AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ದುರಂತದ ಬಗ್ಗೆ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ

ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಹಾಗೂ ಖ್ಯಾತ ಉದ್ಯಮಿ ಸಂಜಯ್ ಕಪೂರ್ ಅವರು 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸಂಜಯ್ ಅವರು ಪೋಲೋ ಆಟವಾಡುವಾಗ ಅನಾರೋಗ್ಯಕ್ಕೆ ಒಳಗಾಗಿ ಇಂಗ್ಲೆಂಡ್‌ನಲ್ಲಿ ನಿಧನರಾಗಿದ್ದಾರೆ ಎಂದು ಖಚಿತಪಡಿಸಲಾಗಿದೆ.

ವಿಮಾನ ದುರಂತದ ಬಗ್ಗೆ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ
ಸಂಜಯ್-ಕರೀಷ್ಮಾ
ರಾಜೇಶ್ ದುಗ್ಗುಮನೆ
|

Updated on: Jun 13, 2025 | 7:01 AM

Share

ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರ ಮಾಜಿ ಪತಿ, ಉದ್ಯಮಿ ಸಂಜಯ್ ಕಪೂರ್ (Sunjay Kapur) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 53 ವರ್ಷ ವಯಸ್ಸಾಗಿತ್ತು. ಸಂಜಯ್​ಗೆ ಕರೀಷ್ಮಾ ಜೊತೆ ಇಬ್ಬರು ಮಕ್ಕಳು ಹಾಗೂ ಎರಡನೇ ಪತ್ನಿ ಪ್ರಿಯಾ ಜೊತೆ ಒಂದು ಮಗು ಹೊಂದಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಶಾಕಿಂಗ್ ವಿಚಾರ ಎಂದರೆ ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಸಂಜಯ್ ಟ್ವೀಟ್ ಮಾಡಿ ಸಂತಾಪ ಕೋರಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತ ಆಗಿದೆ.

ಸಂಜಯ್ ಅವರು ಪೊಲೋ ಗೇಮ್​ನ ಆಡುತ್ತಿದ್ದರು. ಈ ವೇಳೆ ಅವರಿಗೆ ಅನಾರೋಗ್ಯ ಉಂಟಾಗಿದೆ. ಆ ಬಳಿಕ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಅವರು ಇಂಗ್ಲೆಂಡ್​ನಲ್ಲಿ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರ ಆಪ್ತೆ ಸುಹೇಲ್ ಸೇಠ್ ಅವರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
Image
ಕೆಲಸದವರನ್ನು ಗೌರಿ ಖಾನ್ ಎಷ್ಟು ಉತ್ತಮವಾಗಿ ನೋಡಿಕೊಳ್ತಾರೆ ನೋಡಿ..
Image
ನನಗೆ ಮಾರ್ಗದರ್ಶನ ನೀಡಿದ್ದರೆ; ಡ್ರಗ್ಸ್ ಪಾರ್ಟಿ ಬಗ್ಗೆ ಮೌನ ಮುರಿದ ಮಂಗ್ಲಿ
Image
‘ಸಿತಾರೆ ಜಮೀನ್ ​ಪರ್’ ನೋಡಿ ವಿಮರ್ಶೆ ತಿಳಿಸಿದ ಸುಧಾ ಮೂರ್ತಿ

ಏರ್ ಇಂಡಿಯಾ ವಿಮಾನ ಅಹಮದಾಬಾದ್​ನಿಂದ ಇಂಗ್ಲೆಂಡ್​ಗೆ ತೆರಳುವುದಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್​ಆಪ್ ಆದ ಕೆಲವೇ ಗಂಟೆಗಳಲ್ಲಿ ವಿಮಾನ ಹಾಸ್ಟೆಲ್ ಮೇಲೆ ಅಪ್ಪಳಿಸಿತು. ವಿಮಾನದಲ್ಲಿ ಇದ್ದ ಬಹುತೇಕ ಎಲ್ಲಾ ಪ್ರಯಾಣಿಕರು ನಿಧನ ಹೊಂದಿದ್ದಾರೆ. ಈ ಘಟನೆ ಬಗ್ಗೆ ಅವರು ಟ್ವೀಟ್ ಮಾಡಿದ್ದರು.

‘ಅಹಮಾದಾಬಾದ್​​ನ ವಿಮಾನ ಅಪಘಾತ ಕೆಟ್ಟ ಸುದ್ದಿ. ದುರಂತದಿಂದ ತೊಂದರೆಗೆ ಒಳಗಾದ ಎಲ್ಲಾ ಕುಟುಂಬದವರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬದವರಿಗೆ ಶಕ್ತಿ ಸಿಗಲಿ’ ಎಂದು ಸಂಜಯ್ ಕಪೂರ್ ಟ್ವೀಟ್ ಮಾಡಿದ್ದರು. ಇದಾದ ಬಳಿಕ ಅವರು ನಿಧನ ಹೊಂದಿದ್ದಾರೆ.

ಸಂಜಯ್ ಕಪೂರ್ ಅವರು ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಸೋನಾ ಕಾಮ್​ಸ್ಟಾರ್ ಕಂಪನಿ​​ಗೆ ಅವರು ಅಧ್ಯಕ್ಷರಾಗಿದ್ದಾರೆ. ಅವರು ಉದ್ಯಮದಲ್ಲಿ ಕ್ರಾಂತಿ ತರಲು ಬಯಸಿದ್ದರು. ಅವರು ವಿವಿಧ ಸಾಧನೆ ಮಾಡುವ ಮೊದಲೇ ಹೊರಟು ಹೋಗಿದ್ದಾರೆ.

ಇದನ್ನೂ ಓದಿ: ‘ಐ ಆ್ಯಮ್ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಎಂದಿದ್ದ ಕರೀಷ್ಮಾಗೆ ಮದುವೆ; ಇಲ್ಲಿವೆ ಫೋಟೋಗಳು 

ಸಂಜಯ್ ಹಾಗೂ ಹಿಂದಿ ನಟಿ ಕರೀಷ್ಮಾ 2003ರಲ್ಲಿ ವಿವಾಹ ಆದರು. ಇವರು 2016ರ ಜೂನ್ ತಿಂಗಳಲ್ಲಿ ಬೇರೆ ಆದರು. ದೆಹಲಿ ಹೈಕೋರ್ಟ್​​ನಲ್ಲಿ ಇವರು 2005ರಲ್ಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಕೋರಲಾಗಿತ್ತು. 2010ರಲ್ಲಿ ಕರೀಷ್ಮಾ ಅವರು ಸಂಜಯ್ ಮನೆಯಿಂದ ನಡೆದರು.  2016ರಲ್ಲಿ ಇವರು ಬೇರೆ ಆಗಲೇಬೇಕು ಎನ್ನುವ ನಿರ್ಧಾರಕ್ಕೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು