಕಾ ನಡುವಿನ 31 ವರ್ಷ ವಯಸ್ಸಿನ ಅಂತರ ಸಮರ್ಥಿಸಿಕೊಂಡ ಅಮೀಶಾ ಪಟೇಲ್

ಸಲ್ಮಾನ್ ಖಾನ್ ಅವರು ಮುಂದಿನ ದಿನಗಳಲ್ಲಿ ಸ್ಕ್ರಿಪ್ಟ್ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಬೇಕಿದೆ ಎಂದು ಅವರ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಲಹೆಯನ್ನು ಸಲ್ಲು ಸ್ವೀಕರಿಸುತ್ತಾರಾ ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು