ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ಸಮಂತಾ; ಆಫರ್ ಕೊಟ್ಟೋರು ಯಾರು?

ಸಮಂತಾ ಅವರು ‘ಖುಷಿ’ ಸಿನಿಮಾ ಸಕ್ಸಸ್ ಮೀಟ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ನೇರವಾಗಿ ಮುಂಬೈಗೆ ಹೋದರು. ಪಾರ್ಟಿ ಒಂದರಲ್ಲಿ ಸಮಂತಾ ಹಾಗೂ ಕರಣ್ ಜೋಹರ್ ಭೇಟಿ ಆಗಿದ್ದಾರಂತೆ. ಈ ವೇಳೆ ಕರಣ್ ಅವರು ಸಿನಿಮಾ ಒಂದರ ಬಗ್ಗೆ ಚರ್ಚೆ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ನಟಿಸೋಕೆ ಸಮಂತಾಗೆ ಆಫರ್ ನೀಡಲಾಗಿದೆ.

ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ಸಮಂತಾ; ಆಫರ್ ಕೊಟ್ಟೋರು ಯಾರು?
ಸಮಂತಾ-ಸಲ್ಮಾನ್ ಖಾನ್
Follow us
|

Updated on: Sep 19, 2023 | 6:30 AM

ಬಾಲಿವುಡ್ ನಟಿ ಸಮಂತಾ (Samantha) ಅವರು ಅಮೆರಿಕಕ್ಕೆ ತೆರಳಿದ್ದರು. ‘ಖುಷಿ’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪ್ರಚಾರ ಮಾಡುವ ಬದಲು ಅವರು ಅಲ್ಲಿಗೆ ತೆರಳಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಸದ್ಯ ಸಮಂತಾ ಮುಂಬೈನಲ್ಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್​ನಿಂದ ನೇರವಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ಮೂಲಗಳ ಪ್ರಕಾರ ಸಮಂತಾ ಅವರು ಸಲ್ಮಾನ್ ಖಾನ್ ಜೊತೆ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಕರಣ್ ಜೋಹರ್ ಅವರು ಬಂಡವಾಳ ಹೂಡಲಿದ್ದಾರಂತೆ.

ಸಮಂತಾ ಅವರು ‘ಖುಷಿ’ ಸಿನಿಮಾ ಸಕ್ಸಸ್ ಮೀಟ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರು ನೇರವಾಗಿ ಮುಂಬೈಗೆ ಹೋದರು. ಪಾರ್ಟಿ ಒಂದರಲ್ಲಿ ಸಮಂತಾ ಹಾಗೂ ಕರಣ್ ಜೋಹರ್ ಭೇಟಿ ಆಗಿದ್ದಾರಂತೆ. ಈ ವೇಳೆ ಕರಣ್ ಅವರು ಸಿನಿಮಾ ಒಂದರ ಬಗ್ಗೆ ಚರ್ಚೆ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ನಟಿಸೋಕೆ ಸಮಂತಾಗೆ ಆಫರ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ ಜೊತೆ ಸಲ್ಮಾನ್ ಖಾನ್ ಕೈ ಜೋಡಿಸಲಿದ್ದಾರಂತೆ. ಈ ವಿಚಾರ ಇತ್ತೀಚೆಗೆ ಚರ್ಚೆ ಆಗಿತ್ತು. ಇದಕ್ಕೆ ಸಲ್ಮಾನ್ ಖಾನ್ ಒಪ್ಪಿಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ಸಮಂತಾಗೆ ಆಫರ್ ನೀಡಲಾಗಿದೆ. ಅವರು ಈ ಚಿತ್ರ ಒಪ್ಪಿಕೊಂಡಿದ್ದಾರೆ ಎನ್ನುತ್ತಿವೆ ಮೂಲಗಳು. ಇದು ನಿಜವೇ ಆದಲ್ಲಿ ಸಮಂತಾ ಅಭಿಮಾನಿಗಳು ಖುಷಿಪಡಲಿದ್ದಾರೆ.

ಸಮಂತಾ ರುಥ್ ಪ್ರಭು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ಹಿಂದಿ ಚಿತ್ರರಂಗದತ್ತ ಒಲವು ತೋರುತ್ತಿದ್ದಾರೆ. ಹಿಂದಿ ವೆಬ್ ಸೀರಿಸ್​ಗಳಲ್ಲೂ ಅವರು ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಜೊತೆ ನಟಿಸಿದರೆ ಹಿಂದಿಯಲ್ಲಿ ಸಮಂತಾ ಬೇಡಿಕೆ ಹೆಚ್ಚಲಿದೆ.

ಇದನ್ನೂ ಓದಿ: ವಿಚ್ಛೇದನ ಕೊಟ್ಟು ಹೋದ ಸಮಂತಾಗೆ ಅನಾರೋಗ್ಯ ಅಂತ ತಿಳಿದಾಗ ಮಾಜಿ ಪತಿ ನಾಗ ಚೈತನ್ಯ ಹೀಗೆಲ್ಲ ಮಾಡಿದ್ರಾ? 

‘ಜವಾನ್’ ಸಿನಿಮಾದಲ್ಲಿ ಸಮಂತಾ ನಟಿಸಬೇಕಿತ್ತು. ಆದರೆ, ಈ ಆಫರ್​ನ ಅವರು ರಿಜೆಕ್ಟ್ ಮಾಡಿದರು. ಆ ಬಳಿಕ ಸಮಂತಾ ಜಾಗಕ್ಕೆ ನಯನತಾರಾ ಬಂದರು. ಮೂಲಗಳ ಪ್ರಕಾರ ದೀಪಿಕಾ ಮಾಡಿದ ಪಾತ್ರದಲ್ಲಿ ನಟಿಸೋಕು ಸಮಂತಾಗೆ ಆಫರ್ ನೀಡಲಾಗಿತ್ತು. ಅದನ್ನು ಕೂಡ ಅವರು ರಿಜೆಕ್ಟ್ ಮಾಡಿದ್ದರು. ಈಗ ಸಲ್ಮಾನ್ ಖಾನ್ ಜೊತೆ ನಟಿಸೋ ಆಯ್ಕೆಯನ್ನು ಅವರು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು