AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೊಡಕ್ಷನ್​ ಹೌಸ್​ ಆರಂಭಿಸಿದ ‘ಕೆಜಿಎಫ್​ 2’ ವಿಲನ್​​; ಸಂಜಯ್​ ದತ್​ಗಿದೆ ದೊಡ್ಡ ಕನಸು

2010ಕ್ಕೂ ಮೊದಲು ಬಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ಹಿಟ್​ ಚಿತ್ರಗಳು ತೆರೆಗೆ ಬಂದಿವೆ. ಅದಕ್ಕೆ ಹೋಲಿಕೆ ಮಾಡಿದರೆ, ಈಗ ಬಾಲಿವುಡ್​ ಕೊಂಚ ಮಂಕಾಗಿದೆ. ಆ ಸುವರ್ಣ ಯುಗವನ್ನು ಮರಳಿ ತರಬೇಕು ಎನ್ನುವ ಕನಸಿನೊಂದಿಗೆ ಈ ನಿರ್ಮಾಣ ಸಂಸ್ಥೆ ಆರಂಭವಾಗಿದೆ.

ಪ್ರೊಡಕ್ಷನ್​ ಹೌಸ್​ ಆರಂಭಿಸಿದ ‘ಕೆಜಿಎಫ್​ 2’ ವಿಲನ್​​; ಸಂಜಯ್​ ದತ್​ಗಿದೆ ದೊಡ್ಡ ಕನಸು
ಸಂಜಯ್ ದತ್
TV9 Web
| Edited By: |

Updated on:Feb 08, 2022 | 12:04 PM

Share

ಸಂಜಯ್​ ದತ್ (Sanjay Dutt)​ ಅವರು ಕಳೆದ ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ವೃತ್ತಿ ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಅವರು ಕಂಡಿದ್ದಾರೆ. ಸಂಜಯ್ ದತ್​ ಅವರು ನಟನೆ ಬಿಟ್ಟು ಬೇರಾವ ವಿಚಾರಕ್ಕೂ ತಲೆಕೆಡಿಸಿಕೊಂಡವರಲ್ಲ. ‘ಹಿಂದಿ ಬಿಗ್​ ಬಾಸ್​ 5’ಅನ್ನು ಸಂಜಯ್ ದತ್​ ಹೋಸ್ಟ್​ ಮಾಡಿದ್ದು ಬಿಟ್ಟರೆ, ಕಿರುತೆರೆಯಲ್ಲಿ ಅವರು ಕೆಲಸ ಮಾಡಿಲ್ಲ. ಈಗ ಸಂಜಯ್ ದತ್​ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ನಲವತ್ತು ವರ್ಷಗಳ ಅನುಭವ ಹಾಗೂ ಗಳಿಕೆಯನ್ನು ಕೂಡಿಸಿ ಅವರು ನಿರ್ಮಾಣ ಸಂಸ್ಥೆ (Production House) ಒಂದನ್ನು ಆರಂಭಿಸಿದ್ದಾರೆ. ಭಿನ್ನ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎನ್ನುವ ಆಲೋಚನೆ ಅವರದ್ದು. ಈ ಮೂಲಕ ನಿರ್ಮಾಪಕರಾಗಿಯೂ ಸಂಜಯ್​ ದತ್​ ಈಗ ಬಡ್ತಿ ಪಡೆದಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

2010ಕ್ಕೂ ಮೊದಲು ಬಾಲಿವುಡ್​ನಲ್ಲಿ ಸಾಕಷ್ಟು ಸೂಪರ್​ಹಿಟ್​ ಚಿತ್ರಗಳು ತೆರೆಗೆ ಬಂದಿವೆ. ಅದಕ್ಕೆ ಹೋಲಿಕೆ ಮಾಡಿದರೆ, ಈಗ ಬಾಲಿವುಡ್​ ಕೊಂಚ ಮಂಕಾಗಿದೆ. ಆ ಸುವರ್ಣ ಯುಗವನ್ನು ಮರಳಿ ತರಬೇಕು ಎನ್ನುವ ಕನಸಿನೊಂದಿಗೆ ಈ ನಿರ್ಮಾಣ ಸಂಸ್ಥೆ ಆರಂಭವಾಗಿದೆ. ‘ಥ್ರೀ ಡೈಮೆನ್ಶನ್​ ಮೋಷನ್​ ಪಿಕ್ಚರ್ಸ್​’ ಎಂಬ ಹೆಸರನ್ನು ಸಂಜಯ್​ ದತ್​ ಈ ನಿರ್ಮಾಣ ಸಂಸ್ಥೆಗೆ ಇಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಭಿನ್ನ ಸಿನಿಮಾಗಳನ್ನು ಮಾಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ಈ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾವು ಚಿತ್ರರಂಗಕ್ಕೆ ಕಾಲಿಟ್ಟಾಗ ಹೀರೋಯಿಸಂ ಶುರುಮಾಡಿದೆವು. ಅದು ಈಗ ನಿಂತಿದೆ ಎನ್ನುವ ಭಾವನೆ ಕಾಡುತ್ತಿದೆ. ಹೀಗಾಗಿ, ಅದನ್ನು ಮತ್ತೆ ತರಬೇಕಿದೆ. ಅದಕ್ಕಾಗಿ ಈ ಸಿನಿಮಾ’ ಎಂದಿದ್ದಾರೆ ಸಂಜಯ್​ ದತ್.

1981ರಲ್ಲಿ ತೆರೆಗೆ ಬಂದ ‘ರಾಕಿ’ ಚಿತ್ರದ ಮೂಲಕ ಹೀರೋ ಆಗಿ ಬಣ್ಣದ ಬದುಕು ಆರಂಭಿಸಿದರು ಸಂಜಯ್​ ದತ್​. 80 ಹಾಗೂ 90ರ ದಶಕದಲ್ಲಿ ಹಿಂದಿ ಚಿತ್ರರಂಗದಲ್ಲಿ ಮುಂಚೂಣಿಯಲ್ಲಿದ್ದರು. ಸಿದ್ಧಾಂತ್​ ಸಚ್​ದೇವ್​ ನಿರ್ದೇಶನದ ಹಾರರ್​-ಕಾಮಿಡಿ ಚಿತ್ರವನ್ನು ‘ಥ್ರೀ ಡೈಮೆನ್ಶನ್​ ಮೋಷನ್​ ಪಿಕ್ಚರ್ಸ್​’ ನಿರ್ಮಾಣ ಮಾಡುತ್ತಿದೆ. ನಾಲ್ಕು ಹೊಸ ಮುಖಗಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಇನ್ನೂ ಹೆಸರು ಇಟ್ಟಿಲ್ಲ.

ತಮ್ಮ ಸಿನಿಮಾಗಳ ಬಗ್ಗೆ ಇತ್ತೀಚೆಗೆ ಅವರು ಮಾತನಾಡಿದ್ದರು. ‘2022 ಆರಂಭದಲ್ಲೇ ನನ್ನ ಮೂರು ಚಿತ್ರಗಳು ಬಿಡುಗಡೆ ಆಗಬೇಕಿದೆ. ಇದಕ್ಕೆ ನಾನು ತುಂಬಾ ಉತ್ಸುಕನಾಗಿದ್ದೇನೆ. ಈ ಸಿನಿಮಾಗಳು ರಿಲೀಸ್​ ಆಗುವುದಕ್ಕೆ ಎದುರು ನೋಡುತ್ತಿದ್ದೇನೆ. ಆದರೆ, ಕೊವಿಡ್​ ಹೆಚ್ಚುತ್ತಿದೆ. ಹೀಗಾಗಿ ಎಲ್ಲವೂ ಅನಿಶ್ಚಿತವಾಗಿದೆ. ‘ಶಂಶೇರಾ’, ‘ಕೆಜಿಎಫ್ 2’ ಮತ್ತು ‘ಪೃಥ್ವಿರಾಜ್’ ಈ ಮೂರು ಚಿತ್ರಗಳು ಥಿಯೇಟರ್​ ರಿಲೀಸ್​​ಗಾಗಿಯೇ ಮಾಡಿದ್ದಾಗಿದೆ’ ಎಂದಿದ್ದರು ಸಂಜಯ್​ ದತ್​. ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ರಿಲೀಸ್​ಗೂ ಮುನ್ನವೇ ಗುಡ್​ ನ್ಯೂಸ್​; ಮತ್ತೆ ಒಂದಾಗ್ತಾರೆ ಸಂಜಯ್​ ದತ್​-ರವೀನಾ ಟಂಡನ್

 ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

Published On - 8:51 am, Tue, 8 February 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ