AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ವಿಶ್ ಮಾಡಿ ಸೆಲ್ಫಿ ತೆಗೆದುಕೊಳ್ಳಲು ಬಂದ ಫ್ಯಾನ್ಸ್​ನ ತಳ್ಳಿದ ಸಂಜಯ್ ದತ್

ಎಲ್ಲಾ ಸಂದರ್ಭದಲ್ಲೂ ಹೀರೋಗಳು ಒಂದೇ ಮೂಡ್​ನಲ್ಲಿ ಇರುವುದಿಲ್ಲ. ಅವರಿಗೆ ಅಭಿಮಾನಿಗಳು ಮುತ್ತಿಕೊಂಡರೆ ಸಿಟ್ಟಾಗುತ್ತಾರೆ. ಸಂಜಯ್ ದತ್ ವಿಚಾರದಲ್ಲಿ ಆಗಿದ್ದೂ ಅದೇ. ಅವರು ಫ್ಯಾನ್ಸ್​​ನ ಮಾತನಾಡಿಸೋ ಯಾವುದೇ ಮೂಡ್​ನಲ್ಲಿಯೂ ಇರಲಿಲ್ಲ.

ಬರ್ತ್​ಡೇ ವಿಶ್ ಮಾಡಿ ಸೆಲ್ಫಿ ತೆಗೆದುಕೊಳ್ಳಲು ಬಂದ ಫ್ಯಾನ್ಸ್​ನ ತಳ್ಳಿದ ಸಂಜಯ್ ದತ್
ಸಂಜಯ್ ದತ್
ರಾಜೇಶ್ ದುಗ್ಗುಮನೆ
|

Updated on: Jul 30, 2024 | 1:02 PM

Share

ನಟ ಸಂಜಯ್ ದತ್ ಅವರು ಜುಲೈ 29ರಂದು ಹುಟ್ಟಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 65 ವರ್ಷ ವಯಸ್ಸು. ಜನ್ಮದಿನದಂದು ನೆಚ್ಚಿನ ಸೆಲೆಬ್ರಿಟಿಯನ್ನು ನೋಡೋದು ಎಂದರೆ ಫ್ಯಾನ್ಸ್​ಗೆ ಎಲ್ಲಿಲ್ಲದ ಖುಷಿ. ಆಪ್ತರ ಜೊತೆ ಬರ್ತ್​ಡೇ ಆಚರಿಸಿಕೊಳ್ಳಲು ಅವರು ಕೆಲವೇ ಕೆಲವರ ಜೊತೆ ಹೋಟೆಲ್ ಒಂದಕ್ಕೆ ಬಂದಿದ್ದರು. ಈ ವೇಳೆ ಅವರ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಇದರಿಂದ ಅವರಿಗೆ ಕಿರಿಕಿರಿ ಆಗಿದೆ. ಅವರು ಅಭಿಮಾನಿಗಳನ್ನು ದೂಡಿ ಸಾಗಿದ್ದಾರೆ.

ಸಾಮಾನ್ಯವಾಗಿ ಹೀರೋಗಳು ಎಲ್ಲಾ ಸಂದರ್ಭದಲ್ಲೂ ಒಂದೇ ಮೂಡ್​ನಲ್ಲಿ ಇರುವುದಿಲ್ಲ. ಅವರಿಗೆ ಅಭಿಮಾನಿಗಳು ಮುತ್ತಿಕೊಂಡರೆ ಸಿಟ್ಟಾಗುತ್ತಾರೆ. ಸಂಜಯ್ ದತ್ ವಿಚಾರದಲ್ಲಿ ಆಗಿದ್ದೂ ಅದೇ. ಅವರು ಫ್ಯಾನ್ಸ್​​ನ ಮಾತನಾಡಿಸೋ ಯಾವುದೇ ಮೂಡ್​ನಲ್ಲಿಯೂ ಇರಲಿಲ್ಲ. ಅವರ ಎದುರು ಬಂದ ಫ್ಯಾನ್ಸ್ ಸೆಲ್ಫಿಗಾಗಿ ಒತ್ತಾಯ ಮಾಡುತ್ತಿದ್ದರು. ಆದರೆ, ಇದನ್ನು ಗಮನಿಸದೆ ಅವರು ಮುಂದೆ ಸಾಗಿದ್ದಾರೆ.

View this post on Instagram

A post shared by Voompla (@voompla)

ಸಂಜಯ್ ದತ್ ಅವರು ಎಷ್ಟೇ ಪ್ರಯತ್ನಪಟ್ಟರೂ ಅಭಿಮಾನಿಗಳು ಅವರಿಗೆ ಅಡ್ಡಲಾಗಿ ನಿಂತೇ ಇದ್ದರು. ಇದರಿಂದ ಸಿಟ್ಟಾದ ಸಂಜಯ್ ದತ್ ಅವರು ಅಭಿಮಾನಿಗಳನ್ನು ತಳ್ಳಿ ಮುಂದೆ ಸಾಗಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೆಲವರು ಸಂಜಯ್ ದತ್ ಅವರನ್ನು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ‘ಸಂಜಯ್ ದತ್ ಮಧ್ಯ ಸೇವಿಸಿದ್ದರು ಅನಿಸುತ್ತದೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್

ಸಂಜಯ್ ದತ್ ಬರ್ತ್​ಡೇ ಪ್ರಯುಕ್ತ ‘ಕೆಡಿ’ ಸಿನಿಮಾದ ಲುಕ್ ರಿವೀಲ್ ಆಗಿದೆ. ಧ್ರುವ ಸರ್ಜಾ ನಟನೆಯ ಈ ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಧಾಕ್ ದೇವ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಅವರ ಲುಕ್ ಖಳ ನಾಯಕ್ ದಿನಗಳನ್ನು ನೆನಪಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ