AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶಿಸಿದ ಸಿನಿಮಾಗಳಲ್ಲಿನ ರಣ್​ವಿಜಯ್​ ಸಿಂಗ್​ ಮತ್ತು ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಚಿತ್ರದಲ್ಲಿ ಮುಖಾಮುಖಿ ಆಗಬೇಕಿತ್ತು. ಆ ರೀತಿಯಲ್ಲಿ ಸ್ಕ್ರಿಪ್ಟ್​ ಕೂಡ ಸಿದ್ಧವಾಗಿತ್ತು. ಆದರೆ ಆ ದೃಶ್ಯದ ಶೂಟಿಂಗ್​ ಮಾಡಲು ಒಂದು ಸಮಸ್ಯೆ ಎದುರಾಯಿತು. ಆ ಕಾರಣದಿಂದ ಸಿನಿಮ್ಯಾಟಿಕ್​ ಯೂನಿವರ್ಸ್​ ಐಡಿಯಾ ಜಾರಿಗೆ ಬರಲಿಲ್ಲ.

ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​ ಕೊನೇ ಹಂತದಲ್ಲಿ ಕ್ಯಾನ್ಸಲ್​
ಶಾಹಿದ್​ ಕಪೂರ್​, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jun 05, 2024 | 10:16 PM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಈವರೆಗೂ ಮಾಡಿರುವುದು ಮೂರು ಸಿನಿಮಾ ಮಾತ್ರ. ಆದರೆ ಅವರಿಗೆ ಸಿಕ್ಕಿರುವ ಯಶಸ್ಸು ಬಹಳ ದೊಡ್ಡದು. ತೆಲುಗಿನಲ್ಲಿ ಅವರು ಮಾಡಿದ ಮೊದಲ ಸಿನಿಮಾ ‘ಅರ್ಜುನ್​ ರೆಡ್ಡಿ’ ಸೂಪರ್​ ಹಿಟ್​ ಆಯಿತು. ಆ ಬಳಿಕ ಅದೇ ಸಿನಿಮಾವನ್ನು ಅವರು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ (Kabir Singh) ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ನಂತರ ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿ ಭಾರಿ ಖ್ಯಾತಿ ಗಳಿಸಿದರು. ವಿಶೇಷ ಏನೆಂದರೆ, ‘ಅನಿಮಲ್​’ (Animal) ಸಿನಿಮಾದಲ್ಲಿ ‘ಸಂದೀಪ್​ ರೆಡ್ಡಿ ವಂಗಾ ಸಿನಿಮ್ಯಾಟಿಕ್​ ಯೂನಿವರ್ಸ್​’ ಮಾಡಲು ಪ್ಲ್ಯಾನ್​ ನಡೆದಿತ್ತು. ಆದರೆ ಕೊನೇ ಹಂತದಲ್ಲಿ ಅದು ಕ್ಯಾನ್ಸಲ್​ ಆಯಿತು.

ಒಬ್ಬರೇ ನಿರ್ದೇಶಕರ ಬೇರೆ ಬೇರೆ ಸಿನಿಮಾಗಳ ಪಾತ್ರಗಳು ಒಂದಕ್ಕೊಂದು ಲಿಂಕ್​ ಹೊಂದಿರುವುದನ್ನು ಸಿನಿಮ್ಯಾಟಿಕ್​ ಯೂನಿವರ್ಸ್​ ಎನ್ನುತ್ತಾರೆ. ತಮಿಳಿನ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಇದನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಕೂಡ ಆ ರೀತಿ ಒಂದು ಪ್ಲ್ಯಾನ್​ ಮಾಡಿಕೊಂಡಿದ್ದರು ಎಂಬ ಮಾಹಿತಿ ಈಗ ತಿಳಿದುಬಂದಿದೆ.

ರಣಬೀರ್​ ಕಪೂರ್​ ಮಾಡಿದ ರಣ್​ವಿಜಯ್​ ಸಿಂಗ್​ ಪಾತ್ರ ಮತ್ತು ಶಾಹಿದ್​ ಕಪೂರ್​ ಮಾಡಿದ್ದ ಕಬೀರ್​ ಸಿಂಗ್​ ಪಾತ್ರಗಳು ‘ಅನಿಮಲ್​’ ಸಿನಿಮಾದಲ್ಲಿ ಒಂದನ್ನೊಂದು ಭೇಟಿ ಮಾಡಬೇಕಿತ್ತು. ರಣ್​ವಿಜಯ್​ ಗುಂಡಿನ ದಾಳಿಗೆ ಒಳಗಾದ ಬಳಿಕ ಆತನನ್ನು ಆಸ್ಪತ್ರೆಗೆ ಸೇರಿಸಲಾಗುತ್ತದೆ. ಅಲ್ಲಿ ಅವನಿಗೆ ಚಿಕಿತ್ಸೆ ನೀಡಲು ಬರುವ ವೈದ್ಯನೇ ಕಬೀರ್ ಸಿಂಗ್​ ಆಗಿರಬೇಕಿತ್ತು. ಆದರೆ ಈ ರೀತಿ ದೃಶ್ಯಕ್ಕೆ ಶಾಹಿದ್​ ಕಪೂರ್​ ಅವರ ಡೇಟ್ಸ್​ ಸಿಗಲಿಲ್ಲ. ಹಾಗಾಗಿ ಕೊನೆ ಹಂತದಲ್ಲಿ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಆ ಐಡಿಯಾವನ್ನು ಕೈ ಬಿಡಬೇಕಾಯಿತು.

ಇದನ್ನೂ ಓದಿ: ‘ಆ ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿದೆ’ ಎಂದ ನಟನಿಗೆ ಸಂದೀಪ್​ ರೆಡ್ಡಿ ವಂಗಾ ನೀಡಿದ ಉತ್ತರ ಏನು?

ಸಂದೀಪ್​ ರೆಡ್ಡಿ ವಂಗಾ ನಿರ್ದೇಶಿಸಿದ ಪ್ರತಿ ಸಿನಿಮಾಗಳು ಕೂಡ ವಿವಾದ ಮಾಡಿಕೊಂಡಿವೆ. ಅವರ ಸಿನಿಮಾದಲ್ಲಿ ಸ್ತ್ರೀ ವಿರೋಧಿ ಅಂಶಗಳು ಇವೆ ಎಂದು ಅನೇಕರು ತಕರಾರು ತೆಗೆದಿದ್ದಾರೆ. ವಿಮರ್ಶಕರು ಕೂಡ ಈ ಸಿನಿಮಾಗಳನ್ನು ತೆಗಳಿದ್ದಾರೆ. ಹಾಗಿದ್ದರೂ ಪ್ರೇಕ್ಷಕರು ‘ಅನಿಮಲ್​’ ಸಿನಿಮಾವನ್ನು ಮುಗಿಬಿದ್ದು ನೋಡಿದರು ಎಂಬುದು ಅಚ್ಚರಿ. ಈಗ ಪ್ರಭಾಸ್​ ಜೊತೆ ‘ಸ್ಪಿರಿಟ್​’ ಸಿನಿಮಾ ಮಾಡಲು ಸಂದೀಪ್​ ರೆಡ್ಡಿ ವಂಗಾ ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ