AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮಗನನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿಗೆ ಈಗ ಹೊಸ ತಲೆನೋವು; ಇದು ಯಾರ ಸಂಚು?

ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಯಾರೋ ಫಾಲೋ ಮಾಡುತ್ತಿರುವುದು ಗೊತ್ತಾಗಿದೆ. ಅವರು ಹೋದಲ್ಲಿ ಬಂದಲ್ಲಿ ಯಾರೋ ಇಬ್ಬರು ಹಿಂಬಾಲಿಸುತ್ತಿದ್ದಾರೆ.

ಶಾರುಖ್​ ಮಗನನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿಗೆ ಈಗ ಹೊಸ ತಲೆನೋವು; ಇದು ಯಾರ ಸಂಚು?
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on: Oct 12, 2021 | 4:19 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರು ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇಲೆ ಸಿಕ್ಕ ಬಿದ್ದ ಬಳಿಕ ಆ ಬಗ್ಗೆ ಹಲವು ಆಯಾಮದಲ್ಲಿ ಚರ್ಚೆ ಆಗುತ್ತಿದೆ. ಸ್ಟಾರ್​ ಪುತ್ರನೆಂಬ ಮುಲಾಜಿಗೂ ಒಳಗಾಗದೇ ಅವರನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಆದರೆ ಕೆಲವರು ಸಮೀರ್​ ಕಾರ್ಯವೈಖರಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಎಂಬ ಅಭಿಪ್ರಾಯ ಕೂಡ ಹಲವರಿಂದ ವ್ಯಕ್ತವಾಗಿದೆ. ಅದರ ನಡುವೆ ಸಮೀರ್​ ವಾಂಖೆಡೆ ಅವರಿಗೆ ಇನ್ನೊಂದು ತಲೆಬಿಸಿ ಶುರುವಾಗಿದೆ.

ಆರ್ಯನ್​ ಖಾನ್​ ಅವರ ಡ್ರಗ್ಸ್​ ಕೇಸ್​ ಯಾವ ರೀತಿಯಲ್ಲಿ ಅಂತ್ಯ ಕಾಣಲಿದೆಯೋ ಗೊತ್ತಿಲ್ಲ. ಅವರಿಗೆ ಸೂಕ್ತ ಶಿಕ್ಷೆ ಕೊಡಿಸಲು ಎನ್​ಸಿಬಿ ಅಧಿಕಾರಿಗಳು ಪಣ ತೊಟ್ಟಂತಿದೆ. ಸೂಕ್ತ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ನೀಡಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಈ ನಡುವೆ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಯಾರೋ ಫಾಲೋ ಮಾಡುತ್ತಿರುವುದು ಗೊತ್ತಾಗಿದೆ. ಅವರು ಹೋದಲ್ಲಿ ಬಂದಲ್ಲಿ ಯಾರೋ ಇಬ್ಬರು ಹಿಂಬಾಲಿಸುತ್ತಿದ್ದಾರೆ. ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸ್​ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಮೀರ್​ ವಾಂಖೆಡೆ ದೂರು ನೀಡಿದ್ದಾರೆ.

‘ಸಮೀರ್​ ವಾಂಖೆಡೆ ಮೇಲೆ ಕಣ್ಣಿಡಬೇಕು ಎಂದು ಪೊಲೀಸರಿಗಾಗಲಿ ಅಥವಾ ರಾಜ್ಯ ಗುಪ್ತಚರ ಇಲಾಖೆಗಾಗಲಿ ನಾವು ಸೂಚನೆ ನೀಡಿಲ್ಲ. ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಸಮೀರ್​ ಅವರು ದೂರು ನೀಡಿದ್ದಾರೆ. ಈ ಬಗ್ಗೆ ನಾವು ಗಮನ ಹರಿಸುತ್ತೇವೆ’ ಎಂದು ಮಹಾರಾಷ್ಟ್ರ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ.

ತಮ್ಮ ತಾಯಿಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ಸಮೀರ್​ ವಾಂಖೆಡೆ ಅವರು ಆಗಾಗ ಭೇಟಿ ನೀಡುತ್ತಾರೆ. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡ ಬಂದ ವ್ಯಕ್ತಿಗಳು ತಮ್ಮನ್ನು ತಾವು ಪೊಲೀಸರು ಎಂದು ಹೇಳಿಕೊಂಡು, ಆ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದರ ಹಿಂದೆ ಯಾರ ಕೈವಾಡ ಇದೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ