AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ​ ಈ ಹೀರೋ ಈಗಲೂ ನನ್ನನ್ನು ಮಗುವಿನಂತೆ ಕಾಣುತ್ತಾರೆ ಎಂದ ಆಲಿಯಾ ಭಟ್​

ಸಿದ್ದಾರ್ಥ್​ ಕಣ್ಣನ್​ ಅವರ ಯೂಟ್ಯೂಬ್​ ಚಾನೆಲ್​ಗೆ ಆಲಿಯಾ ಸಂದರ್ಶನ ನೀಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಅಜಯ್​​ ದೇವಗನ್​ ಕಾಣಿಸಿಕೊಂಡಿದ್ದಾರೆ. ಅವರ ಜತೆಗಿನ ಗೆಳೆತನದ ಬಗ್ಗೆ ಆಲಿಯಾ ಮಾತನಾಡಿದ್ದಾರೆ.

ಬಾಲಿವುಡ್​ನ​ ಈ ಹೀರೋ ಈಗಲೂ ನನ್ನನ್ನು ಮಗುವಿನಂತೆ ಕಾಣುತ್ತಾರೆ ಎಂದ ಆಲಿಯಾ ಭಟ್​
ಆಲಿಯಾ ಭಟ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 14, 2022 | 2:24 PM

Share

ಆಲಿಯಾ ಭಟ್​ (Alia Bhatt) ಬಾಲಿವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಸ್ಟಾರ್​ ಕಿಡ್ ಆದ ಹೊರತಾಗಿಯೂ ಅವರು ತಮ್ಮದೇ ಆದ ಹೆಸರು ಮಾಡಿದ್ದಾರೆ. ಬಾಲಿವುಡ್​ನಲ್ಲಿ ಯಾರೂ ಅವರನ್ನು ನಿರ್ದೇಶಕ ಮಹೇಶ್​ ಭಟ್​ ಅವರ ಮಗಳು ಎಂದು ಗುರುತಿಸುವುದಿಲ್ಲ. ಬದಲಿಗೆ ಆಲಿಯಾ ಭಟ್​ ಎಂದೇ ಗುರುತಿಸಿಕೊಳ್ಳುತ್ತಾರೆ. ಅಷ್ಟರ ಮಟ್ಟಿಗೆ ಅವರು ಹೆಸರು ಮಾಡಿದ್ದಾರೆ. ಅನೇಕ ಸ್ಟಾರ್​ ನಟರ ಜತೆ ಆಲಿಯಾ ಒಳ್ಳೆಯ ಗೆಳೆತನ ಹೊಂದಿದ್ದಾರೆ. ಸದ್ಯ ಅವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi Movie) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.  

ಸಿದ್ದಾರ್ಥ್​ ಕಣ್ಣನ್​ ಅವರ ಯೂಟ್ಯೂಬ್​ ಚಾನೆಲ್​ಗೆ ಆಲಿಯಾ ಸಂದರ್ಶನ ನೀಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಅಜಯ್​​ ದೇವಗನ್​ ಕಾಣಿಸಿಕೊಂಡಿದ್ದಾರೆ. ಅವರ ಜತೆಗಿನ ಗೆಳೆತನದ ಬಗ್ಗೆ ಆಲಿಯಾ ಮಾತನಾಡಿದ್ದಾರೆ.‘ಅಜಯ್ ದೇವಗನ್​ ಜತೆ ಹೆಚ್ಚು ಸಮಯ ಕಳೆದಿಲ್ಲ. ನಮ್ಮ ನಡುವೆ ಸ್ನೇಹ ಬೆಳೆಯುವಷ್ಟು ಸಮಯ ಸಿಗಲೇ ಇಲ್ಲ’ ಎಂದಿದ್ದಾರೆ ಆಲಿಯಾ.

‘ಡಿಯರ್​ ಜಿಂದಗಿ’ ಚಿತ್ರದಲ್ಲಿ ಶಾರುಖ್​ ಹಾಗೂ ಆಲಿಯಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಹಿಟ್​ ಆಗಿತ್ತು. ಈ ಚಿತ್ರದ ಪ್ರಚಾರದಲ್ಲಿ ಆಲಿಯಾ ಹಾಗೂ ಶಾರುಖ್ ಸಾಕಷ್ಟು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ, ಶಾರುಖ್​ ಜತೆ ಆಲಿಯಾಗೆ ಒಳ್ಳೆಯ ಗೆಳೆತನ ಬೆಳೆದಿದೆ. ‘ಶಾರುಖ್​ ಅವರು ನಿಜಕ್ಕೂ ಭಿನ್ನ. ನಾವು ಸಾಕಷ್ಟು ಸಮಯವನ್ನು ಒಟ್ಟಾಗಿ ಕಳೆದಿದ್ದೇವೆ. ನಾನು ಅವರ ಜತೆ ತುಂಬಾನೇ ಕಂಫರ್ಟೆಬಲ್​ ಫೀಲ್ ಎನಿಸುತ್ತದೆ. ಅವರು ನನ್ನ ಫ್ರೆಂಡ್​ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’ ಎಂದರು ಆಲಿಯಾ.

ಸಂಜಯ್​ ದತ್​ ಅವರು ಆಲಿಯಾ ಅವರನ್ನು ಮಗಳಂತೆ ಕಾಣುತ್ತಾರೆ. ಈ ಬಗ್ಗೆ ಆಲಿಯಾ ಹೇಳಿಕೊಂಡಿದ್ದಾರೆ. ‘ಸಡಕ್​ 2’ ಚಿತ್ರದಲ್ಲಿ ಆಲಿಯಾ ಹಾಗೂ ಸಂಜಯ್​ ದತ್​ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಚಿತ್ರಕ್ಕೆ ಆಲಿಯಾ ತಂದೆ ಮಹೇಶ್​ ಭಟ್​ ನಿರ್ದೇಶನ ಮಾಡಿದ್ದಾರೆ. ‘ಸಂಜಯ್​ ದತ್​ ನನ್ನನ್ನು ಮಗುವಿನಂತೆ ಟ್ರೀಟ್​ ಮಾಡುತ್ತಾರೆ. ನನ್ನ ತಂದೆ ಜತೆಗೆ ಅವರಿಗೆ ಒಳ್ಳೆಯ ಗೆಳೆತನವಿದೆ. ಈ ಕಾರಣಕ್ಕೆ ಅವರು ನನ್ನ ತಂದೆ ಸ್ಥಾನದಲ್ಲಿ ನಿಲ್ಲುತ್ತಾರೆ. ನನ್ನನ್ನು ಚಾಚು ಎಂದು ಕರೆಯಬೇಕು ಎನ್ನುತ್ತಿರುತ್ತಾರೆ’ ಎಂದಿದ್ದಾರೆ ಆಲಿಯಾ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ  ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಗಂಗೂಬಾಯಿ ಆಗಿ ಆಲಿಯಾ ಭಟ್​ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ಚಿತ್ರದ ಟ್ರೇಲರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಆಲಿಯಾ ಭಟ್​ ಅವರ ನಟನೆ ಕಂಡು ಎಲ್ಲರೂ ಪ್ರಶಂಸೆಯ ಮಾತುಗಳನ್ನು ಆಡುತ್ತಿದ್ದಾರೆ.

ಇದನ್ನೂ ಓದಿ: ಟಿವಿ9 ಜತೆ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಬಗ್ಗೆ ಮಾತನಾಡಿದ ಆಲಿಯಾ ಭಟ್​; ಇಲ್ಲಿದೆ ವಿಡಿಯೋ

Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ