AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತದ ಬಗ್ಗೆ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ

ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಹಾಗೂ ಖ್ಯಾತ ಉದ್ಯಮಿ ಸಂಜಯ್ ಕಪೂರ್ ಅವರು 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸಂಜಯ್ ಅವರು ಪೋಲೋ ಆಟವಾಡುವಾಗ ಅನಾರೋಗ್ಯಕ್ಕೆ ಒಳಗಾಗಿ ಇಂಗ್ಲೆಂಡ್‌ನಲ್ಲಿ ನಿಧನರಾಗಿದ್ದಾರೆ ಎಂದು ಖಚಿತಪಡಿಸಲಾಗಿದೆ.

ವಿಮಾನ ದುರಂತದ ಬಗ್ಗೆ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ
ಸಂಜಯ್-ಕರೀಷ್ಮಾ
ರಾಜೇಶ್ ದುಗ್ಗುಮನೆ
|

Updated on: Jun 13, 2025 | 7:01 AM

Share

ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ ಮಾಜಿ ಪತಿ, ಉದ್ಯಮಿ ಸಂಜಯ್ ಕಪೂರ್ (Sunjay Kapur) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 53 ವರ್ಷ ವಯಸ್ಸಾಗಿತ್ತು. ಸಂಜಯ್​ಗೆ ಕರೀಷ್ಮಾ ಜೊತೆ ಇಬ್ಬರು ಮಕ್ಕಳು ಹಾಗೂ ಎರಡನೇ ಪತ್ನಿ ಪ್ರಿಯಾ ಜೊತೆ ಒಂದು ಮಗು ಹೊಂದಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಶಾಕಿಂಗ್ ವಿಚಾರ ಎಂದರೆ ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಸಂಜಯ್ ಟ್ವೀಟ್ ಮಾಡಿ ಸಂತಾಪ ಕೋರಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತ ಆಗಿದೆ.

ಸಂಜಯ್ ಅವರು ಪೊಲೋ ಗೇಮ್​ನ ಆಡುತ್ತಿದ್ದರು. ಈ ವೇಳೆ ಅವರಿಗೆ ಅನಾರೋಗ್ಯ ಉಂಟಾಗಿದೆ. ಆ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಅವರು ಇಂಗ್ಲೆಂಡ್​ನಲ್ಲಿ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರ ಆಪ್ತೆ ಸುಹೇಲ್ ಸೇಠ್ ಅವರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
Image
ಕೆಲಸದವರನ್ನು ಗೌರಿ ಖಾನ್ ಎಷ್ಟು ಉತ್ತಮವಾಗಿ ನೋಡಿಕೊಳ್ತಾರೆ ನೋಡಿ..
Image
ನನಗೆ ಮಾರ್ಗದರ್ಶನ ನೀಡಿದ್ದರೆ; ಡ್ರಗ್ಸ್ ಪಾರ್ಟಿ ಬಗ್ಗೆ ಮೌನ ಮುರಿದ ಮಂಗ್ಲಿ
Image
‘ಸಿತಾರೆ ಜಮೀನ್ ​ಪರ್’ ನೋಡಿ ವಿಮರ್ಶೆ ತಿಳಿಸಿದ ಸುಧಾ ಮೂರ್ತಿ

ಏರ್ ಇಂಡಿಯಾ ವಿಮಾನ ಅಹಮದಾಬಾದ್​ನಿಂದ ಇಂಗ್ಲೆಂಡ್​ಗೆ ತೆರಳುವುದಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್​ಆಪ್ ಆದ ಕೆಲವೇ ಗಂಟೆಗಳಲ್ಲಿ ವಿಮಾನ ಹಾಸ್ಟೆಲ್ ಮೇಲೆ ಅಪ್ಪಳಿಸಿತು. ವಿಮಾನದಲ್ಲಿ ಇದ್ದ ಬಹುತೇಕ ಎಲ್ಲಾ ಪ್ರಯಾಣಿಕರು ನಿಧನ ಹೊಂದಿದ್ದಾರೆ. ಈ ಘಟನೆ ಬಗ್ಗೆ ಅವರು ಟ್ವೀಟ್ ಮಾಡಿದ್ದರು.

‘ಅಹಮಾದಾಬಾದ್​​ನ ವಿಮಾನ ಅಪಘಾತ ಕೆಟ್ಟ ಸುದ್ದಿ. ದುರಂತದಿಂದ ತೊಂದರೆಗೆ ಒಳಗಾದ ಎಲ್ಲಾ ಕುಟುಂಬದವರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬದವರಿಗೆ ಶಕ್ತಿ ಸಿಗಲಿ’ ಎಂದು ಸಂಜಯ್ ಕಪೂರ್ ಟ್ವೀಟ್ ಮಾಡಿದ್ದರು. ಇದಾದ ಬಳಿಕ ಅವರು ನಿಧನ ಹೊಂದಿದ್ದಾರೆ.

ಸಂಜಯ್ ಕಪೂರ್ ಅವರು ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಸೋನಾ ಕಾಮ್​ಸ್ಟಾರ್ ಕಂಪನಿ​​ಗೆ ಅವರು ಅಧ್ಯಕ್ಷರಾಗಿದ್ದಾರೆ. ಅವರು ಉದ್ಯಮದಲ್ಲಿ ಕ್ರಾಂತಿ ತರಲು ಬಯಸಿದ್ದರು. ಅವರು ವಿವಿಧ ಸಾಧನೆ ಮಾಡುವ ಮೊದಲೇ ಹೊರಟು ಹೋಗಿದ್ದಾರೆ.

ಇದನ್ನೂ ಓದಿ: ‘ಐ ಆ್ಯಮ್ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಎಂದಿದ್ದ ಕರೀಷ್ಮಾಗೆ ಮದುವೆ; ಇಲ್ಲಿವೆ ಫೋಟೋಗಳು 

ಸಂಜಯ್ ಹಾಗೂ ಹಿಂದಿ ನಟಿ ಕರೀಷ್ಮಾ 2003ರಲ್ಲಿ ವಿವಾಹ ಆದರು. ಇವರು 2016ರ ಜೂನ್ ತಿಂಗಳಲ್ಲಿ ಬೇರೆ ಆದರು. ದೆಹಲಿ ಹೈಕೋರ್ಟ್​​ನಲ್ಲಿ ಇವರು 2005ರಲ್ಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಕೋರಲಾಗಿತ್ತು. 2010ರಲ್ಲಿ ಕರೀಷ್ಮಾ ಅವರು ಸಂಜಯ್ ಮನೆಯಿಂದ ನಡೆದರು.  2016ರಲ್ಲಿ ಇವರು ಬೇರೆ ಆಗಲೇಬೇಕು ಎನ್ನುವ ನಿರ್ಧಾರಕ್ಕೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!