AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
TV9 Web
| Edited By: |

Updated on: Aug 13, 2021 | 9:42 PM

Share

ಭಾರತ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕರ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಮುಂಚೂಣಿಯಲ್ಲಿರುತ್ತಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ದೃಶ್ಯವೂ ಅಚ್ಚುಕಟ್ಟಾಗಿ ಮೂಡಿ ಬರೋಕೆ ಎನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಾರೆ ಸಂಜಯ್​ ಲೀಲಾ ಬನ್ಸಾಲಿ.  ಈ ಕಾರಣಕ್ಕೆ ಅವರು ಪಡೆಯೋ ಸಂಭಾವನ ಕೂಡ ಅಧಿಕವೇ. ಈಗ ಅವರ ಮೊದಲ ಒಟಿಟಿ ವೆಬ್​ ಸೀರಿಸ್​ಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಗೊತ್ತಾಗಿದೆ.

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​. ಏಕೆಂದರೆ, ಬೆಳ್ಳಿ ಪರದೆಯಲ್ಲಿ ಛಾಪು ಮೂಡಿಸಿರುವ ಅವರಿಗೆ ಇದು ಮೊದಲ ಒಟಿಟಿ ಪ್ರಾಜೆಕ್ಟ್​. ಈ ವೆಬ್​ ಸೀರಿಸ್​ ಅನ್ನು ನೆಟ್​ಫ್ಲಿಕ್ಸ್​ ನಿರ್ಮಾಣ ಮಾಡುತ್ತಿದೆ.

ಹೀರಾ ಮಂಡಿ ಕಥೆ ಸ್ವಾತಂತ್ರ್ಯ ಪೂರ್ವದ ಹಿನ್ನೆಲೆಯಲ್ಲಿ ಸಾಗಲಿದೆ. ಇಡೀ ಕಥೆ ನಡೆಯುವುದು ಲಾಹೋರ್​ನಲ್ಲಿ. ಐಶ್ವರ್ಯಾ ರೈ, ಮಾಧುರಿ ದೀಕ್ಷಿತ್​, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ವಿದ್ಯಾ ಬಾಲನ್​ ಮೊದಲಾದವರನ್ನು ಪಾತ್ರವರ್ಗಕ್ಕೆ ಸೇರಿಸಬೇಕು ಎಂಬುದು ಬನ್ಸಾಲಿ ಆಲೋಚನೆ.

ಹೀರಾ ಮಂಡಿ 7 ಎಪಿಸೋಡ್​ಗಳಲ್ಲಿ ಮೂಡಿ ಬರುತ್ತಿದೆ. ಈ ಏಳು ಎಪಿಸೋಡ್​ಗೆ ಬನ್ಸಾಲಿ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 35 ಕೋಟಿ. ಅಂದರೆ, ಒಂದು ಎಪಿಸೋಡ್​ಗೆ ಅವರು ಪಡೆಯೋ ಸಂಭಾವನೆ 5 ಕೋಟಿ ರೂಪಾಯಿ. ಸದ್ಯ, ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ