AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಳಿತಲ್ಲೇ ನಿದ್ರಿಸುತ್ತಾರೆ ಸಂಜಯ್ ದತ್; ಅನಿವಾರ್ಯವಾಗಿ ಜೈಲಿನಲ್ಲಿ ಕಲಿತ ತಂತ್ರವಿದು  

1993ರಲ್ಲಿ ಮುಂಬೈನಲ್ಲಿ ಬಾಂಬ್ ಬ್ಲಾಸ್ಟ್ ನಡೆಯಿತು. ಈ ಸಮಯದಲ್ಲಿ ಸಂಜಯ್ ದತ್ ಅವರ ಬಳಿ ಶಸ್ತ್ರಾಸ್ತ್ರಗಳಿದ್ದವು. ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಯಿತು. ಅವರಿಗೆ ಶಿಕ್ಷೆ ಕೂಡ ಆಯಿತು. ಪುಣೆಯ ಯರವಾಡ ಜೈಲಿನಲ್ಲಿ ಅವರು ಹಲವು ವರ್ಷ ಇರಬೇಕಾಯಿತು.

ಕುಳಿತಲ್ಲೇ ನಿದ್ರಿಸುತ್ತಾರೆ ಸಂಜಯ್ ದತ್; ಅನಿವಾರ್ಯವಾಗಿ ಜೈಲಿನಲ್ಲಿ ಕಲಿತ ತಂತ್ರವಿದು  
ಸಂಜಯ್ ದತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 14, 2024 | 7:48 AM

Share

ಸಂಜಯ್ ದತ್ ಅವರು ಬಾಲಿವುಡ್​ನಲ್ಲಿ 40 ವರ್ಷಗಳನ್ನು ಕಳೆದಿದ್ದಾರೆ. ಅವರು ಹಲವು ಯಶಸ್ವಿ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗಲೂ ಬಾಲಿವುಡ್​ನಲ್ಲಿ ಸಿನಿಮಾ ಮಾಡುವುದನ್ನು ಮುಂದುವರಿಸಿದ್ದಾರೆ. ಅವರಿಗೆ ಕನ್ನಡ ಚಿತ್ರರಂಗದಲ್ಲೂ ಬೇಡಿಕೆ ಸೃಷ್ಟಿ ಆಗಿದೆ. ಸಂಜಯ್ ದತ್ ಅವರು 1971ರಲ್ಲಿ ‘ರೇಶ್ಮಾ ಔರ್ ಶೇರಾ’ ಸಿನಿಮಾದಲ್ಲಿ ಬಾಲಕ ಕಲಾವಿದರಾಗಿ ಬಣ್ಣದ ಬದುಕು ಆರಂಭಿಸಿದ್ದರು. ನಂತರ ಹೀರೋ ಆದರು. ಅವರು ಜೈಲಿನಲ್ಲಿ ಕಾಲ ಕಳೆದ ಕಾಲವೊಂದಿತ್ತು. ಈ ಬಗ್ಗೆ ಮಾತನಾಡಿದ್ದರು.

1993ರಲ್ಲಿ ಮುಂಬೈನಲ್ಲಿ ಬಾಂಬ್ ಬ್ಲಾಸ್ಟ್ ನಡೆಯಿತು. ಈ ಸಮಯದಲ್ಲಿ ಸಂಜಯ್ ದತ್ ಅವರ ಬಳಿ ಶಸ್ತ್ರಾಸ್ತ್ರಗಳಿದ್ದವು. ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಯಿತು. ಅವರಿಗೆ ಶಿಕ್ಷೆ ಕೂಡ ಆಯಿತು. ಪುಣೆಯ ಯರವಾಡ ಜೈಲಿನಲ್ಲಿ ಅವರು ಹಲವು ವರ್ಷ ಇರಬೇಕಾಯಿತು. ಆಗ ಅವರು ಕುಳಿತು ನಿದ್ದೆ ಮಾಡುತ್ತಿದ್ದರು.

ಜೈಲಿನಲ್ಲಿ ಶಿಕ್ಷೆ ಅನುಭವಿಸುವಾಗ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಜೈಲಿನಲ್ಲಿ ಕುಳಿತೇ ಅವರು ನಿದ್ದೆ ಮಾಡುತ್ತಿದ್ದರು. ಅದುವೇ ಅವರಿಗೆ ಅಭ್ಯಾಸ ಆಗಬೇಕಾಯಿತು. ರಿತೇಶ್ ದೇಶ್​ಮುಖ್ ಹಾಗೂ ಸಾಜಿದ್ ಖಾನ್ ನಡೆಸಿಕೊಡುತ್ತಿದ್ದ ‘ಯಾರೋ ಕಿ ಭಾರತ್’ ಶೋನಲ್ಲಿ ಸಂಜಯ್ ದತ್ ಭಾಗಿ ಆಗಿ ಅವರು ಈ ಬಗ್ಗೆ ಹೇಳಿದ್ದರು.

ಅಜಯ್ ದೇವಗನ್, ಅಭಿಷೇಕ್ ಬಚ್ಚನ್ ಜೊತೆ ಈ ಶೋನಲ್ಲಿ ಬಂದಿದ್ದರು. ‘ಅವರು ಕುಳಿತಲ್ಲೇ ನಿದ್ದೆ ಮಾಡುತ್ತಾರೆ’ ಎಂದು ಅಭಿಷೇಕ್ ಬಚ್ಚನ್ ಹೇಳಿದರು. ಸಾಜಿದ್ ಏಕೆ ಎಂದು ಕೇಳಿದರು. ‘ಮಳೆ ಬಂದಾಗ ಸೆಲ್​ಗಳಲ್ಲಿ ನೀರು ತುಂಬುತ್ತಿತ್ತು. ನಾವು ನೀರಲ್ಲೇ ಮಲಗಬೇಕಿತ್ತು. ಹೀಗಾಗಿ ಕುಳಿತು ನಾನು ನಿದ್ದೆ ಮಾಡುತ್ತಿದ್ದೆವು. ಅದುವೇ ಅಭ್ಯಾಸ ಆಗೋಯ್ತು. ಈಗಲೂ ಹಾಗೆಯೇ ಮಲಗುತ್ತೇನೆ’ ಎಂದರು ಅವರು.

ಸಂಜಯ್ ದತ್ ಜೀವನ ಆಧರಿಸಿದ ‘ಸಂಜು’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ರಾಜ್​ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ಸಂಜಯ್ ದತ್ ಪಾತ್ರದಲ್ಲಿ ರಣಬೀರ್ ಕಪೂರ್ ನಟಿಸಿದ್ದರು. ಅವರು ಅನುಭವಿಸಿದ ತೊಂದರೆಗಳ ಬಗ್ಗೆ ಸಿನಿಮಾದಲ್ಲಿ ತೋರಿಸಲಾಯಿತು.

ಇದನ್ನೂ ಓದಿ: ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್

ಸಂಜಯ್ ದತ್ ಅವರು ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದು, ಜೋಗಿ ಪ್ರೇಮ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!