AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಸಂಜಯ್​ ದತ್​? ಲೋಕಸಭಾ ಚುನಾವಣೆ ಸನಿಹದಲ್ಲಿ ಸಿಕ್ತು ಸ್ಪಷ್ಟನೆ

ಸಿನಿಮಾ ಮಂದಿ ರಾಜಕೀಯಕ್ಕೆ ಬರುವುದು ತುಂಬ ಕಾಮನ್​. ಈಗಾಗಲೇ ರಾಜಕೀಯದಲ್ಲಿ ಯಶಸ್ಸು ಕಂಡ ಅನೇಕರು ಇದ್ದಾರೆ. ಪ್ಯಾನ್​ ಇಂಡಿಯಾ ನಟ ಸಂಜಯ್​ ದತ್​ ಕೂಡ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂದು ಅನೇಕರು ಊಹಿಸಿದ್ದಾರೆ. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುದ್ದಿ ಪ್ರಕಟ ಆಗಿದೆ. ಆ ಬಗ್ಗೆ ಸಂಜಯ್​ ದತ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಸಂಜಯ್​ ದತ್​? ಲೋಕಸಭಾ ಚುನಾವಣೆ ಸನಿಹದಲ್ಲಿ ಸಿಕ್ತು ಸ್ಪಷ್ಟನೆ
ಸಂಜಯ್​ ದತ್​
ಮದನ್​ ಕುಮಾರ್​
|

Updated on: Apr 08, 2024 | 6:18 PM

Share

ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸಿದೆ. ಎಲ್ಲ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಹಲವು ಕ್ಷೇತ್ರಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. ಕಂಗನಾ ರಣಾವತ್​, ಅರುಣ್​ ಗೋವಿಲ್​ ಮುಂತಾದ ಕಲಾವಿದರು ಈ ಬಾರಿ ಚುನಾವಣೆಯಲ್ಲಿ (Elections) ಸ್ಪರ್ಧಿಸುತ್ತಿದ್ದಾರೆ. ಬಾಲಿವುಡ್​ನ ಮತ್ತೊರ್ವ ಸ್ಟಾರ್ ನಟ ಸಂಜಯ್​ ದತ್​ (Sanjay Dutt) ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೆಲವು ಕಡೆಗಳಲ್ಲಿ ಗಾಳಿಸುದ್ದಿ ಹಬ್ಬಿದೆ. ಅದಕ್ಕೆ ಸ್ವತಃ ಸಂಜಯ್​ ದತ್​ ಅವರು ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ.

‘ನಾನು ರಾಜಕೀಯಕ್ಕೆ ಸೇರುತ್ತೇನೆ ಎಂಬ ಎಲ್ಲಾ ವದಂತಿಗಳಿಗೆ ತೆರೆ ಎಳೆಯಲು ನಾನು ಬಯಸುತ್ತೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ ಅಥವಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ನಿರ್ಧರಿಸಿದರೆ ಅದನ್ನು ಘೋಷಿಸುವ ಮೊದಲ ವ್ಯಕ್ತಿ ನಾನೇ. ಸದ್ಯಕ್ಕೆ ನನ್ನ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳನ್ನು ನಂಬುವುದರಿಂದ ದೂರವಿರಿ’ ಎಂದು ಸಂಜಯ್​ ದತ್​ ಅವರು ‘ಎಕ್ಸ್​’ (ಟ್ವಿಟರ್​) ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಈ ಮೊದಲು ಕೂಡ ಸಂಜಯ್​ ದತ್​ ಅವರ ಬಗ್ಗೆ ಈ ರೀತಿಯ ಗಾಳಿ ಸುದ್ದಿಗಳು ಹಬ್ಬಿದ್ದವು. 2019ರಲ್ಲಿ ‘ರಾಷ್ಟ್ರೀಯ ಸಮಾಜ ಪಕ್ಷ’ ಸೇರುವಂತೆ ಅವರಿಗೆ ಆಫರ್​ ನೀಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿತ್ತು. ಆದರೆ ಅದು ನಿಜವಾಗಲಿಲ್ಲ. ಈಗ ಲೋಕಸಭಾ ಚುನಾವಣೆಯ ಕಾವು ಜೋರಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಜಯ್​ ದತ್​ ಅವರ ಬಗ್ಗೆ ಗಾಸಿಪ್​ ಹರಡಿದೆ. ಆದರೆ ಅವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಅಂಕೆ-ಕಂತೆಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಬಳಿಕ 2.46 ಕೋಟಿ ರೂಪಾಯಿ ಬೆಲೆಯ ಕಾರು ಖರೀದಿಸಿದ ಕಂಗನಾ

ಸಂಜಯ್​ ದತ್​ ಅವರಿಗೆ ದೇಶಾದ್ಯಂತ ಖ್ಯಾತಿ ಇದೆ. ಮೊದಲು ಬಾಲಿವುಡ್​ನಲ್ಲಿ ಮಾತ್ರ ಫೇಮಸ್​ ಆಗಿದ್ದ ಅವರು ಈಗ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಸಂಜಯ್​ ದತ್​ ಮಾಡಿದ ಅಧೀರ ಎಂಬ ಪಾತ್ರ ಎಲ್ಲರ ಗಮನ ಸೆಳೆಯಿತು. ಬಳಿಕ ಅವರಿಗೆ ದಕ್ಷಿಣ ಭಾರತದಿಂದ ಹಲವು ಅವಕಾಶಗಳು ಸಿಗಲಾರಂಭಿಸಿದವು. ಸದ್ಯಕ್ಕೆ ಅವರು ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಜಕೀಯದ ಬಗ್ಗೆ ಗಮನ ಹರಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ