AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಲ್ಲದೆ ಕ್ಯಾನ್ಸಲ್ ಆಯ್ತು ‘ಸಿಕಂದರ್’; ಸಲ್ಲು ಸಿನಿಮಾ ಬದಲಿಗೆ ಮೋಹನ್​ಲಾಲ್ ಚಿತ್ರ ಪ್ರದರ್ಶನ

ಸಲ್ಮಾನ್ ಖಾನ್ ನಟನೆಯ 'ಸಿಕಂದರ್' ಚಿತ್ರ ನಿರೀಕ್ಷೆಯಂತೆ ಗಳಿಕೆ ಮಾಡದ ಕಾರಣ, ಅನೇಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ರದ್ದುಗೊಂಡಿದೆ. ಕಡಿಮೆ ಪ್ರೇಕ್ಷಕರು ಬಂದಿರುವುದರಿಂದ ಮೋಹನ್‌ಲಾಲ್ ನಟನೆಯ 'ಎಂಪುರಾನ್' ಚಿತ್ರವನ್ನು ಬದಲಿಗೆ ಪ್ರದರ್ಶಿಸಲಾಗುತ್ತಿದೆ. ಇದು ಸಲ್ಮಾನ್ ಖಾನ್ ಅವರ ವೃತ್ತಿಜೀವನದಲ್ಲಿ ದೊಡ್ಡ ಹಿನ್ನಡೆಯಾಗಿದೆ .

ಜನರಿಲ್ಲದೆ ಕ್ಯಾನ್ಸಲ್ ಆಯ್ತು ‘ಸಿಕಂದರ್’; ಸಲ್ಲು ಸಿನಿಮಾ ಬದಲಿಗೆ ಮೋಹನ್​ಲಾಲ್ ಚಿತ್ರ ಪ್ರದರ್ಶನ
ಸಲ್ಮಾನ್-ಮೋಹನ್​ಲಾಲ್
ರಾಜೇಶ್ ದುಗ್ಗುಮನೆ
|

Updated on:Apr 01, 2025 | 2:31 PM

Share

ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಕಂದರ್’ ಸಿನಿಮಾ ಹೀನಾಯ ವಿಮರ್ಶೆ ಪಡೆದಿದೆ. ಈ ಚಿತ್ರದ ಗಳಿಕೆ ಕೂಡ ದೊಡ್ಡ ಮಟ್ಟದಲ್ಲಿ ಇಲ್ಲ. ಈ ಕಾರಣದಿಂದ ಸಲ್ಲು ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ಬೆನ್ನಲ್ಲೆ ಸಲ್ಮಾನ್ ಖಾನ್ ಫ್ಯಾನ್ಸ್​ ಮತ್ತಷ್ಟು ನಿರಾಸೆಗೆ ಒಳಗಾಗುವ ಸುದ್ದಿ ಒಂದು ಸಿಕ್ಕಿದೆ. ಮುಂಬೈ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ‘ಸಿಕಂದರ್’ ಸಿನಿಮಾಗಳಿಗೆ ಜನರೇ ಇಲ್ಲದಂತೆ ಆಗಿದೆ. ಇದರಿಂದ ಸಲ್ಲು ಸಿನಿಮಾನ ಕ್ಯಾನ್ಸಲ್ ಮಾಡಿ ಬೇರೆ ಶೋಗಳನ್ನು ಹಾಕಲಾಗುತ್ತಿದೆ.

ಸಲ್ಮಾನ್ ಖಾನ್ ವೃತ್ತಿ ಜೀವನದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಸಿನಿಮಾ ಪ್ರದರ್ಶನ ಕಾಣುತ್ತಿದೆ ಎಂದರೆ ಟಿಕೆಟ್ ಸಿಗೋದೆ ಕಷ್ಟ ಎಂಬಂತಹ ಪರಿಸ್ಥಿತಿ ಈ ಮೊದಲು ಇತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಸಲ್ಮಾನ್ ಖಾನ್ ಸಿನಿಮಾ ರಿಲೀಸ್ ಆದ ಎರಡೇ ದಿನಕ್ಕೆ ಇಡೀ ಥಿಯೇಟರ್ ಖಾಲಿ ಹೊಡೆಯುವಂತೆ ಆಗಿದೆ. ಇದು ಸಲ್ಮಾನ್ ಖಾನ್ ಸಿನಿಮಾ ಗಳಿಕೆ ಮೇಲೆ ಪ್ರಭಾವ ಬೀರಲಿದೆ.

ಬಾಲಿವುಡ್​ನ ಹೃದಯಭಾಗವಾದ ಮುಂಬೈನ ಅನೇಕ ಕಡೆಗಳಲ್ಲಿ ‘ಸಿಕಂದರ್’ ಪ್ರದರ್ಶನ ಕಾಣುತ್ತಿದೆ. ಕೆಲವು ಮಲ್ಟಿಪ್ಲೆಕ್ಸ್​ನಲ್ಲಿ ಈ ಶೋಗೆ ಜನರೇ ಇಲ್ಲದಂತೆ ಆಗಿದೆ. ಹೀಗಾಗಿ, ಈ ಚಿತ್ರದ ಬದಲು ಮೋಹನ್​ಲಾಲ್ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಎಲ್​ 2: ಎಂಪುರಾನ್’ ಸಿನಿಮಾನ ಶೋ ಮಾಡಲಾಗುತ್ತಿದೆ. ಬೆಂಗಳೂರು, ಚೆನ್ನೈ ಸೇರಿದಂತೆ ಅನೇಕ ಕಡೆಗಳಲ್ಲಿ ಇದೆ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರಿಂದ ಸಲ್ಮಾನ್ ಖಾನ್ ದೊಡ್ಡ ಮುಖಭಂಗ ಎದುರಿಸಿದ್ದಾರೆ.

ಇದನ್ನೂ ಓದಿ
Image
‘ಸಂಬಂಧಗಳು ಐಸ್​​​ಕ್ರೀಮ್​ನಂತೆ, ಆಸ್ವಾದಿಸಿ ಮುಂದೆ ಸಾಗಬೇಕು’; ವಿಜಯ್ ವರ್ಮ
Image
‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

ಇದನ್ನೂ ಓದಿ: ‘ಸಿಕಂದರ್’ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾದ ಪರದಾಟ

‘ಸಿಕಂದರ್’ ಚಿತ್ರಕ್ಕಿಲ್ಲ ರೇಟಿಂಗ್

‘ಬುಕ್ ಮೈ ಶೋ’ನಲ್ಲಿ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರಕ್ಕೆ ಕಳಪೆ ರೇಟಿಂಗ್ ಸಿಕ್ಕಿದೆ. ಈವರೆಗೆ (ಏಪ್ರಿಲ್ 1, ಮಧ್ಯಾಹ್ನ 2 ಗಂಟೆ) ಚಿತ್ರಕ್ಕೆ 11 ಸಾವಿರ ಜನರು ವೋಟ್ ಮಾಡಿದ್ದು, ಕೇವಲ 6.2 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲೂ ಚಿತ್ರಕ್ಕೆ ಇದೇ ಪರಿಸ್ಥಿತಿ ಇದೆ. 29 ಸಾವಿರ ಜನರು ರೇಟಿಂಗ್ ನೀಡಿದ್ದು, 10ಕ್ಕೆ 6.3 ಅಂಕ ಸಿಕ್ಕಿದೆ. ‘ಸಿಕಂದರ್’ ಚಿತ್ರ ಕಳೆದ ಎರಡು ದಿನಗಳಿಂದ 30 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಮಾಡುತ್ತಿದೆ. ಇಂದು ಚಿತ್ರದ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:29 pm, Tue, 1 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?