AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದ ಮಗನಿಗೆ ‘ಅನಿಮಲ್​’ ಸಿನಿಮಾ ತೋರಿಸಿದ ಸಂದೀಪ್​ ರೆಡ್ಡಿ ವಂಗ

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ನಂತರ ಸಂದೀಪ್​ ರೆಡ್ಡಿ ವಂಗ ಅವರು ಕೆಲವು ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಒಂದಷ್ಟು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗನಿಗೆ ‘ಅನಿಮಲ್​’ ಸಿನಿಮಾವನ್ನು ಸಂದೀಪ್​ ತೋರಿಸಿದ್ದಾರೆ. ಕುಟುಂಬದವರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಕ್ಕಿದೆ ಎಂಬುದನ್ನು ಅವರು ತಿಳಿಸಿದ್ದಾರೆ.

7 ವರ್ಷದ ಮಗನಿಗೆ ‘ಅನಿಮಲ್​’ ಸಿನಿಮಾ ತೋರಿಸಿದ ಸಂದೀಪ್​ ರೆಡ್ಡಿ ವಂಗ
ರಣಬೀರ್​ ಕಪೂರ್​, ಸಂದೀಪ್​ ರೆಡ್ಡಿ ವಂಗ
ಮದನ್​ ಕುಮಾರ್​
|

Updated on: Feb 07, 2024 | 6:03 PM

Share

ಕಳೆದ ವರ್ಷ ತೆರೆಕಂಡ ‘ಅನಿಮಲ್​​’ (Animal Movie) ಚಿತ್ರದ ಅನೇಕ ದೃಶ್ಯಗಳಿಗೆ ವಿಮರ್ಶಕರಿಂದ ತಕರಾರು ವ್ಯಕ್ತವಾಗಿತ್ತು. ಹಾಗಿದ್ದರೂ ಕೂಡ ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವಲ್ಲಿ ಈ ಸಿನಿಮಾ ಯಶಸ್ವಿ ಆಯಿತು. ಈಗ ಒಟಿಟಿಗೆ ಕಾಲಿಟ್ಟು ‘ಅನಿಮಲ್​’ ಚಿತ್ರ ಸದ್ದು ಮಾಡುತ್ತಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಅವರ ಕೆಲಸ ಕೆಲವರಿಗೆ ಇಷ್ಟ ಆಗಿದೆ. ಇನ್ನೂ ಕೆಲವರಿಗೆ ಈ ಸಿನಿಮಾ ನೋಡಿ ಬೇಸರ ಆಗಿದೆ. ಆಕ್ಷೇಪಾರ್ಹ ದೃಶ್ಯಗಳು ಇವೆ ಎಂಬುದು ಹಲವರ ದೂರು. ಈ ಸಿನಿಮಾವನ್ನು ಮಕ್ಕಳು ನೋಡುವಂತಿಲ್ಲ. ಹಾಗಿದ್ದರೂ ಕೂಡ ತಮ್ಮ 7 ವರ್ಷದ ಮಗನಿಗೆ ನಿರ್ದೇಶಕ ಸಂದೀಪ್​ ಅವರು ‘ಅನಿಮಲ್​’ ಸಿನಿಮಾವನ್ನು ತೋರಿಸಿದ್ದಾರೆ. ಆದರೆ ಅವರು ಸಿನಿಮಾದ ಎಲ್ಲ ದೃಶ್ಯಗಳನ್ನು ತೋರಿಸಿಲ್ಲ!

ಅತಿಯಾದ ಕ್ರೌರ್ಯ, ಅಶ್ಲೀಲ ಬೈಗುಳ ಹಾಗೂ ಮಹಿಳೆಯರನ್ನು ನಿಂದಿಸುವಂತಹ ದೃಶ್ಯಗಳು ‘ಅನಿಮಲ್​’ ಸಿನಿಮಾದಲ್ಲಿ ಇವೆ. ಸೆನ್ಸಾರ್​ ಮಂಡಳಿ ಈ ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಿದೆ. ಅಂದರೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರೇಕ್ಷಕರು ಈ ಸಿನಿಮಾವನ್ನು ನೋಡುವಂತಿಲ್ಲ. ಹಾಗಾಗಿ ಚಿತ್ರದಲ್ಲಿನ ಎಲ್ಲ ‘ಎ’ ರೇಟೆಡ್​​ ದೃಶ್ಯಗಳನ್ನು ಹೊರತುಪಡಿಸಿ ಇನ್ನುಳಿದ ಸಿನಿಮಾವನ್ನು ಸಂದೀಪ್​ ರೆಡ್ಡಿ ವಂಗ ಅವರು ತಮ್ಮ ಮಗನಿಗೆ ತೋರಿಸಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಮಗನಿಗೆ ಸಂದೀಪ್​ ರೆಡ್ಡಿ ವಂಗ ಅವರು ಅರ್ಜುನ್​ ರೆಡ್ಡಿ ಎಂದು ಹೆಸರು ಇಟ್ಟಿದ್ದಾರೆ. ಆತನಿಗೆ ‘ಅನಿಮಲ್​’ ಸಿನಿಮಾ ತುಂಬ ಇಷ್ಟವಾಗಿದೆಯಂತೆ. ಅದೇ ರೀತಿ, ಪತ್ನಿಗೂ ಅವರು ಸಿನಿಮಾ ತೋರಿಸಿದ್ದಾರೆ. ಸ್ತ್ರೀ ವಿರೋಧಿ ಎನಿಸುವಂತಹ ಯಾವುದೇ ಅಂಶ ಇಲ್ಲ ಎಂಬ ಅಭಿಪ್ರಾಯ ತಮ್ಮ ಪತ್ನಿಯಿಂದ ಬಂತು ಎಂದು ಸಂದೀಪ್​ ರೆಡ್ಡಿ ವಂಗ ಹೇಳಿದ್ದಾರೆ. ಒಟಿಟಿಯಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಸಿನಿಮಾ ನೋಡಿದ ಅನೇಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಬಾಬಿ ಡಿಯೋಲ್​, ಅನಿಲ್​ ಕಪೂರ್​ ಮುಂತಾದವರು ನಟಿಸಿದ ‘ಅನಿಮಲ್​’ ಸಿನಿಮಾವನ್ನು ಅನೇಕರು ಟೀಕಿಸಿದ್ದಾರೆ. ಅಂಥ ಟೀಕೆಗಳ ಬಗ್ಗೆ ಸಂದೀಪ್​ ರೆಡ್ಡಿ ವಂಗ ತಲೆ ಕೆಡಿಸಿಕೊಂಡಿಲ್ಲ. ಜಾವೇದ್​ ಅಖ್ತರ್​ ಅವರು ‘ಅನಿಮಲ್​’ ಚಿತ್ರವನ್ನು ಖಂಡಿಸಿದ್ದಾರೆ. ಅಂತಹ ಕೆಲವು ಕಟು ವಿಮರ್ಶೆಗಳಿಗೆ ಸಂದೀಪ್​ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

‘ಅನಿಮಲ್​’ ಗೆದ್ದ ಬಳಿಕ ಸಂದೀಪ್​ ರೆಡ್ಡಿ ವಂಗ ಅವರು ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಇಂತಹ ಒಂದಷ್ಟು ಇಂಟರೆಸ್ಟಿಂಗ್​ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಶಾರುಖ್​ ಖಾನ್​, ಕಂಗನಾ ರಣಾವತ್​, ರಣವೀರ್​ ಸಿಂಗ್​ ಮುಂತಾದವರ ಜೊತೆ ಸಿನಿಮಾ ಮಾಡಬೇಕು ಎಂದು ಅವರು ಆಸೆ ವ್ಯಕ್ತಪಡಿಸಿದ್ದಾರೆ. ಸಂದೀಪ್​ ಜೊತೆ ಕೆಲಸ ಮಾಡಲು ಅಲ್ಲು ಅರ್ಜುನ್​, ಮಹೇಶ್​ ಬಾಬು, ಪ್ರಭಾಸ್​ ಮುಂತಾದ ಕಲಾವಿದರು ಸಿದ್ಧರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ