Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ

ಎಂಸಿ ಸ್ಟಾನ್ ಹಾಗೂ ಸಾನಿಯಾ ಮಿರ್ಜಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಒಟ್ಟಾಗಿ ಪಾರ್ಟಿ ಮಾಡಿದ್ದಾರೆ. ಅವರಿಗೆ ಸಾನಿಯಾ ಅಕ್ಕ ಇದ್ದಂತೆ.

Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ
ಸ್ಟಾನ್-ಸಾನಿಯಾ
Follow us
|

Updated on: Apr 15, 2023 | 8:00 AM

ರ್ಯಾಪರ್, ‘ಹಿಂದಿ ಬಿಗ್ ಬಾಸ್ ಸೀಸನ್ 16’ರ (Bigg Boss Hindi) ವಿನ್ನರ್ ಎಂಸಿ ಸ್ಟಾನ್ ಸಾಕಷ್ಟು ಸುದ್ದಿಯಲ್ಲಿದ್ದಾರೆ. ದುಬಾರಿ ಬೆಲೆಯ ಬಟ್ಟೆ ಹಾಗೂ ಶೂ ತೊಟ್ಟು ಅವರು ಕಾಣಿಸಿಕೊಳ್ಳುತ್ತಾರೆ. ಅನೇಕ ಸಂದರ್ಶನಗಳಲ್ಲಿ ಅವರ ಉಡುಗೆ ಹಾಗೂ ಶೂ ಬೆಲೆಯನ್ನು ಕೇಳಲಾಗಿತ್ತು. ಇದಕ್ಕೆ ಅವರು ಯಾವುದೇ ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದರು. ಈಗ ಇವರ ಕಲೆಕ್ಷನ್​ಗೆ ಹೊಸ ಶೂ ಸೇರ್ಪಡೆ ಆಗಿದೆ. ಇದನ್ನು ಕೊಟ್ಟಿದ್ದು ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ (Sania Mirza) ಅನ್ನೋದು ವಿಶೇಷ. ಈ ಬಗ್ಗೆ ಎಂಸಿ ಸ್ಟಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಎಂಸಿ ಸ್ಟಾನ್ ರ್ಯಾಪ್ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಲೈವ್ ಒಂದರಲ್ಲಿ ಮಾತನಾಡುತ್ತಾ ಅವರ ಶೂ ಬಗ್ಗೆ ಪ್ರಶ್ನೆ ಮಾಡಿದವರಿಗೆ ತಿರುಗೇಟು ಕೊಟ್ಟಿದ್ದರು. ‘ಇದು 80 ಸಾವಿರ ರೂಪಾಯಿಯ ಶೂ. ಇದರಲ್ಲಿ ನಿಮ್ಮ ಮನೆ ನಡೆಯುತ್ತೆ’ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಅವರು ಕತ್ತಿಗೆ ಹಾಕುವ ಚಿನ್ನದ ಸರವೂ ಎಲ್ಲರ ಗಮನ ಸೆಳೆದಿತ್ತು. ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

ಎಂಸಿ ಸ್ಟಾನ್ ಹಾಗೂ ಸಾನಿಯಾ ಮಿರ್ಜಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಒಟ್ಟಾಗಿ ಪಾರ್ಟಿ ಮಾಡಿದ್ದಾರೆ. ಅವರಿಗೆ ಸಾನಿಯಾ ಅಕ್ಕ ಇದ್ದಂತೆ. ತಮ್ಮನಿಗೆ ಸಾನಿಯಾ ಪ್ರೀತಿಯಿಂದ ಶೂ ಹಾಗೂ ಗ್ಲಾಸ್ ನೀಡಿದ್ದಾರೆ. ಇದರ ಬೆಲೆ 1.21 ಲಕ್ಷ ರೂಪಾಯಿ. ಫೋಟೋ ಶೇರ್ ಮಾಡಿಕೊಂಡಿರುವ ಸ್ಟಾನ್, ಸಾನಿಯಾಗೆ ಧನ್ಯವಾದ ಹೇಳಿದ್ದಾರೆ.  ‘ಧನ್ಯವಾದಗಳು ಸಾನಿಯಾ’ ಎಂದು ಬರೆದುಕೊಂಡಿರುವ ಸ್ಟಾನ್, ‘ಇದರಲ್ಲಿ ನಿಮ್ಮ ಮನೆ ನಡೆಯುತ್ತದೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: 134ನೇ ದಿನಕ್ಕೆ ಪೂರ್ಣಗೊಂಡ ‘ಹಿಂದಿ ಬಿಗ್ ಬಾಸ್​’; ಸ್ಟಾರ್​ಗಳನ್ನು ಹಿಂದಿಕ್ಕಿ ವಿನ್ ಆದ ಎಂಸಿ ಸ್ಟಾನ್

ಬಿಗ್ ಬಾಸ್ ಗೆದ್ದ ನಂತರ ಸ್ಟಾನ್ ಅವರು ‘ಹಸ್ತಿ ಕಾ ಬಸ್ತಿ’ ಟೂರ್ ಘೋಷಣೆ ಮಾಡಿದರು. ದೇಶದ ವಿವಿಧ ಕಡೆಗಳಲ್ಲಿ ತೆರಳಿ ಅವರು ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಪ್ರವಾಸ ಮಾರ್ಚ್​ 3ಕ್ಕೆ ಇದು ಆರಂಭ ಆಗಿದ್ದು, ಮೇ 7ಕ್ಕೆ ಪೂರ್ಣಗೊಳ್ಳಲಿದೆ. ಈಗಾಗಲೇ ಪುಣೆ, ಮುಂಬೈ, ಬೆಂಗಳೂರು, ಹೈದರಾಬಾದ್ ಮೊದಲಾದ ಕಡೆಗಳಲ್ಲಿ ಅವರು ಕಾರ್ಯಕ್ರಮ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘