AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Samantha: ವಿಚ್ಛೇದನ ಪಡೆದುಕೊಂಡ ಬಳಿಕವಾದರೂ ಸಮಂತಾ ಈ ಸಿನಿಮಾ ಒಪ್ಪಿಕೊಳ್ಳಬಹುದು ಎಂದು ಊಹಿಸಲಾಗಿತ್ತು. ಆದರೆ ಎರಡನೇ ಬಾರಿಗೂ ಅವರು ಶಾರುಖ್​ ಚಿತ್ರದ ಆಫರ್​ ಅನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?
ಸಮಂತಾ, ಶಾರುಖ್​ ಖಾನ್
TV9 Web
| Edited By: |

Updated on: Nov 12, 2021 | 8:37 AM

Share

ನಟಿ ಸಮಂತಾ ( Samantha) ಅವರಿಗೆ ಬಹುಭಾಷೆಯಲ್ಲಿ ಡಿಮ್ಯಾಂಡ್​ ಇದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಗೆದ್ದ ಬಳಿಕವಂತೂ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಈ ನಡುವೆ ಅವರು ಸಂಸಾರದ ತಾಪತ್ರಯದಿಂದಾಗಿ ಸಿನಿಮಾ ಕೆಲಸಗಳಿಂದ ಕೊಂಚ ದೂರ ಉಳಿದುಕೊಂಡಿದ್ದರು. ನಾಗ ಚೈತನ್ಯಗೆ (Naga Chaitanya) ವಿಚ್ಛೇದನ (Divorce) ನೀಡಿದ ನಂತರ ಸಮಂತಾ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಮುನ್ನುಗ್ಗುತ್ತಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಸೂಪರ್​ ಹಿಟ್​ ಆದನಂತರ ಬಾಲಿವುಡ್​ನಿಂದಲೂ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ ಸಮಂತಾ ಹಿಂದೇಟು ಹಾಕುತ್ತಿದ್ದಾರೆ. ಶಾರುಖ್​ ಖಾನ್​ (Shah Rukh Khan) ಮತ್ತು ನಿರ್ದೇಶಕ ಅಟ್ಲೀ (Atlee) ಕಾಂಬಿನೇಷನ್​ನ ಸಿನಿಮಾದಲ್ಲಿ ನಾಯಕಿಯಾಗಲು ಸಮಂತಾ ಎರಡನೇ ಬಾರಿಗೆ ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ.

ಶಾರುಖ್​ ಖಾನ್​ ಮತ್ತು ಅಟ್ಲೀ ಜೊತೆಯಾಗಿ ಮಾಡುತ್ತಿರುವ ಚಿತ್ರದಲ್ಲಿ ನಾಯಕಿ ಆಗುವಂತೆ ಸಮಂತಾಗೆ ಕೆಲವು ತಿಂಗಳ ಹಿಂದೆಯೇ ಆಫರ್​ ಬಂದಿತ್ತು. ಆದರೆ ನಾಗ ಚೈತನ್ಯ ಜೊತೆ ಮಗು ಪಡೆದುಕೊಂಡು, ಸಂಸಾರಕ್ಕೆ ಸಮಯ ನೀಡಬೇಕು ಎಂಬ ಕಾರಣದಿಂದ ಅವರು ಶಾರುಖ್​ ಸಿನಿಮಾಗೆ ನೋ ಎಂದಿದ್ದರು. ನಂತರ ಆ ಚಾನ್ಸ್​ ನಯನತಾರಾ ಪಾಲಾಗಿತ್ತು. ಶಾರುಖ್​ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಸಿಕ್ಕಿಬಿದ್ದ ಬಳಿಕ ಅಟ್ಲೀ ಜೊತೆಗಿನ ಶಾರುಖ್​ ಸಿನಿಮಾದ ಕೆಲಸಗಳು ವಿಳಂಬ ಆಗತೊಡಗಿದವು. ಹಾಗಾಗಿ ನಯನತಾರಾ ಕೂಡ ಆ ಪ್ರಾಜೆಕ್ಟ್​​​ನಿಂದ ಹೊರನಡೆಯುವ ನಿರ್ಧಾರ ತೆಗೆದುಕೊಂಡರು ಎನ್ನುತ್ತಿವೆ ಮೂಲಗಳು.

ಚಿತ್ರತಂಡದಿಂದ ನಯನತಾರಾ ಹೊರನಡೆಯುವ ತೀರ್ಮಾನ ತೆಗೆದುಕೊಂಡ ಬಳಿಕ ನಿರ್ಮಾಪಕರು ಮತ್ತೆ ಬಂದಿದ್ದು ಸಮಂತಾ ಬಳಿಗೆ. ವಿಚ್ಛೇದನ ಪಡೆದುಕೊಂಡು ಅಕ್ಕಿನೇನಿ ಕುಟುಂಬದಿಂದ ಬೇರ್ಪಟ್ಟಿರುವ ಅವರು ಈಗಲಾದಲೂ ಈ ಸಿನಿಮಾ ಒಪ್ಪಿಕೊಳ್ಳಬಹುದು ಎಂದು ಊಹಿಸಲಾಗಿತ್ತು. ಆದರೆ ಎರಡನೇ ಬಾರಿಗೂ ಅವರು ಶಾರುಖ್​ ಚಿತ್ರದ ಆಫರ್​ ಅನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈಗ ಆರ್ಯನ್ ಖಾನ್​ಗೆ ಜಾಮೀನು ಸಿಕ್ಕಿದ್ದು, ಶಾರುಖ್​ ಮತ್ತೆ ಚಿತ್ರೀಕರಣದತ್ತ ಗಮನ ಹರಿಸಲು ಸಜ್ಜಾಗಿದ್ದಾರೆ. ಹಾಗಾಗಿ ಮತ್ತೆ ನಯನತಾರಾ ಅವರನ್ನೇ ಆಯ್ಕೆ ಮಾಡಿಕೊಂಡು ಶೂಟಿಂಗ್​ ಮುಂದುವರಿಸಲು ಚಿತ್ರತಂಡ ನಿರ್ಧರಿಸಿದೆ ಎಂಬುದು ಸದ್ಯ ಕೇಳಿಬರುತ್ತಿರುವ ಗಾಸಿಪ್​.

ಇದನ್ನೂ ಓದಿ:

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ