AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿದೆ’ ಎಂದ ನಟನಿಗೆ ಸಂದೀಪ್​ ರೆಡ್ಡಿ ವಂಗಾ ನೀಡಿದ ಉತ್ತರ ಏನು?

2019ರಲ್ಲಿ ತೆರೆಕಂಡ ‘ಕಬೀರ್​ ಸಿಂಗ್​’ ಸಿನಿಮಾದ ಕುರಿತಂತೆ ನಟ ಆದಿಲ್​ ಹುಸೇನ್​ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದ ಆ ಸಿನಿಮಾದಲ್ಲಿ ನಟಿಸಿದ್ದಕ್ಕೆ ತಮಗೆ ವಿಷಾದ ಇದೆ ಎಂದು ಸಂದರ್ಶನವೊಂದರಲ್ಲಿ ಆದಿಲ್​ ಹುಸೇನ್​ ಹೇಳಿದ್ದಾರೆ. ಅದರ ವಿಡಿಯೋ ಕ್ಲಿಪ್​ ವೈರಲ್​ ಆಗಿದ್ದು, ಸಂದೀಪ್​ ರೆಡ್ಡಿ ವಂಗಾ ಪ್ರತಿಕ್ರಿಯೆ ನೀಡಿದ್ದಾರೆ.

‘ಆ ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿದೆ’ ಎಂದ ನಟನಿಗೆ ಸಂದೀಪ್​ ರೆಡ್ಡಿ ವಂಗಾ ನೀಡಿದ ಉತ್ತರ ಏನು?
‘ಕಬೀರ್​ ಸಿಂಗ್​’ ಸಿನಿಮಾ ಪೋಸ್ಟರ್​, ಆದಿಲ್​ ಹುಸೇನ್​, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Apr 18, 2024 | 5:32 PM

Share

ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಮಾಡಿದ ಮೂರು ಸಿನಿಮಾಗಳು ಯಶಸ್ವಿ ಆಗಿವೆಯಾದರೂ ವಿವಾದಗಳಿಂದಲೇ ತುಂಬಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ (Kabir Singh), ‘ಅನಿಮಲ್​’ ಸಿನಿಮಾಗಳನ್ನು ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗಳಲ್ಲಿ ಮಹಿಳೆಯರ ಪಾತ್ರಗಳನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂಬ ಆರೋಪ ಇದೆ. ಆ ಬಗ್ಗೆ ನಟ ಆದಿಲ್​ ಹುಸೇನ್​ ಅವರು ಮಾತನಾಡಿದ್ದಾರೆ. ‘ಕಬೀರ್​ ಸಿಂಗ್​’ ಸಿನಿಮಾದಲ್ಲಿ ನಟಿಸಿದ್ದಕ್ಕೆ ತಮಗೆ ನಿಷಾದವಿದೆ ಎಂದು ಅವರು ಹೇಳಿದ್ದಾರೆ. ಆದಿಲ್​ ಹುಸೇನ್​ (Adil Hussain) ಮಾತಿಗೆ ಸಂದೀಪ್​ ರೆಡ್ಡಿ ವಂಗಾ ತಿರುಗೇಟು ನೀಡಿದ್ದಾರೆ.

ತೆಲುಗಿನಲ್ಲಿ ವಿಜಯ್​ ದೇವರಕೊಂಡ ನಟಿಸಿದ್ದ ‘ಅರ್ಜುನ್​ ರೆಡ್ಡಿ’ ಸಿನಿಮಾವನ್ನು ಹಿಂದಿಗೆ ‘ಕಬೀರ್​ ಸಿಂಗ್​’ ಶೀರ್ಷಿಕೆಯಲ್ಲಿ ರಿಮೇಕ್​ ಮಾಡಲಾಯಿತು. ಆ ಸಿನಿಮಾದಲ್ಲಿ ಶಾಹಿದ್​ ಕಪೂರ್​, ಕಿಯಾರಾ ಅಡ್ವಾಣಿ ಮುಂತಾದವರು ನಟಿಸಿದ್ದರು. ನಟ ಆದಿಲ್​ ಹುಸೇನ್​ ಕೂಡ ಒಂದು ಪಾತ್ರ ಮಾಡಿದ್ದರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ‘ಕಬೀರ್​ ಸಿಂಗ್​’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಮೈಕಲ್​ ಜಾಕ್ಸನ್​ ಬಯೋಪಿಕ್​ ಮಾಡುವ ಆಸೆ ಇದೆ’: ಸಂದೀಪ್​ ರೆಡ್ಡಿ ವಂಗಾ

‘ನನ್ನ ವೃತ್ತಿ ಜೀವನದಲ್ಲಿ ಸ್ಕ್ರಿಪ್ಟ್​ ಓದದೇ ನಟಿಸಿದ ಸಿನಿಮಾ ಇದು ಮಾತ್ರ. ಅದರ ಬಗ್ಗೆ ನನಗೆ ವಿಷಾದ ಇದೆ. ನನಗೆ ನನ್ನ ದೃಶ್ಯ ಇಷ್ಟ ಆಗಿತ್ತು. ಅದು ಚೆನ್ನಾಗಿತ್ತು ಕೂಡ. ಸಿನಿಮಾ ಕೂಡ ಅದೇ ರೀತಿ ಚೆನ್ನಾಗಿರುತ್ತೆ ಎಂದುಕೊಂಡಿದ್ದೆ. ಆದರೆ ಸಿನಿಮಾ ನೋಡಲು ಹೋದಾಗ ನನಗೆ ತುಂಬ ಮುಜುಗರ ಆಯಿತು. ನನ್ನ ಸ್ನೇಹಿತರೊಬ್ಬರ ಜೊತೆ ನಾನು ಆ ಸಿನಿಮಾ ನೋಡಲು ಹೋಗಿದ್ದೆ. ಇಬ್ಬರೂ ಮಧ್ಯದಲ್ಲೇ ಎದ್ದು ಬಂದೆವು. ‘ಕಬೀರ್ ಸಿಂಗ್’ ಸಿನಿಮಾ ನೋಡು ಅಂತ ನಾನು ನನ್ನ ಪತ್ನಿಗೆ ಹೇಳಲು ಸಾಧ್ಯವಿಲ್ಲ. ನೋಡಿದರೆ ಆಕೆಗೆ ತುಂಬ ಕೋಪ ಬರುತ್ತದೆ’ ಎಂದು ಆದಿಲ್​ ಹುಸೇನ್​ ಹೇಳಿದ್ದರು.

ಸಂದೀಪ್​ ರೆಡ್ಡಿ ವಂಗಾ ಪ್ರತಿಕ್ರಿಯೆ:

ಆದಿಲ್​ ಹುಸೇನ್​ ನೀಡಿದ ಸಂದರ್ಶನದ ತುಣುಕನ್ನು ಸಂದೀಪ್​ ರೆಡ್ಡಿ ವಂಗಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನೀವು ವಿಷಾದದಿಂದ ಮಾಡಿದ ಒಂದು ಬ್ಲಾಕ್​ ಬಸ್ಟರ್​ ಸಿನಿಮಾದಲ್ಲಿ ನಿಮಗೆ ಸಿಕ್ಕಷ್ಟು ಜನಪ್ರಿಯತೆಯು ನೀವು ನಂಬಿಕೆಯಿಟ್ಟು ಮಾಡಿದ 30 ಕಲಾತ್ಮಕ ಸಿನಿಮಾಗಳಿಂದ ನಿಮಗೆ ಸಿಕ್ಕಿಲ್ಲ. ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ನನಗೆ ವಿಷಾದವಿದೆ. ಪ್ಯಾಷನ್​ಗಿಂತಲೂ ನಿಮಗೆ ದುರಾಸೆ ಜಾಸ್ತಿ ಇದೆ. ಕೃತಕ ಬುದ್ಧಿಮತ್ತೆಯ ಸಹಾಯನಿಂದ ಸಿನಿಮಾದಲ್ಲಿ ನಿಮ್ಮ ಮುಖವನ್ನು ಬದಲಾಯಿಸುತ್ತೇನೆ. ಆ ಮೂಲಕ ನಿಮಗೆ ಆದ ಮುಜುಗರವನ್ನು ತಪ್ಪಿಸುತ್ತೇನೆ. ಈಗ ಸರಿಯಾಗಿ ಸ್ಮೈಲ್​ ಮಾಡಿ’ ಎಂದು ಸಂದೀಪ್​ ರೆಡ್ಡಿ ವಂಗಾ ಪೋಸ್ಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ಅಪ್ಪನಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಪುಟ್ಟ ಬಾಲಕಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಎಸ್ಟೇಟ್​​​ನಲ್ಲಿ ಬೀಡುಬಿಟ್ಟ ಕಾಡಾನೆಗಳು: ಗಜಪಡೆ ಕಂಡು ಸ್ಥಳೀಯರು ಕಂಗಾಲು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಕೊನೆಗೂ ಮೌನ ಮುರಿದ ಡಿಕೆಶಿ, ಪ್ರಮಾಣವಚನದ ಬಗ್ಗೆ ಹೇಳಿದ್ದಿಷ್ಟು
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಯುವತಿ ದೇಹ ಸುಟ್ಟು ಹೋಗಿದ್ದರೂ ಆಕೆಯನ್ನೇ ಮದುವೆಯಾದ ವರ
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ
ರಾಯಚೂರು ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ