AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
TV9 Web
| Edited By: |

Updated on: Aug 13, 2021 | 9:42 PM

Share

ಭಾರತ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕರ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಮುಂಚೂಣಿಯಲ್ಲಿರುತ್ತಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ದೃಶ್ಯವೂ ಅಚ್ಚುಕಟ್ಟಾಗಿ ಮೂಡಿ ಬರೋಕೆ ಎನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಾರೆ ಸಂಜಯ್​ ಲೀಲಾ ಬನ್ಸಾಲಿ.  ಈ ಕಾರಣಕ್ಕೆ ಅವರು ಪಡೆಯೋ ಸಂಭಾವನ ಕೂಡ ಅಧಿಕವೇ. ಈಗ ಅವರ ಮೊದಲ ಒಟಿಟಿ ವೆಬ್​ ಸೀರಿಸ್​ಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಗೊತ್ತಾಗಿದೆ.

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​. ಏಕೆಂದರೆ, ಬೆಳ್ಳಿ ಪರದೆಯಲ್ಲಿ ಛಾಪು ಮೂಡಿಸಿರುವ ಅವರಿಗೆ ಇದು ಮೊದಲ ಒಟಿಟಿ ಪ್ರಾಜೆಕ್ಟ್​. ಈ ವೆಬ್​ ಸೀರಿಸ್​ ಅನ್ನು ನೆಟ್​ಫ್ಲಿಕ್ಸ್​ ನಿರ್ಮಾಣ ಮಾಡುತ್ತಿದೆ.

ಹೀರಾ ಮಂಡಿ ಕಥೆ ಸ್ವಾತಂತ್ರ್ಯ ಪೂರ್ವದ ಹಿನ್ನೆಲೆಯಲ್ಲಿ ಸಾಗಲಿದೆ. ಇಡೀ ಕಥೆ ನಡೆಯುವುದು ಲಾಹೋರ್​ನಲ್ಲಿ. ಐಶ್ವರ್ಯಾ ರೈ, ಮಾಧುರಿ ದೀಕ್ಷಿತ್​, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ವಿದ್ಯಾ ಬಾಲನ್​ ಮೊದಲಾದವರನ್ನು ಪಾತ್ರವರ್ಗಕ್ಕೆ ಸೇರಿಸಬೇಕು ಎಂಬುದು ಬನ್ಸಾಲಿ ಆಲೋಚನೆ.

ಹೀರಾ ಮಂಡಿ 7 ಎಪಿಸೋಡ್​ಗಳಲ್ಲಿ ಮೂಡಿ ಬರುತ್ತಿದೆ. ಈ ಏಳು ಎಪಿಸೋಡ್​ಗೆ ಬನ್ಸಾಲಿ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 35 ಕೋಟಿ. ಅಂದರೆ, ಒಂದು ಎಪಿಸೋಡ್​ಗೆ ಅವರು ಪಡೆಯೋ ಸಂಭಾವನೆ 5 ಕೋಟಿ ರೂಪಾಯಿ. ಸದ್ಯ, ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್