ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​

ಸಂಜಯ್​ ದತ್​ ಅವರನ್ನು ವಿಲನ್​ ಪಾತ್ರದಲ್ಲಿ ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದಾರೆ. ಹಾಗಾಗಿ ಅವರಿಗೆ ಅಂಥ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಈಗ ಅವರು ಬಾಲಿವುಡ್​ನ ಸ್ಟಾರ್​ ಹೀರೋಗಳ ಎದುರಲ್ಲೂ ನೆಗೆಟಿವ್​ ಪಾತ್ರ ಮಾಡಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರಣವೀರ್​ ಸಿಂಗ್​ ಅವರ ಹೊಸ ಚಿತ್ರಕ್ಕೆ ಸಂಜಯ್​ ದತ್​ ಖಳನಾಯಕ ಎಂದು ಹೇಳಲಾಗುತ್ತಿದೆ.

ರಾ ಏಜೆಂಟ್​ ಆಗಲಿರುವ ರಣವೀರ್​ ಸಿಂಗ್​ಗೆ ಸಂಜಯ್​ ದತ್​ ವಿಲನ್; ಇದು ‘ಕೆಜಿಎಫ್​ 2’ ಎಫೆಕ್ಟ್​
ರಣವೀರ್​ ಸಿಂಗ್​, ಸಂಜಯ್​ ದತ್​
Follow us
|

Updated on: Jul 28, 2024 | 7:36 PM

ನಟ ಸಂಜಯ್​ ಸತ್​ ಅವರಿಗೆ ವೃತ್ತಿ ಬದುಕಿನಲ್ಲಿ ಇದು ಸೆಕೆಂಡ್​ ಇನ್ನಿಂಗ್ಸ್​ ಎಂದೇ ಹೇಳಬೇಕು. ಮೊದಲು ಹೀರೋ ಆಗಿ ಮಿಂಚುತ್ತಿದ್ದ ಅವರಿಗೆ ಈಗ ವಿಲನ್​ ಪಾತ್ರಗಳು ಹೆಚ್ಚಾಗಿ ಸಿಗುತ್ತಿವೆ. ಅದಕ್ಕೆಲ್ಲ ಕಾರಣ ಆಗಿದ್ದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎಂದರೆ ತಪ್ಪಿಲ್ಲ. ಕನ್ನಡದ ಆ ಸಿನಿಮಾದಲ್ಲಿ ಸಂಜಯ್​ ದತ್​ ಅವರು ಖಳನಾಯಕನ ಪಾತ್ರ ಮಾಡಿ ಸೈ ಎನಿಸಿಕೊಂಡರು. ಅವರು ಮಾಡಿದ ಅಧೀರನ ಪಾತ್ರ ಸಖತ್​ ಫೇಮಸ್​ ಆಯಿತು. ಈಗ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ವಿಲನ್​ ಪಾತ್ರಗಳು ಹೇರಳವಾಗಿ ಸಿಗುತ್ತಿವೆ.

ನಟ ರಣವೀರ್​ ಸಿಂಗ್ ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ಸಂಜಯ್​ ದತ್​ ಅವರು ವಿಲನ್​ ಆಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಣವೀರ್​ ಸಿಂಗ್​ ಅವರು ಇತ್ತೀಚೆಗಷ್ಟೇ ಹೊಸ ಸಿನಿಮಾ ಘೋಷಿಸಿದರು. ‘ಉರಿ’ ಖ್ಯಾತಿಯ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ಹೊಸ ಸಿನಿಮಾ ಮಾಡುವುದು ಖಚಿತ ಆಗಿದೆ. ಇದೇ ಸಿನಿಮಾದಲ್ಲಿ ಸಂಜಯ್​ ದತ್​ ಕೂಡ ಇರಲಿದ್ದಾರೆ. ಪಾತ್ರಗಳ ವಿವರಗಳು ಹೊರಬರುತ್ತಿವೆ.

ರಣವೀರ್​ ಸಿಂಗ್​ಗೆ ಕಿಸ್ ಮಾಡಿದ್ರಾ ಕರಣ್ ಜೋಹರ್? ವೈರಲ್ ಆಗಿದೆ ವಿಡಿಯೋ

ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಹೊಸ ಸಿನಿಮಾದಲ್ಲಿ ರಣವೀರ್​ ಸಿಂಗ್ ಅವರು ರಾ ಏಜೆಂಟ್​ ಆಗಿ ನಟಿಸಲಿದ್ದಾರೆ. ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಲಿದೆ. ಇದರಲ್ಲಿ ಸಂಜಯ್​ ದತ್​ ಅವರಿಗೆ ವಿಲನ್​ ಪಾತ್ರವನ್ನು ನೀಡಲು ನಿರ್ಧರಿಸಲಾಗಿದೆಯಂತೆ. ಆದರೆ ಈ ವಿಚಾರಗಳ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಸದ್ಯಕ್ಕೆ ಎಲ್ಲವೂ ಅಂತೆ-ಕಂತೆಗಳ ಹಂತದಲ್ಲೇ ಇವೆ.

ರಣವೀರ್ ಸಿಂಗ್​ ಅವರು ಇತ್ತೀಚಿನ ದಿನಗಳಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲು ಸಖತ್​ ಸಮಯ ತೆಗೆದುಕೊಳ್ಳುತ್ತಿದ್ದಾರೆ. ಒಂದಷ್ಟು ಪ್ರಾಜೆಕ್ಟ್​ಗಳನ್ನು ಮಾತುಕಥೆ ಹಂತದಲ್ಲೇ ಕೈಬಿಟ್ಟ ಬಳಿಕ ಅವರು ಈಗ ಆದಿತ್ಯ ಧಾರ್​ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ತುಂಬ ಡಿಫರೆಂಟ್​ ಆಗಿರಲಿದೆ ಎಂದು ಅವರು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಇದೇ ಚಿತ್ರದಲ್ಲಿ ಖ್ಯಾತ ನಟರಾದ ಆರ್​. ಮಾಧವನ್​, ಅಕ್ಷಯ್​ ಖನ್ನಾ, ಅರ್ಜುನ್​ ರಾಮ್​ಪಾಲ್​ ಕೂಡ ನಟಿಸಲಿದ್ದಾರೆ. ಹಾಗಾಗಿ ಪ್ರೇಕ್ಷಕರಲ್ಲಿ ಕೌತುಕ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ