AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Samantha: ವಿಚ್ಛೇದನ ಪಡೆದುಕೊಂಡ ಬಳಿಕವಾದರೂ ಸಮಂತಾ ಈ ಸಿನಿಮಾ ಒಪ್ಪಿಕೊಳ್ಳಬಹುದು ಎಂದು ಊಹಿಸಲಾಗಿತ್ತು. ಆದರೆ ಎರಡನೇ ಬಾರಿಗೂ ಅವರು ಶಾರುಖ್​ ಚಿತ್ರದ ಆಫರ್​ ಅನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?
ಸಮಂತಾ, ಶಾರುಖ್​ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 12, 2021 | 8:37 AM

ನಟಿ ಸಮಂತಾ ( Samantha) ಅವರಿಗೆ ಬಹುಭಾಷೆಯಲ್ಲಿ ಡಿಮ್ಯಾಂಡ್​ ಇದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಗೆದ್ದ ಬಳಿಕವಂತೂ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಈ ನಡುವೆ ಅವರು ಸಂಸಾರದ ತಾಪತ್ರಯದಿಂದಾಗಿ ಸಿನಿಮಾ ಕೆಲಸಗಳಿಂದ ಕೊಂಚ ದೂರ ಉಳಿದುಕೊಂಡಿದ್ದರು. ನಾಗ ಚೈತನ್ಯಗೆ (Naga Chaitanya) ವಿಚ್ಛೇದನ (Divorce) ನೀಡಿದ ನಂತರ ಸಮಂತಾ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಮುನ್ನುಗ್ಗುತ್ತಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಸೂಪರ್​ ಹಿಟ್​ ಆದನಂತರ ಬಾಲಿವುಡ್​ನಿಂದಲೂ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ ಸಮಂತಾ ಹಿಂದೇಟು ಹಾಕುತ್ತಿದ್ದಾರೆ. ಶಾರುಖ್​ ಖಾನ್​ (Shah Rukh Khan) ಮತ್ತು ನಿರ್ದೇಶಕ ಅಟ್ಲೀ (Atlee) ಕಾಂಬಿನೇಷನ್​ನ ಸಿನಿಮಾದಲ್ಲಿ ನಾಯಕಿಯಾಗಲು ಸಮಂತಾ ಎರಡನೇ ಬಾರಿಗೆ ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ.

ಶಾರುಖ್​ ಖಾನ್​ ಮತ್ತು ಅಟ್ಲೀ ಜೊತೆಯಾಗಿ ಮಾಡುತ್ತಿರುವ ಚಿತ್ರದಲ್ಲಿ ನಾಯಕಿ ಆಗುವಂತೆ ಸಮಂತಾಗೆ ಕೆಲವು ತಿಂಗಳ ಹಿಂದೆಯೇ ಆಫರ್​ ಬಂದಿತ್ತು. ಆದರೆ ನಾಗ ಚೈತನ್ಯ ಜೊತೆ ಮಗು ಪಡೆದುಕೊಂಡು, ಸಂಸಾರಕ್ಕೆ ಸಮಯ ನೀಡಬೇಕು ಎಂಬ ಕಾರಣದಿಂದ ಅವರು ಶಾರುಖ್​ ಸಿನಿಮಾಗೆ ನೋ ಎಂದಿದ್ದರು. ನಂತರ ಆ ಚಾನ್ಸ್​ ನಯನತಾರಾ ಪಾಲಾಗಿತ್ತು. ಶಾರುಖ್​ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಸಿಕ್ಕಿಬಿದ್ದ ಬಳಿಕ ಅಟ್ಲೀ ಜೊತೆಗಿನ ಶಾರುಖ್​ ಸಿನಿಮಾದ ಕೆಲಸಗಳು ವಿಳಂಬ ಆಗತೊಡಗಿದವು. ಹಾಗಾಗಿ ನಯನತಾರಾ ಕೂಡ ಆ ಪ್ರಾಜೆಕ್ಟ್​​​ನಿಂದ ಹೊರನಡೆಯುವ ನಿರ್ಧಾರ ತೆಗೆದುಕೊಂಡರು ಎನ್ನುತ್ತಿವೆ ಮೂಲಗಳು.

ಚಿತ್ರತಂಡದಿಂದ ನಯನತಾರಾ ಹೊರನಡೆಯುವ ತೀರ್ಮಾನ ತೆಗೆದುಕೊಂಡ ಬಳಿಕ ನಿರ್ಮಾಪಕರು ಮತ್ತೆ ಬಂದಿದ್ದು ಸಮಂತಾ ಬಳಿಗೆ. ವಿಚ್ಛೇದನ ಪಡೆದುಕೊಂಡು ಅಕ್ಕಿನೇನಿ ಕುಟುಂಬದಿಂದ ಬೇರ್ಪಟ್ಟಿರುವ ಅವರು ಈಗಲಾದಲೂ ಈ ಸಿನಿಮಾ ಒಪ್ಪಿಕೊಳ್ಳಬಹುದು ಎಂದು ಊಹಿಸಲಾಗಿತ್ತು. ಆದರೆ ಎರಡನೇ ಬಾರಿಗೂ ಅವರು ಶಾರುಖ್​ ಚಿತ್ರದ ಆಫರ್​ ಅನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈಗ ಆರ್ಯನ್ ಖಾನ್​ಗೆ ಜಾಮೀನು ಸಿಕ್ಕಿದ್ದು, ಶಾರುಖ್​ ಮತ್ತೆ ಚಿತ್ರೀಕರಣದತ್ತ ಗಮನ ಹರಿಸಲು ಸಜ್ಜಾಗಿದ್ದಾರೆ. ಹಾಗಾಗಿ ಮತ್ತೆ ನಯನತಾರಾ ಅವರನ್ನೇ ಆಯ್ಕೆ ಮಾಡಿಕೊಂಡು ಶೂಟಿಂಗ್​ ಮುಂದುವರಿಸಲು ಚಿತ್ರತಂಡ ನಿರ್ಧರಿಸಿದೆ ಎಂಬುದು ಸದ್ಯ ಕೇಳಿಬರುತ್ತಿರುವ ಗಾಸಿಪ್​.

ಇದನ್ನೂ ಓದಿ:

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ