AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದ ಬಳಿಕ ಮತ್ತೆ ಶಾರುಖ್ ಖಾನ್ ಮಗನ ಮೇಲೆ ಕೇಸ್ ಹಾಕಿದ ಸಮೀರ್ ವಾಂಖೆಡೆ

ಡ್ರಗ್ಸ್ ಸೇವನೆ ಆರೋಪದಲ್ಲಿ ಆರ್ಯನ್ ಖಾನ್ ಅವರನ್ನು 2021ರಲ್ಲಿ ಸಮೀರ್ ವಾಂಖೆಡೆ ಅರೆಸ್ಟ್ ಮಾಡಿದ್ದರು. ಈಗ ಆರ್ಯನ್ ಖಾನ್ ಅವರು ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯ ಗೆಲುವಿನ ಖುಷಿಯಲ್ಲಿ ಇದ್ದಾರೆ. ಅದರ ನಡುವೆ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಡ್ರಗ್ಸ್ ಪ್ರಕರಣದ ಬಳಿಕ ಮತ್ತೆ ಶಾರುಖ್ ಖಾನ್ ಮಗನ ಮೇಲೆ ಕೇಸ್ ಹಾಕಿದ ಸಮೀರ್ ವಾಂಖೆಡೆ
Sameer Wankhede, Aryan Khan
ಮದನ್​ ಕುಮಾರ್​
|

Updated on: Sep 25, 2025 | 7:02 PM

Share

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ (Aryan Khan) ಈಗ ನಿರ್ದೇಶಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರು ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ಬಿಡುಗಡೆ ಆಗಿದೆ. ನೆಟ್​ಫ್ಲಿಕ್ಸ್ ಮೂಲಕ ಬಿಡುಗಡೆ ಆಗಿರುವ ಈ ವೆಬ್ ಸರಣಿಗೆ ಶಾರುಖ್ ಖಾನ್ (Shah Rukh Khan) ಅವರು ಬಂಡವಾಳ ಹೂಡಿದ್ದಾರೆ. ವೀಕ್ಷಕರಿಂದ ಈ ವೆಬ್ ಸಿರೀಸ್ ಮೆಚ್ಚುಗೆ ಪಡೆದಿದೆ. ಆದರೆ ವಿವಾದ ಕೂಡ ಶುರುವಾಗಿದೆ. ಆರ್ಯನ್ ಖಾನ್ ವಿರುದ್ಧ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. 2 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ನೀಡುವಂತೆ ಅವರು ಕೇಸ್ ಹಾಕಿದ್ದಾರೆ.

ಆರ್ಯನ್ ಖಾನ್ ವರ್ಸಸ್ ಸಮೀರ್ ವಾಂಖೆಡೆ ಕಾನೂನು ಸಮರ ಶುರು ಆಗಿರುವುದು ಇದೇ ಮೊದಲೇನೂ ಅಲ್ಲ. 2021ರಲ್ಲಿ ಆರ್ಯನ್ ಖಾನ್ ಅವರು ಡ್ರಗ್ಸ್ ಪಾರ್ಟಿ ಆರೋಪದಲ್ಲಿ ಅರೆಸ್ಟ್ ಆಗಿದ್ದರು. ಆಗ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿಯಾಗಿದ್ದ ಸಮೀರ್ ವಾಂಖೆಡೆ ಅವರೇ ಕಾರ್ಯಾಚರಣೆಯ ಮುಂದಾಳತ್ವ ವಹಿಸಿದ್ದರು. ಈಗ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯಲ್ಲಿ ತಮ್ಮ ಬಗ್ಗೆ ಮಾನಹಾನಿ ಆಗುವಂತೆ ಚಿತ್ರಿಸಲಾಗಿದೆ ಎಂದು ಸಮೀರ್ ವಾಂಖೆಡೆ ಆರೋಪಿಸಿದ್ದಾರೆ.

ಬಾಂಬೆ ಹೈಕೋರ್ಟ್​ ಮತ್ತು ಎನ್​ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಡ್ರಗ್ಸ್ ಕೇಸ್ ವಿಚಾರಣೆ ಇನ್ನೂ ಬಾಕಿ ಇದೆ. ಹೀಗಿರುವಾಗಲೇ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯು​​ ಮಾದಕವಸ್ತು ನಿಗ್ರಹ ದಳ ಸಂಸ್ಥೆಯನ್ನು ನಕಾರಾತ್ಮಕ ತೋರಿಸಿದೆ. ಇದರಿಂದಾಗಿ ತಮ್ಮ ವೃತ್ತಿಪರ ಖ್ಯಾತಿಗೆ ಹಾನಿಯಾಗುತ್ತದೆ. ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದಲೇ ಈ ವೆಬ್ ಸರಣಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಮೀರ್ ವಾಂಖೆಡೆ ಅವರು ಕೇಸ್ ಹಾಕಿದ್ದಾರೆ.

ಈ ವೆಬ್ ಸರಣಿಯನ್ನು ಅವಹೇಳನಕಾರಿ ಎಂದು ಘೋಷಿಸಬೇಕು ಹಾಗೂ ನೆಟ್​ಫ್ಲಿಕ್ಸ್ ಮುಂತಾದ ಯಾವುದೇ ಒಟಿಟಿಯಲ್ಲಿ ಪ್ರಸಾರ ಆಗದಂತೆ ತಡೆಯಬೇಕು ಎಂದು ಸಮೀರ್ ವಾಂಖೆಡೆ ಅವರು ದೆಹಲಿ ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದಾರೆ. ಆರ್ಯನ್ ಖಾನ್, ನೆಟ್​ಫ್ಲಿಕ್ಸ್, ರೆಡ್​ ಚಿಲ್ಲೀಸ್ ಎಂಟರ್​ಟೇನ್ಮೆಂಟ್ ಮೇಲೆ ಸಮೀರ್ ವಾಂಖೆಡೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇದನ್ನೂ ಓದಿ: ಇವರೇ ಶಾರುಖ್ ಖಾನ್ ಸೊಸೆ? ಈ ಮಾಡೆಲ್ ಆರ್ಯನ್ ಖಾನ್ ಮನದರಸಿ

2 ಕೋಟಿ ರೂಪಾಯಿ ಮನನಷ್ಟ ಪರಿಹಾರ ಮೊತ್ತವನ್ನು ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ನೀಡುವಂತೆ ಆದೇಶಿಸಬೇಕು ಎಂದು ಸಮೀರ್ ವಾಂಖೆಡೆ ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಯುವುದು ಬಾಕಿ ಇದೆ. ಈ ಮೂಲಕ 2021ರ ಬಳಿಕ ಮತ್ತೆ ಆರ್ಯನ್ ಖಾನ್ ವರ್ಸಸ್ ಸಮೀರ್ ವಾಂಖೆಡೆ ಕಾನೂನು ಸಮರ ಶುರು ಆದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ