AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶಿಸಿದ ಸಿನಿಮಾಗಳಲ್ಲಿನ ರಣ್​ವಿಜಯ್​ ಸಿಂಗ್​ ಮತ್ತು ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಚಿತ್ರದಲ್ಲಿ ಮುಖಾಮುಖಿ ಆಗಬೇಕಿತ್ತು. ಆ ರೀತಿಯಲ್ಲಿ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿತ್ತು. ಆದರೆ ಆ ದೃಶ್ಯದ ಶೂಟಿಂಗ್​ ಮಾಡಲು ಒಂದು ಸಮಸ್ಯೆ ಎದುರಾಯಿತು. ಆ ಕಾರಣದಿಂದ ಸಿನಿಮ್ಯಾಟಿಕ್​ ಯೂನಿವರ್ಸ್​ ಐಡಿಯಾ ಜಾರಿಗೆ ಬರಲಿಲ್ಲ.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​
ಶಾಹಿದ್​ ಕಪೂರ್​, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jun 05, 2024 | 10:16 PM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಈವರೆಗೂ ಮಾಡಿರುವುದು ಮೂರು ಸಿನಿಮಾ ಮಾತ್ರ. ಆದರೆ ಅವರಿಗೆ ಸಿಕ್ಕಿರುವ ಯಶಸ್ಸು ಬಹಳ ದೊಡ್ಡದು. ತೆಲುಗಿನಲ್ಲಿ ಅವರು ಮಾಡಿದ ಮೊದಲ ಸಿನಿಮಾ ‘ಅರ್ಜುನ್​ ರೆಡ್ಡಿ’ ಸೂಪರ್​ ಹಿಟ್​ ಆಯಿತು. ಆ ಬಳಿಕ ಅದೇ ಸಿನಿಮಾವನ್ನು ಅವರು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ (Kabir Singh) ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ನಂತರ ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿ ಭಾರಿ ಖ್ಯಾತಿ ಗಳಿಸಿದರು. ವಿಶೇಷ ಏನೆಂದರೆ, ‘ಅನಿಮಲ್​’ (Animal) ಸಿನಿಮಾದಲ್ಲಿ ‘ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​’ ಮಾಡಲು ಪ್ಲ್ಯಾನ್​ ನಡೆದಿತ್ತು. ಆದರೆ ಕೊನೇ ಹಂತದಲ್ಲಿ ಅದು ಕ್ಯಾನ್ಸಲ್​ ಆಯಿತು.

ಒಬ್ಬರೇ ನಿರ್ದೇಶಕರ ಬೇರೆ ಬೇರೆ ಸಿನಿಮಾಗಳ ಪಾತ್ರಗಳು ಒಂದಕ್ಕೊಂದು ಲಿಂಕ್​ ಹೊಂದಿರುವುದನ್ನು ಸಿನಿಮ್ಯಾಟಿಕ್​ ಯೂನಿವರ್ಸ್​ ಎನ್ನುತ್ತಾರೆ. ತಮಿಳಿನ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಇದನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಕೂಡ ಆ ರೀತಿ ಒಂದು ಪ್ಲ್ಯಾನ್​ ಮಾಡಿಕೊಂಡಿದ್ದರು ಎಂಬ ಮಾಹಿತಿ ಈಗ ತಿಳಿದುಬಂದಿದೆ.

ರಣಬೀರ್​ ಕಪೂರ್​ ಮಾಡಿದ ರಣ್​ವಿಜಯ್​ ಸಿಂಗ್​ ಪಾತ್ರ ಮತ್ತು ಶಾಹಿದ್​ ಕಪೂರ್​ ಮಾಡಿದ್ದ ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಸಿನಿಮಾದಲ್ಲಿ ಒಂದನ್ನೊಂದು ಭೇಟಿ ಮಾಡಬೇಕಿತ್ತು. ರಣ್​ವಿಜಯ್​ ಗುಂಡಿನ ದಾಳಿಗೆ ಒಳಗಾದ ಬಳಿಕ ಆತನನ್ನು ಆಸ್ಪತ್ರೆಗೆ ಸೇರಿಸಲಾಗುತ್ತದೆ. ಅಲ್ಲಿ ಅವನಿಗೆ ಚಿಕಿತ್ಸೆ ನೀಡಲು ಬರುವ ವೈದ್ಯನೇ ಕಬೀರ್ ಸಿಂಗ್​ ಆಗಿರಬೇಕಿತ್ತು. ಆದರೆ ಈ ರೀತಿ ದೃಶ್ಯಕ್ಕೆ ಶಾಹಿದ್​ ಕಪೂರ್​ ಅವರ ಡೇಟ್ಸ್​ ಸಿಗಲಿಲ್ಲ. ಹಾಗಾಗಿ ಕೊನೆ ಹಂತದಲ್ಲಿ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಆ ಐಡಿಯಾವನ್ನು ಕೈ ಬಿಡಬೇಕಾಯಿತು.

ಇದನ್ನೂ ಓದಿ: ‘ಆ ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿದೆ’ ಎಂದ ನಟನಿಗೆ ಸಂದೀಪ್​ ರೆಡ್ಡಿ ವಂಗಾ ನೀಡಿದ ಉತ್ತರ ಏನು?

ಸಂದೀಪ್​ ರೆಡ್ಡಿ ವಂಗಾ ನಿರ್ದೇಶಿಸಿದ ಪ್ರತಿ ಸಿನಿಮಾಗಳು ಕೂಡ ವಿವಾದ ಮಾಡಿಕೊಂಡಿವೆ. ಅವರ ಸಿನಿಮಾದಲ್ಲಿ ಸ್ತ್ರೀ ವಿರೋಧಿ ಅಂಶಗಳು ಇವೆ ಎಂದು ಅನೇಕರು ತಕರಾರು ತೆಗೆದಿದ್ದಾರೆ. ವಿಮರ್ಶಕರು ಕೂಡ ಈ ಸಿನಿಮಾಗಳನ್ನು ತೆಗಳಿದ್ದಾರೆ. ಹಾಗಿದ್ದರೂ ಪ್ರೇಕ್ಷಕರು ‘ಅನಿಮಲ್​’ ಸಿನಿಮಾವನ್ನು ಮುಗಿಬಿದ್ದು ನೋಡಿದರು ಎಂಬುದು ಅಚ್ಚರಿ. ಈಗ ಪ್ರಭಾಸ್​ ಜೊತೆ ‘ಸ್ಪಿರಿಟ್​’ ಸಿನಿಮಾ ಮಾಡಲು ಸಂದೀಪ್​ ರೆಡ್ಡಿ ವಂಗಾ ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ