AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು.

ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್
ಅನುಷ್ಕಾ-ಸಮಂತಾ-ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on: May 04, 2023 | 1:12 PM

Share

ಅನುಷ್ಕಾ ಶರ್ಮಾ ಹಾಗೂ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನುಷ್ಕಾ ಬಾಲಿವುಡ್​ನಲ್ಲಿ ಬ್ಯುಸಿ ಇದ್ದರೆ, ಸಮಂತಾ ಅವರು ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಈಗ ಇಬ್ಬರೂ ವೆಬ್ ಸೀರಿಸ್ ಒಂದರಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ವರದಿ ಆಗಿದೆ. ವಿಶೇಷ ಎಂದರೆ  ಸಹೋದರ, ವಿರಾಟ್ ಕೊಹ್ಲಿ ಭಾವ ಕರ್ಣೇಶ್ ಶರ್ಮಾ (Karnesh Sharma) ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಅಧಿಕೃತವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಅನುಷ್ಕಾ ಶರ್ಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಮಂತಾ ಕೂಡ ಆ್ಯಕ್ಷನ್ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈಗ ಇಬ್ಬರೂ ಸೇರಿ ಒಂದು ಹೊಸ ವೆಬ್ ಸೀರಿಸ್ ನಿರ್ಮಾಣ ಮಾಡಲು ಹೊರಟಿದ್ದಾರೆ. ಸಮಂತಾ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ ಕರ್ಣೇಶ್ ಶರ್ಮಾ ಅವರು ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಡಲಿದ್ದಾರೆ.

ಕರ್ಣೇಶ್ ಶರ್ಮಾ ಅವರು ಈ ಮೊದಲು ‘ಪಾತಾಳ್ ಲೋಕ್​’ ವೆಬ್​ ಸೀರಿಸ್ ಹಾಗೂ ‘ಬುಲ್​ಬುಲ್​’, ‘ಪರಿ’ ಮೊದಲಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಅವರು ವೆಬ್ ಸೀರಿಸ್ ನಿರ್ದೇಶನಕ್ಕೆ ಕಾಲಿಡುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ 25 ಕೋಟಿ ರೂಪಾಯಿ ಖರ್ಚಾಗಲಿದೆ. ಸಮಂತಾಗೆ ಕಥೆ ಇಷ್ಟವಾಗಿದ್ದು, ಅದನ್ನು ನಿರ್ಮಾಣ ಮಾಡಲು ಅವರು ಕೂಡ ಆಸಕ್ತಿ ತೋರಿಸಿದ್ದಾರೆ.

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು. ಈ ವೆಬ್ ಸೀರಿಸ್ ನಿರ್ದೇಶನ ಮಾಡಿದ್ದ ರಾಜ್​ ಮತ್ತು ಡಿಕೆ ಹೊಸ ವೆಬ್ ಸೀರಿಸ್ ಡೈರೆಕ್ಷನ್ ಮಾಡುತ್ತಿದ್ದಾರೆ. ಇಂಗ್ಲಿಷ್ ‘ಸಿಟಾಡೆಲ್​’ನ ಭಾರತದ ವರ್ಷನ್​ ಇದಾಗಿದ್ದು, ಸಮಂತಾ ಇದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ವರುಣ್ ಧವನ್ ಕೂಡ ಇದರಲ್ಲಿ ನಟಿಸಿದ್ದಾರೆ. ಇದರಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

ಇದನ್ನೂ ಓದಿ:  ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್​ 1; ಸಿನಿಮಾ ಸೋತರೂ ಕಮ್ಮಿ ಆಗಿಲ್ಲ ಖ್ಯಾತಿ

ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೋಲು ಕಂಡಿದೆ. ಸದ್ಯ ಅವರು ‘ಖುಷಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ