AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು.

ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್
ಅನುಷ್ಕಾ-ಸಮಂತಾ-ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on: May 04, 2023 | 1:12 PM

Share

ಅನುಷ್ಕಾ ಶರ್ಮಾ ಹಾಗೂ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅನುಷ್ಕಾ ಬಾಲಿವುಡ್​ನಲ್ಲಿ ಬ್ಯುಸಿ ಇದ್ದರೆ, ಸಮಂತಾ ಅವರು ಟಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಈಗ ಇಬ್ಬರೂ ವೆಬ್ ಸೀರಿಸ್ ಒಂದರಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ವರದಿ ಆಗಿದೆ. ವಿಶೇಷ ಎಂದರೆ  ಸಹೋದರ, ವಿರಾಟ್ ಕೊಹ್ಲಿ ಭಾವ ಕರ್ಣೇಶ್ ಶರ್ಮಾ (Karnesh Sharma) ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಅಧಿಕೃತವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಅನುಷ್ಕಾ ಶರ್ಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಮಂತಾ ಕೂಡ ಆ್ಯಕ್ಷನ್ ಸಿನಿಮಾ ಮೂಲಕ ಫೇಮಸ್ ಆಗಿದ್ದಾರೆ. ಈಗ ಇಬ್ಬರೂ ಸೇರಿ ಒಂದು ಹೊಸ ವೆಬ್ ಸೀರಿಸ್ ನಿರ್ಮಾಣ ಮಾಡಲು ಹೊರಟಿದ್ದಾರೆ. ಸಮಂತಾ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ ಕರ್ಣೇಶ್ ಶರ್ಮಾ ಅವರು ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಡಲಿದ್ದಾರೆ.

ಕರ್ಣೇಶ್ ಶರ್ಮಾ ಅವರು ಈ ಮೊದಲು ‘ಪಾತಾಳ್ ಲೋಕ್​’ ವೆಬ್​ ಸೀರಿಸ್ ಹಾಗೂ ‘ಬುಲ್​ಬುಲ್​’, ‘ಪರಿ’ ಮೊದಲಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಅವರು ವೆಬ್ ಸೀರಿಸ್ ನಿರ್ದೇಶನಕ್ಕೆ ಕಾಲಿಡುತ್ತಿದ್ದಾರೆ. ಈ ವೆಬ್​ ಸೀರಿಸ್​ಗೆ 25 ಕೋಟಿ ರೂಪಾಯಿ ಖರ್ಚಾಗಲಿದೆ. ಸಮಂತಾಗೆ ಕಥೆ ಇಷ್ಟವಾಗಿದ್ದು, ಅದನ್ನು ನಿರ್ಮಾಣ ಮಾಡಲು ಅವರು ಕೂಡ ಆಸಕ್ತಿ ತೋರಿಸಿದ್ದಾರೆ.

ಸಮಂತಾ ಇತ್ತೀಚೆಗೆ ವೆಬ್ ಸೀರಿಸ್ ಕಡೆ ಹೆಚ್ಚು ಗಮನ ವಹಿಸುತ್ತಿದ್ದಾರೆ. ಈ ಮೊದಲು ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ನಟಿಸಿದ್ದರು. ಈ ವೆಬ್ ಸೀರಿಸ್ ನಿರ್ದೇಶನ ಮಾಡಿದ್ದ ರಾಜ್​ ಮತ್ತು ಡಿಕೆ ಹೊಸ ವೆಬ್ ಸೀರಿಸ್ ಡೈರೆಕ್ಷನ್ ಮಾಡುತ್ತಿದ್ದಾರೆ. ಇಂಗ್ಲಿಷ್ ‘ಸಿಟಾಡೆಲ್​’ನ ಭಾರತದ ವರ್ಷನ್​ ಇದಾಗಿದ್ದು, ಸಮಂತಾ ಇದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ವರುಣ್ ಧವನ್ ಕೂಡ ಇದರಲ್ಲಿ ನಟಿಸಿದ್ದಾರೆ. ಇದರಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

ಇದನ್ನೂ ಓದಿ:  ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್​ 1; ಸಿನಿಮಾ ಸೋತರೂ ಕಮ್ಮಿ ಆಗಿಲ್ಲ ಖ್ಯಾತಿ

ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೋಲು ಕಂಡಿದೆ. ಸದ್ಯ ಅವರು ‘ಖುಷಿ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ