‘ಅನಿಮಲ್ ಪಾರ್ಕ್​’ ಚಿತ್ರ ಮಾಡಲು ನಿರ್ದೇಶಕ ರೆಡಿ; ಚಿತ್ರೀಕರಣ ಯಾವಾಗಿನಿಂದ?

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲೂ ರಣಬೀರ್ ಕಪೂರ್ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರಗಳ ಕೆಲಸಗಳು ಪೂರ್ಣಗೊಂಡ ಬಳಿಕ ‘ಅನಿಮಲ್ ಪಾರ್ಕ್’ ಚಿತ್ರದ ಕೆಲಸಗಳಲ್ಲಿ ರಣಬೀರ್ ಬ್ಯುಸಿ ಆಗಲಿದ್ದಾರೆ ಎನ್ನಲಾಗುತ್ತಿದೆ. 2025ರಲ್ಲಿ ಸಿನಿಮಾ ಸೆಟ್ಟೇರಲಿದೆ.

‘ಅನಿಮಲ್ ಪಾರ್ಕ್​’ ಚಿತ್ರ ಮಾಡಲು ನಿರ್ದೇಶಕ ರೆಡಿ; ಚಿತ್ರೀಕರಣ ಯಾವಾಗಿನಿಂದ?
ರಣಬೀರ್
Follow us
|

Updated on: Jan 31, 2024 | 12:46 PM

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ (Animal Movie) ಸೂಪರ್ ಹಿಟ್ ಎನಿಸಿಕೊಂಡಿದೆ. ಒಂದು ವರ್ಗದ ಜನರು ಚಿತ್ರವನ್ನು ಟೀಕೆ ಮಾಡಿದರೆ ಇನ್ನೂ ಒಂದು ವರ್ಗದ ಜನರು ಸಿನಿಮಾನ ಹೊಗಳಿದ್ದಾರೆ. ‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್ ಮಾಡಲು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘ಅನಿಮಲ್ ಪಾರ್ಕ್’ ಎಂದು ಶೀರ್ಷಿಕೆ ಇಡಲು ನಿರ್ದೇಶಕರು ನಿರ್ಧರಿಸಿದ್ದಾರೆ. 2025ರ ವೇಳೆಗೆ ಶೂಟಿಂಗ್ ಆರಂಭ ಆಗೋ ನಿರೀಕ್ಷೆ ಇದೆ.

ರಣಬೀರ್ ಕಪೂರ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಸಿನಿಮಾ ಶೂಟಿಂಗ್​ನಲ್ಲಿ ರಣಬೀರ್ ತೊಡಗಿಕೊಳ್ಳಲಿದ್ದಾರೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಳ್ಳೋದು ಮುಂದಿನ ವರ್ಷ. ನಿತೇಶ್ ತಿವಾರಿ ಅವರ ‘ರಾಮಾಯಣ’ ಸಿನಿಮಾ ಕೆಲಸಗಳಲ್ಲೂ ರಣಬೀರ್ ಕಪೂರ್ ಬ್ಯುಸಿ ಆಗಲಿದ್ದಾರೆ. ಈ ಚಿತ್ರಗಳ ಕೆಲಸಗಳು ಪೂರ್ಣಗೊಂಡ ಬಳಿಕ ‘ಅನಿಮಲ್ 2’ ಚಿತ್ರದ ಕೆಲಸಗಳಲ್ಲಿ ರಣಬೀರ್ ಬ್ಯುಸಿ ಆಗಲಿದ್ದಾರೆ ಎನ್ನಲಾಗುತ್ತಿದೆ.

‘ಅನಿಮಲ್ ಪಾರ್ಕ್’ ಸಿನಿಮಾ ರಣವಿಜಯ್ ಪಾತ್ರದ ಮೇಲೆ ಸಾಗಲಿದೆ. ಪತ್ನಿ ಜೊತೆಗಿನ ಕಿತ್ತಾಟ ಮತ್ತಿತ್ಯಾದಿ ವಿಚಾರಗಳು ಹೈಲೈಟ್ ಆಗಲಿವೆ. ಹಲವು ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಲಿದ್ದಾರೆ.  ಈ ಸಿನಿಮಾದ ಒಂದೆಳೆಯನ್ನು ನಿರ್ದೇಶಕರು ಸಿದ್ಧಪಡಿಸಿದ್ದಾರೆ. ಸ್ಕ್ರಿಪ್ಟ್ ಕೆಲಸ ಆರಂಭಿಸೋದು ಬಾಕಿ ಇದೆ.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ಸಂದೀಪ್ ರೆಡ್ಡಿ ವಂಗ ಅವರು ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ಶೂಟಿಂಗ್ ಈ ವರ್ಷವೇ ಆರಂಭ ಆಗಲಿದೆ. 2024ರ ದ್ವಿತೀಯಾರ್ಧದಲ್ಲಿ ಸಿನಿಮಾದ ಶೂಟಿಂಗ್ ಪ್ರಾರಂಭಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ. ಇದಾದ ಬಳಿಕ ಅವರು ‘ಅನಿಮಲ್ ಪಾರ್ಕ್’ ಸಿನಿಮಾ ಶೂಟಿಂಗ್ ಆರಂಭಿಸೋ ಆಲೋಚನೆ ಇದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಅನಿಮಲ್’ ಬಂದಿದ್ದಕ್ಕೆ ರಶ್ಮಿಕಾಗೆ ಸಿಕ್ಕಾಪಟ್ಟೆ ಖುಷಿ

‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಹಾಳಾದ ತಂದೆ ಹಾಗೂ ಮಗನ ಸಂಬಂಧದ ಬಗ್ಗೆ ಇದೆ. ತಂದೆಯನ್ನು ರಕ್ಷಣೆ ಮಾಡಲು ಯಾವ ಹಂತಕ್ಕೆ ಬೇಕಿದ್ದರೂ ಹೋಗೋ ಮಗನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ