AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಮೇಲೆ ಪ್ರೀತಿ, ‘ಆಲ್ಫಾ’ ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಮಯ್ ರೈನಾ

Samay Raina movie: ‘ಆಲ್ಫಾ’ ಸಿನಿಮಾಕ್ಕೆ ನೆಗೆಟಿವ್ ವಿಮರ್ಶೆಗಳು ಬಂದ ಹೊರತಾಗಿಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ವಿಶೇಷವಾಗಿ ಆಲಿಯಾ ಅಭಿಮಾನಿಗಳು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುತ್ತಿದ್ದಾರೆ. ಇದೀಗ ಯೂಟ್ಯೂಬ್ ಸೆನ್ಸೇಷನ್ ಎನಿಸಿಕೊಂಡಿರುವ ಸ್ಟಾಂಡಪ್ ಕಮಿಡಿಯನ್ ಸಮಯ್ ರೈನಾ, ಆಲಿಯಾ ಹಾಗೂ ಶರ್ವರಿ ಮೇಲಿನ ಪ್ರೀತಿಗಾಗಿ ‘ಆಲ್ಫಾ’ ಸಿನಿಮಾ ಪ್ರದರ್ಶಿಸುತ್ತಿರುವ ಇಡೀ ಚಿತ್ರಮಂದಿರವನ್ನು ಬುಕ್ ಮಾಡಿದ್ದಾರೆ. ಆಲಿಯಾ ಹಾಗೂ ಶರ್ವರಿ ಮೇಲಿನ ಪ್ರೀತಿ, ಗೌರವಕ್ಕಾಗಿ ಹೀಗೆ ಮಾಡಿದ್ದಾಗಿ ಅವರು ಹೇಳಿದ್ದಾರೆ.

ಆಲಿಯಾ ಮೇಲೆ ಪ್ರೀತಿ, ‘ಆಲ್ಫಾ’ ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಸಮಯ್ ರೈನಾ
Samay Raina
ಮಂಜುನಾಥ ಸಿ.
|

Updated on: Jul 05, 2026 | 8:10 PM

Share

ಬಾಲಿವುಡ್ ನಟಿಯರಾದ ಆಲಿಯಾ ಭಟ್ (Alia Bhatt) ಮತ್ತು ಶರ್ವರಿ ವಾಘ್ ನಟಿಸಿರುವ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಫಾ’ ಕೆಲವೇ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾಕ್ಕೆ ನೆಗೆಟಿವ್ ವಿಮರ್ಶೆಗಳು ಬಂದ ಹೊರತಾಗಿಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ವಿಶೇಷವಾಗಿ ಆಲಿಯಾ ಅಭಿಮಾನಿಗಳು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುತ್ತಿದ್ದಾರೆ. ಇದೀಗ ಯೂಟ್ಯೂಬ್ ಸೆನ್ಸೇಷನ್ ಎನಿಸಿಕೊಂಡಿರುವ ಸ್ಟಾಂಡಪ್ ಕಮಿಡಿಯನ್ ಸಮಯ್ ರೈನಾ, ಆಲಿಯಾ ಹಾಗೂ ಶರ್ವರಿ ಮೇಲಿನ ಪ್ರೀತಿಗಾಗಿ ‘ಆಲ್ಫಾ’ ಸಿನಿಮಾ ಪ್ರದರ್ಶಿಸುತ್ತಿರುವ ಇಡೀ ಚಿತ್ರಮಂದಿರವನ್ನು ಬುಕ್ ಮಾಡಿದ್ದಾರೆ. ಆಲಿಯಾ ಹಾಗೂ ಶರ್ವರಿ ಮೇಲಿನ ಪ್ರೀತಿ, ಗೌರವಕ್ಕಾಗಿ ಹೀಗೆ ಮಾಡಿದ್ದಾಗಿ ಅವರು ಹೇಳಿದ್ದಾರೆ.

ಶನಿವಾರದಂದು ಸಮಯ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದರು. ‘ಭಾನುವಾರ ನಾನು ಮುಂಬೈನಲ್ಲಿ ‘ಆಲ್ಫಾ’ ಚಿತ್ರವನ್ನು ನೋಡಲು ಹೋಗುತ್ತಿದ್ದೇನೆ. ನಾನು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದೇನೆ ನನ್ನ ಜೊತೆಗೆ ಇನ್ನೂ 250 ಮಂದಿ ‘ಆಲ್ಫಾ’ ಸಿನಿಮಾ ನೋಡಬಹುದಾಗಿದ್ದು, ಮುಂಚಿತವಾಗಿ ರಿಜಿಸ್ಟರ್ ಮಾಡಿಕೊಂಡವರಿಗೆ ವಾಟ್ಸ್ ಅಪ್ ಮೂಲಕ ಟಿಕೆಟ್ ಕಳಿಸುತ್ತೇನೆ’ ಎಂದಿದ್ದರು. ಅಂತೆಯೇ ಇಂದು ಎಲ್ಲರಿಗೂ ಸಿನಿಮಾ ತೋರಿಸಿದ್ದಾರಂತೆ ಸಮಯ್ ರೈನಾ.

‘ಆಲಿಯಾ ಮತ್ತು ಶರ್ವರಿ ನನ್ನ ‘ಇಂಡಿಯಾ ಗಾಟ್ ಲೇಟೆಂಟ್’ ಸೀಸನ್ 2ರ ಮೊದಲ ಸಂಚಿಕೆಗೆ ಅತಿಥಿಗಳಾಗಿ ಬಂದಿದ್ದರು. ಬಹಳ ಪ್ರೀತಿಯಿಂದ ನಮ್ಮೊಂದಿಗೆ ವರ್ತಿಸಿದರು. ಅವರಿಗೆ ಪ್ರೀತಿಯನ್ನು ತೋರಿಸಲು ಇದು ನನ್ನ ಕಡೆಯಿಂದ ಒಂದು ಸಣ್ಣ ಪ್ರಯತ್ನ ಅಷ್ಟೇ. ಅವರಿಬ್ಬರನ್ನೂ ನಾನು ಬಹಳ ಇಷ್ಟಪಡುತ್ತೇನೆ ಮತ್ತು ಅವರ ಚಿತ್ರವನ್ನು ನೋಡಲು ತುಂಬಾ ಉತ್ಸುಕನಾಗಿದ್ದೇನೆ. ನಾಳೆ ನಿಮ್ಮನ್ನು ಭೇಟಿಯಾಗುತ್ತೇನೆ’ ಎಂದು ಪೋಸ್ಟ್ ಹಂಚಿಕೊಂಡಿದ್ದರು.

ಇದನ್ನೂ ಓದಿ:ಮತ್ತೆ ಮತ್ತೆ ಮುಗ್ಗರಿಸಿದರೂ ಬುದ್ಧಿ ಕಲಿಯದ ಆಲಿಯಾ ಭಟ್

ಸಮಯ್ ರೈನಾ ಅವರ ‘ಇಂಡಿಯಾ ಗಾಟ್ ಲೇಟೆಂಟ್’ ಶೋ ವಿವಾದಕ್ಕೆ ಕಾರಣವಾಗಿತ್ತು. ಅವರ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ಕೊನೆಗೆ ಅವರು ತಮ್ಮ ಶೋನ ಎಲ್ಲ ಎಪಿಸೋಡುಗಳನ್ನು ಯೂಟ್ಯೂಬ್​​ನಿಂದ ಡಿಲೀಟ್ ಮಾಡಬೇಕಾಯ್ತು. ಪೊಲೀಸರ ವಿಚಾರಣೆ ಎದುರಿಸಬೇಕಾಯ್ತು. ಆದರೆ ಇತ್ತೀಚೆಗೆ ಅವರು ಅದೇ ಶೋನ ಎರಡನೇ ಸೀಸನ್ ಪ್ರಾರಂಭ ಮಾಡಿದರು. ಆ ಶೋನ ಮೊದಲ ಎಪಿಸೋಡಿಗೆ ಆಲಿಯಾ ಮತ್ತು ಶರ್ವರಿ ಅವರುಗಳು ಅತಿಥಿಗಳಾಗಿ ಬಂದಿದ್ದರು. ಸಾಕಷ್ಟು ವಿವಾದಗಳಿದ್ದರೂ ಅದ್ಯಾವುದನ್ನೂ ಲೆಕ್ಕಿಸದೆ ತಮ್ಮ ಶೋಗೆ ಬಂದಿದ್ದಕ್ಕೆ ಆಲಿಯಾ ಹಾಗೂ ಶರ್ವರಿ ಅವರಿಗೆ ಕೃತಜ್ಞತೆ ಹೇಳಿರುವ ಸಮಯ್, ಅವರ ಸಿನಿಮಾ ಟಿಕೆಟ್ ಗಳನ್ನು ಬುಕ್ ಮಾಡಿದ್ದರು.

‘ಆಲ್ಫಾ’ ಸಿನಿಮಾವು ಸ್ಪೈ ಆಕ್ಷನ್ ಸಿನಿಮಾ ಆಗಿದೆ. ಸಿನಿಮಾನಲ್ಲಿ ಆಲಿಯಾ, ಗೂಢಚಾರಿಗಳಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಹೃತಿಕ್ ರೋಷನ್ ವಿಶೇಷ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಅನ್ನು ಯಶ್ ರಾಜ್ ಫಿಲಮ್ಸ್ ನಿರ್ಮಾಣ ಮಾಡಿದ್ದು, ಶಿವ ರಾವಳ್ಳಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಎರಡು ದಿನಕ್ಕೆ ಸುಮಾರು 30 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!