AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಪ್​ ಆಫ್ ಆಲ್ ಫಿಲ್ಮ್ಸ್’ ನಲ್ಲಿ ಸಂಜಯ್​ ದತ್​, ಮಿಥುನ್ ಚಕ್ರವರ್ತಿ, ಜಾಕಿ ಶ್ರಾಫ್ ಮತ್ತು ಸನ್ನಿ ಡಿಯೋಲ್​

ಇನ್ನೂ ಹೆಸರಿಡದ ಚಿತ್ರದ ಫಸ್ಟ್​ ಲುಕ್ ಪೋಸ್ಟರ್​​ನನ್ನು ಸಂಜಯ್​ ದತ್​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

‘ಬಾಪ್​ ಆಫ್ ಆಲ್ ಫಿಲ್ಮ್ಸ್' ನಲ್ಲಿ ಸಂಜಯ್​ ದತ್​, ಮಿಥುನ್ ಚಕ್ರವರ್ತಿ, ಜಾಕಿ ಶ್ರಾಫ್ ಮತ್ತು ಸನ್ನಿ ಡಿಯೋಲ್​
ಮಿಥುನ್​ ಚಕ್ರವರ್ತಿ, ಸಂಜಯ್​ ದತ್, ಜಾಕಿ ಶ್ರಾಫ್, ಸನ್ನಿ ಡಿಯೋಲ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 11, 2022 | 2:34 PM

Share

ಬುಧವಾರ (ನವೆಂಬರ್ 10) ಸಂಜಯ್​ ದತ್ ತಮ್ಮ ಹೊಸ ಚಿತ್ರವನ್ನ ಘೋಷಿಸಿದ್ದಾರೆ. ಇನ್ನೂ ಹೆಸರಿಡದ ಸಿನಿಮಾದ ‘ಬಾಪ್​ ಆಫ್ ಆಲ್ ಫಿಲ್ಮ್ಸ್’ ಎಂದು ಬರೆದುಕೊಳ್ಳುವ ಮೂಲಕ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ನ್ನು ಸಂಜಯ್​ ದತ್​ ತಮ್ಮ ಇನ್​ಸ್ಟಾಗ್ರಾಮ್​ನ್​ಲ್ಲಿ ಹಂಚಿಕೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಬಾರಿ ಸಂಚಲನ ಮೂಡಿಸಿದೆ. ಇದರಲ್ಲಿ ಮಿಥುನ್​ ಚಕ್ರವರ್ತಿ, ಸಂಜಯ್​ ದತ್​, ಜಾಕಿ ಶ್ರಾಫ್ ಮತ್ತು ಸನ್ನಿ ಡಿಯೋಲ್ ಒಟ್ಟಾಗಿ ಕಾಣಿಸಿಕೊಂಡಿದ್ದು, ಅಭಿಷೇಕ್​ ಬಚ್ಚನ್​, ವರುಣ್​ ಧವನ್​ ಬೈಸೆಪ್ಸ್ ಎಮೋಜಿಯನ್ನು ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇನ್ನು ಟ್ರೇಡ್​ ವಿಶ್ಲೇಷಕ ತರಣ್ ಆದರ್ಶ ಅವರು ಈ ಪೋಸ್ಟ್​ರ್​ನನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವ ಮೂಲಕ ಈ ಸಿನಿಮಾವು ‘ಆ್ಯಕ್ಷನ್​ ಮತ್ತು ಎಂಟರ್ಟೈನ್​ಮೆಂಟ್​ನಿಂದ ಕೂಡಿರುತ್ತದೆ ಎಂದಿದ್ದಾರೆ. ಹೈವೇ ಮತ್ತು ತನು ವೆಡ್ಸ್​ ಮನು ರಿಟರ್ನ್ಸ್ ನಂತಹ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ವಿವೇಕ್​ ಚೌಹಾಣ್​ ಅವರು ಈ ಸಿನಿಮಾವನ್ನು ನಿರ್ದೇಶಿಸಲಿದ್ದು, ಜೀ ಸ್ಟುಡಿಯೋಸ್​, ಅಹ್ಮದ್​ ಖಾನ್​ ಹಾಗೂ ಅವರ ಪತ್ನಿ ಶೈರಾ ಅಹ್ಮದ್​ ಖಾನ್ ನಿರ್ಮಾಣ ಮಾಡಲಿದ್ದಾರೆ.

ಇದನ್ನೂ ಓದಿ:‘ಕೆಜಿಎಫ್ 2’ ಚಿತ್ರಕ್ಕಾಗಿ ಯಶ್, ಸಂಜಯ್ ದತ್, ರವೀನಾ, ಪ್ರಶಾಂತ್ ನೀಲ್ ಪಡೆದ ಸಂಭಾವನೆ ಎಷ್ಟು? ಇಲ್ಲಿದೆ ವಿವರ

ಇನ್ನು ಮಿಥುನ್​ ಚಕ್ರವರ್ತಿ ಅವರು ಮೂವರೊಂದಿಗು ಹಲವಾರು ವರ್ಷಗಳಿಂದ ವಿಭಿನ್ನ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜಾಕಿ ಶ್ರಾಫ್​ ಅವರೊಂದಿಗೆ ‘ಶಪತ್’​, ‘ಗಂಗಾ ಕಿ ಕಸಮ್’​ ಚಿತ್ರಗಳಲ್ಲಿ ಕೆಲಸ ಮಾಡಿದ್ದು, ಸಂಜಯ್​ ದತ್​ ಮತ್ತು ಮಿಥುನ್​ ಚಕ್ರವರ್ತಿ ಅವರು ‘ಲಕ್’​, ‘ಇಲಾಕಾ’ ಮತ್ತು ‘ಜೀತೆ ಹೈ ಶಾನ್​ ಸೆ’ ಚಿತ್ರಗಳಲ್ಲಿ ಸ್ಕ್ರೀನ್​ ಹಂಚಿಕೊಂಡಿದ್ದಾರೆ. 2008 ರಲ್ಲಿ ಬಿಡುಗಡೆಯಾದ ‘ಹೀರೋಸ್’​ನಲ್ಲಿ ಸನ್ನಿ ಡಿಯೋಲ್​ ಮತ್ತು ಮಿಥುನ್​ ಕಾಣಿಸಿಕೊಂಡಿದ್ದಾರೆ.

ಇನ್ನು ಸಂಜಯ್​ ದತ್​ ‘ಕೆ.ಜಿ.ಎಫ್​-2’ನಲ್ಲಿ ನಟಿಸಿದ್ದು ಈ ಚಿತ್ರವು ಅವರಿಗೆ ದೊಡ್ಡ ಮಟ್ಟದ ಸಕ್ಸ್​ಸ್ ನೀಡಿತು. ಇದಾದ ಬಳಿಕ ಮೂರ್ನಾಲ್ಕು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ ಸಂಜಯ್​ ದತ್.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’