AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​.

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 13, 2021 | 9:42 PM

Share

ಭಾರತ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕರ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಮುಂಚೂಣಿಯಲ್ಲಿರುತ್ತಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ದೃಶ್ಯವೂ ಅಚ್ಚುಕಟ್ಟಾಗಿ ಮೂಡಿ ಬರೋಕೆ ಎನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಾರೆ ಸಂಜಯ್​ ಲೀಲಾ ಬನ್ಸಾಲಿ.  ಈ ಕಾರಣಕ್ಕೆ ಅವರು ಪಡೆಯೋ ಸಂಭಾವನ ಕೂಡ ಅಧಿಕವೇ. ಈಗ ಅವರ ಮೊದಲ ಒಟಿಟಿ ವೆಬ್​ ಸೀರಿಸ್​ಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ವಿಚಾರ ಗೊತ್ತಾಗಿದೆ.

‘ಹೀರಾ ಮಂಡಿ’ ಹೆಸರಿನ ವೆಬ್​ ಸೀರಿಸ್ ಡೈರೆಕ್ಷನ್​ ಮಾಡೋಕೆ ಸಂಜಯ್​ ಲೀಲಾ ಬನ್ಸಾಲಿ ರೆಡಿ ಆಗಿದ್ದಾರೆ. ಇದು ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಲಿದೆ. ಇದು ಬನ್ಸಾಲಿ ಪಾಲಿಗೆ ವಿಶೇಷ ಪ್ರಾಜೆಕ್ಟ್​. ಏಕೆಂದರೆ, ಬೆಳ್ಳಿ ಪರದೆಯಲ್ಲಿ ಛಾಪು ಮೂಡಿಸಿರುವ ಅವರಿಗೆ ಇದು ಮೊದಲ ಒಟಿಟಿ ಪ್ರಾಜೆಕ್ಟ್​. ಈ ವೆಬ್​ ಸೀರಿಸ್​ ಅನ್ನು ನೆಟ್​ಫ್ಲಿಕ್ಸ್​ ನಿರ್ಮಾಣ ಮಾಡುತ್ತಿದೆ.

ಹೀರಾ ಮಂಡಿ ಕಥೆ ಸ್ವಾತಂತ್ರ್ಯ ಪೂರ್ವದ ಹಿನ್ನೆಲೆಯಲ್ಲಿ ಸಾಗಲಿದೆ. ಇಡೀ ಕಥೆ ನಡೆಯುವುದು ಲಾಹೋರ್​ನಲ್ಲಿ. ಐಶ್ವರ್ಯಾ ರೈ, ಮಾಧುರಿ ದೀಕ್ಷಿತ್​, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ವಿದ್ಯಾ ಬಾಲನ್​ ಮೊದಲಾದವರನ್ನು ಪಾತ್ರವರ್ಗಕ್ಕೆ ಸೇರಿಸಬೇಕು ಎಂಬುದು ಬನ್ಸಾಲಿ ಆಲೋಚನೆ.

ಹೀರಾ ಮಂಡಿ 7 ಎಪಿಸೋಡ್​ಗಳಲ್ಲಿ ಮೂಡಿ ಬರುತ್ತಿದೆ. ಈ ಏಳು ಎಪಿಸೋಡ್​ಗೆ ಬನ್ಸಾಲಿ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 35 ಕೋಟಿ. ಅಂದರೆ, ಒಂದು ಎಪಿಸೋಡ್​ಗೆ ಅವರು ಪಡೆಯೋ ಸಂಭಾವನೆ 5 ಕೋಟಿ ರೂಪಾಯಿ. ಸದ್ಯ, ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗೆ ಗುಡ್​ ಬೈ ಹೇಳಿದ ರಣಬೀರ್​; ಕಾರಣವೇನು?

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ