AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದ ಬಳಿಕ ಮತ್ತೆ ಶಾರುಖ್ ಖಾನ್ ಮಗನ ಮೇಲೆ ಕೇಸ್ ಹಾಕಿದ ಸಮೀರ್ ವಾಂಖೆಡೆ

ಡ್ರಗ್ಸ್ ಸೇವನೆ ಆರೋಪದಲ್ಲಿ ಆರ್ಯನ್ ಖಾನ್ ಅವರನ್ನು 2021ರಲ್ಲಿ ಸಮೀರ್ ವಾಂಖೆಡೆ ಅರೆಸ್ಟ್ ಮಾಡಿದ್ದರು. ಈಗ ಆರ್ಯನ್ ಖಾನ್ ಅವರು ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯ ಗೆಲುವಿನ ಖುಷಿಯಲ್ಲಿ ಇದ್ದಾರೆ. ಅದರ ನಡುವೆ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಡ್ರಗ್ಸ್ ಪ್ರಕರಣದ ಬಳಿಕ ಮತ್ತೆ ಶಾರುಖ್ ಖಾನ್ ಮಗನ ಮೇಲೆ ಕೇಸ್ ಹಾಕಿದ ಸಮೀರ್ ವಾಂಖೆಡೆ
Sameer Wankhede, Aryan Khan
ಮದನ್​ ಕುಮಾರ್​
|

Updated on: Sep 25, 2025 | 7:02 PM

Share

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ (Aryan Khan) ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ ಆಗಿದೆ. ನೆಟ್​ಫ್ಲಿಕ್ಸ್ ಮೂಲಕ ಬಿಡುಗಡೆ ಆಗಿರುವ ಈ ವೆಬ್ ಸರಣಿಗೆ ಶಾರುಖ್ ಖಾನ್ (Shah Rukh Khan) ಅವರು ಬಂಡವಾಳ ಹೂಡಿದ್ದಾರೆ. ವೀಕ್ಷಕರಿಂದ ಈ ವೆಬ್ ಸಿರೀಸ್ ಮೆಚ್ಚುಗೆ ಪಡೆದಿದೆ. ಆದರೆ ವಿವಾದ ಕೂಡ ಶುರುವಾಗಿದೆ. ಆರ್ಯನ್ ಖಾನ್ ವಿರುದ್ಧ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ನೀಡುವಂತೆ ಅವರು ಕೇಸ್ ಹಾಕಿದ್ದಾರೆ.

ಆರ್ಯನ್ ಖಾನ್ ವರ್ಸಸ್ ಸಮೀರ್ ವಾಂಖೆಡೆ ಕಾನೂನು ಸಮರ ಶುರು ಆಗಿರುವುದು ಇದೇ ಮೊದಲೇನೂ ಅಲ್ಲ. 2021ರಲ್ಲಿ ಆರ್ಯನ್ ಖಾನ್ ಅವರು ಡ್ರಗ್ಸ್ ಪಾರ್ಟಿ ಆರೋಪದಲ್ಲಿ ಅರೆಸ್ಟ್ ಆಗಿದ್ದರು. ಆಗ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಅವರೇ ಕಾರ್ಯಾಚರಣೆಯ ಮುಂದಾಳತ್ವ ವಹಿಸಿದ್ದರು. ಈಗ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯಲ್ಲಿ ತಮ್ಮ ಬಗ್ಗೆ ಮಾನಹಾನಿ ಆಗುವಂತೆ ಚಿತ್ರಿಸಲಾಗಿದೆ ಎಂದು ಸಮೀರ್ ವಾಂಖೆಡೆ ಆರೋಪಿಸಿದ್ದಾರೆ.

ಬಾಂಬೆ ಹೈಕೋರ್ಟ್​ ಮತ್ತು ಎನ್​ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಡ್ರಗ್ಸ್ ಕೇಸ್ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಿರುವಾಗಲೇ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯು​​ ಮಾದಕವಸ್ತು ನಿಗ್ರಹ ದಳ ಸಂಸ್ಥೆಯನ್ನು ನಕಾರಾತ್ಮಕ ತೋರಿಸಿದೆ. ಇದರಿಂದಾಗಿ ತಮ್ಮ ವೃತ್ತಿಪರ ಖ್ಯಾತಿಗೆ ಹಾನಿಯಾಗುತ್ತದೆ. ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದಲೇ ಈ ವೆಬ್ ಸರಣಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಮೀರ್ ವಾಂಖೆಡೆ ಅವರು ಕೇಸ್ ಹಾಕಿದ್ದಾರೆ.

ಈ ವೆಬ್ ಸರಣಿಯನ್ನು ಅವಹೇಳನಕಾರಿ ಎಂದು ಘೋಷಿಸಬೇಕು ಹಾಗೂ ನೆಟ್​ಫ್ಲಿಕ್ಸ್ ಮುಂತಾದ ಯಾವುದೇ ಒಟಿಟಿಯಲ್ಲಿ ಪ್ರಸಾರ ಆಗದಂತೆ ತಡೆಯಬೇಕು ಎಂದು ಸಮೀರ್ ವಾಂಖೆಡೆ ಅವರು ದೆಹಲಿ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದಾರೆ. ಆರ್ಯನ್ ಖಾನ್, ನೆಟ್​ಫ್ಲಿಕ್ಸ್, ರೆಡ್​ ಚಿಲ್ಲೀಸ್ ಎಂಟರ್​ಟೇನ್ಮೆಂಟ್ ಮೇಲೆ ಸಮೀರ್ ವಾಂಖೆಡೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇದನ್ನೂ ಓದಿ: ಇವರೇ ಶಾರುಖ್ ಖಾನ್ ಸೊಸೆ? ಈ ಮಾಡೆಲ್ ಆರ್ಯನ್ ಖಾನ್ ಮನದರಸಿ

2 ಕೋಟಿ ರೂಪಾಯಿ ಮನನಷ್ಟ ಪರಿಹಾರ ಮೊತ್ತವನ್ನು ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ನೀಡುವಂತೆ ಆದೇಶಿಸಬೇಕು ಎಂದು ಸಮೀರ್ ವಾಂಖೆಡೆ ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಯುವುದು ಬಾಕಿ ಇದೆ. ಈ ಮೂಲಕ 2021ರ ಬಳಿಕ ಮತ್ತೆ ಆರ್ಯನ್ ಖಾನ್ ವರ್ಸಸ್ ಸಮೀರ್ ವಾಂಖೆಡೆ ಕಾನೂನು ಸಮರ ಶುರು ಆದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್