Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶಿಸಿದ ಸಿನಿಮಾಗಳಲ್ಲಿನ ರಣ್​ವಿಜಯ್​ ಸಿಂಗ್​ ಮತ್ತು ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಚಿತ್ರದಲ್ಲಿ ಮುಖಾಮುಖಿ ಆಗಬೇಕಿತ್ತು. ಆ ರೀತಿಯಲ್ಲಿ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿತ್ತು. ಆದರೆ ಆ ದೃಶ್ಯದ ಶೂಟಿಂಗ್​ ಮಾಡಲು ಒಂದು ಸಮಸ್ಯೆ ಎದುರಾಯಿತು. ಆ ಕಾರಣದಿಂದ ಸಿನಿಮ್ಯಾಟಿಕ್​ ಯೂನಿವರ್ಸ್​ ಐಡಿಯಾ ಜಾರಿಗೆ ಬರಲಿಲ್ಲ.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​
ಶಾಹಿದ್​ ಕಪೂರ್​, ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
|

Updated on: Jun 05, 2024 | 10:16 PM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಈವರೆಗೂ ಮಾಡಿರುವುದು ಮೂರು ಸಿನಿಮಾ ಮಾತ್ರ. ಆದರೆ ಅವರಿಗೆ ಸಿಕ್ಕಿರುವ ಯಶಸ್ಸು ಬಹಳ ದೊಡ್ಡದು. ತೆಲುಗಿನಲ್ಲಿ ಅವರು ಮಾಡಿದ ಮೊದಲ ಸಿನಿಮಾ ‘ಅರ್ಜುನ್​ ರೆಡ್ಡಿ’ ಸೂಪರ್​ ಹಿಟ್​ ಆಯಿತು. ಆ ಬಳಿಕ ಅದೇ ಸಿನಿಮಾವನ್ನು ಅವರು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ (Kabir Singh) ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ನಂತರ ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿ ಭಾರಿ ಖ್ಯಾತಿ ಗಳಿಸಿದರು. ವಿಶೇಷ ಏನೆಂದರೆ, ‘ಅನಿಮಲ್​’ (Animal) ಸಿನಿಮಾದಲ್ಲಿ ‘ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​’ ಮಾಡಲು ಪ್ಲ್ಯಾನ್​ ನಡೆದಿತ್ತು. ಆದರೆ ಕೊನೇ ಹಂತದಲ್ಲಿ ಅದು ಕ್ಯಾನ್ಸಲ್​ ಆಯಿತು.

ಒಬ್ಬರೇ ನಿರ್ದೇಶಕರ ಬೇರೆ ಬೇರೆ ಸಿನಿಮಾಗಳ ಪಾತ್ರಗಳು ಒಂದಕ್ಕೊಂದು ಲಿಂಕ್​ ಹೊಂದಿರುವುದನ್ನು ಸಿನಿಮ್ಯಾಟಿಕ್​ ಯೂನಿವರ್ಸ್​ ಎನ್ನುತ್ತಾರೆ. ತಮಿಳಿನ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಇದನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಕೂಡ ಆ ರೀತಿ ಒಂದು ಪ್ಲ್ಯಾನ್​ ಮಾಡಿಕೊಂಡಿದ್ದರು ಎಂಬ ಮಾಹಿತಿ ಈಗ ತಿಳಿದುಬಂದಿದೆ.

ರಣಬೀರ್​ ಕಪೂರ್​ ಮಾಡಿದ ರಣ್​ವಿಜಯ್​ ಸಿಂಗ್​ ಪಾತ್ರ ಮತ್ತು ಶಾಹಿದ್​ ಕಪೂರ್​ ಮಾಡಿದ್ದ ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಸಿನಿಮಾದಲ್ಲಿ ಒಂದನ್ನೊಂದು ಭೇಟಿ ಮಾಡಬೇಕಿತ್ತು. ರಣ್​ವಿಜಯ್​ ಗುಂಡಿನ ದಾಳಿಗೆ ಒಳಗಾದ ಬಳಿಕ ಆತನನ್ನು ಆಸ್ಪತ್ರೆಗೆ ಸೇರಿಸಲಾಗುತ್ತದೆ. ಅಲ್ಲಿ ಅವನಿಗೆ ಚಿಕಿತ್ಸೆ ನೀಡಲು ಬರುವ ವೈದ್ಯನೇ ಕಬೀರ್ ಸಿಂಗ್​ ಆಗಿರಬೇಕಿತ್ತು. ಆದರೆ ಈ ರೀತಿ ದೃಶ್ಯಕ್ಕೆ ಶಾಹಿದ್​ ಕಪೂರ್​ ಅವರ ಡೇಟ್ಸ್​ ಸಿಗಲಿಲ್ಲ. ಹಾಗಾಗಿ ಕೊನೆ ಹಂತದಲ್ಲಿ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಆ ಐಡಿಯಾವನ್ನು ಕೈ ಬಿಡಬೇಕಾಯಿತು.

ಇದನ್ನೂ ಓದಿ: ‘ಆ ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿದೆ’ ಎಂದ ನಟನಿಗೆ ಸಂದೀಪ್​ ರೆಡ್ಡಿ ವಂಗಾ ನೀಡಿದ ಉತ್ತರ ಏನು?

ಸಂದೀಪ್​ ರೆಡ್ಡಿ ವಂಗಾ ನಿರ್ದೇಶಿಸಿದ ಪ್ರತಿ ಸಿನಿಮಾಗಳು ಕೂಡ ವಿವಾದ ಮಾಡಿಕೊಂಡಿವೆ. ಅವರ ಸಿನಿಮಾದಲ್ಲಿ ಸ್ತ್ರೀ ವಿರೋಧಿ ಅಂಶಗಳು ಇವೆ ಎಂದು ಅನೇಕರು ತಕರಾರು ತೆಗೆದಿದ್ದಾರೆ. ವಿಮರ್ಶಕರು ಕೂಡ ಈ ಸಿನಿಮಾಗಳನ್ನು ತೆಗಳಿದ್ದಾರೆ. ಹಾಗಿದ್ದರೂ ಪ್ರೇಕ್ಷಕರು ‘ಅನಿಮಲ್​’ ಸಿನಿಮಾವನ್ನು ಮುಗಿಬಿದ್ದು ನೋಡಿದರು ಎಂಬುದು ಅಚ್ಚರಿ. ಈಗ ಪ್ರಭಾಸ್​ ಜೊತೆ ‘ಸ್ಪಿರಿಟ್​’ ಸಿನಿಮಾ ಮಾಡಲು ಸಂದೀಪ್​ ರೆಡ್ಡಿ ವಂಗಾ ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್