AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ

ಎಂಸಿ ಸ್ಟಾನ್ ಹಾಗೂ ಸಾನಿಯಾ ಮಿರ್ಜಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಒಟ್ಟಾಗಿ ಪಾರ್ಟಿ ಮಾಡಿದ್ದಾರೆ. ಅವರಿಗೆ ಸಾನಿಯಾ ಅಕ್ಕ ಇದ್ದಂತೆ.

Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ
ಸ್ಟಾನ್-ಸಾನಿಯಾ
ರಾಜೇಶ್ ದುಗ್ಗುಮನೆ
|

Updated on: Apr 15, 2023 | 8:00 AM

Share

ರ್ಯಾಪರ್, ‘ಹಿಂದಿ ಬಿಗ್ ಬಾಸ್ ಸೀಸನ್ 16’ರ (Bigg Boss Hindi) ವಿನ್ನರ್ ಎಂಸಿ ಸ್ಟಾನ್ ಸಾಕಷ್ಟು ಸುದ್ದಿಯಲ್ಲಿದ್ದಾರೆ. ದುಬಾರಿ ಬೆಲೆಯ ಬಟ್ಟೆ ಹಾಗೂ ಶೂ ತೊಟ್ಟು ಅವರು ಕಾಣಿಸಿಕೊಳ್ಳುತ್ತಾರೆ. ಅನೇಕ ಸಂದರ್ಶನಗಳಲ್ಲಿ ಅವರ ಉಡುಗೆ ಹಾಗೂ ಶೂ ಬೆಲೆಯನ್ನು ಕೇಳಲಾಗಿತ್ತು. ಇದಕ್ಕೆ ಅವರು ಯಾವುದೇ ಮುಚ್ಚುಮರೆ ಇಲ್ಲದೆ ಉತ್ತರ ನೀಡಿದ್ದರು. ಈಗ ಇವರ ಕಲೆಕ್ಷನ್​ಗೆ ಹೊಸ ಶೂ ಸೇರ್ಪಡೆ ಆಗಿದೆ. ಇದನ್ನು ಕೊಟ್ಟಿದ್ದು ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ (Sania Mirza) ಅನ್ನೋದು ವಿಶೇಷ. ಈ ಬಗ್ಗೆ ಎಂಸಿ ಸ್ಟಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಎಂಸಿ ಸ್ಟಾನ್ ರ್ಯಾಪ್ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಲೈವ್ ಒಂದರಲ್ಲಿ ಮಾತನಾಡುತ್ತಾ ಅವರ ಶೂ ಬಗ್ಗೆ ಪ್ರಶ್ನೆ ಮಾಡಿದವರಿಗೆ ತಿರುಗೇಟು ಕೊಟ್ಟಿದ್ದರು. ‘ಇದು 80 ಸಾವಿರ ರೂಪಾಯಿಯ ಶೂ. ಇದರಲ್ಲಿ ನಿಮ್ಮ ಮನೆ ನಡೆಯುತ್ತೆ’ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಅವರು ಕತ್ತಿಗೆ ಹಾಕುವ ಚಿನ್ನದ ಸರವೂ ಎಲ್ಲರ ಗಮನ ಸೆಳೆದಿತ್ತು. ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.

ಎಂಸಿ ಸ್ಟಾನ್ ಹಾಗೂ ಸಾನಿಯಾ ಮಿರ್ಜಾ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಒಟ್ಟಾಗಿ ಪಾರ್ಟಿ ಮಾಡಿದ್ದಾರೆ. ಅವರಿಗೆ ಸಾನಿಯಾ ಅಕ್ಕ ಇದ್ದಂತೆ. ತಮ್ಮನಿಗೆ ಸಾನಿಯಾ ಪ್ರೀತಿಯಿಂದ ಶೂ ಹಾಗೂ ಗ್ಲಾಸ್ ನೀಡಿದ್ದಾರೆ. ಇದರ ಬೆಲೆ 1.21 ಲಕ್ಷ ರೂಪಾಯಿ. ಫೋಟೋ ಶೇರ್ ಮಾಡಿಕೊಂಡಿರುವ ಸ್ಟಾನ್, ಸಾನಿಯಾಗೆ ಧನ್ಯವಾದ ಹೇಳಿದ್ದಾರೆ.  ‘ಧನ್ಯವಾದಗಳು ಸಾನಿಯಾ’ ಎಂದು ಬರೆದುಕೊಂಡಿರುವ ಸ್ಟಾನ್, ‘ಇದರಲ್ಲಿ ನಿಮ್ಮ ಮನೆ ನಡೆಯುತ್ತದೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: 134ನೇ ದಿನಕ್ಕೆ ಪೂರ್ಣಗೊಂಡ ‘ಹಿಂದಿ ಬಿಗ್ ಬಾಸ್​’; ಸ್ಟಾರ್​ಗಳನ್ನು ಹಿಂದಿಕ್ಕಿ ವಿನ್ ಆದ ಎಂಸಿ ಸ್ಟಾನ್

ಬಿಗ್ ಬಾಸ್ ಗೆದ್ದ ನಂತರ ಸ್ಟಾನ್ ಅವರು ‘ಹಸ್ತಿ ಕಾ ಬಸ್ತಿ’ ಟೂರ್ ಘೋಷಣೆ ಮಾಡಿದರು. ದೇಶದ ವಿವಿಧ ಕಡೆಗಳಲ್ಲಿ ತೆರಳಿ ಅವರು ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಪ್ರವಾಸ ಮಾರ್ಚ್​ 3ಕ್ಕೆ ಇದು ಆರಂಭ ಆಗಿದ್ದು, ಮೇ 7ಕ್ಕೆ ಪೂರ್ಣಗೊಳ್ಳಲಿದೆ. ಈಗಾಗಲೇ ಪುಣೆ, ಮುಂಬೈ, ಬೆಂಗಳೂರು, ಹೈದರಾಬಾದ್ ಮೊದಲಾದ ಕಡೆಗಳಲ್ಲಿ ಅವರು ಕಾರ್ಯಕ್ರಮ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು