ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ

ಸಂಜಯ್​ ಲೀಲಾ ಬನ್ಸಾಲಿ ಅವರು ತಮ್ಮದೇ ಆದ ಶೈಲಿ ಹೊಂದಿದ್ದಾರೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ.

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 09, 2021 | 9:45 PM

ಭಾರತ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕರ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಮುಂಚೂಣಿಯಲ್ಲಿರುತ್ತಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಈ ವಿಶೇಷ ದಿನದಂದು ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. 1996ರಲ್ಲಿ ‘ಖಾಮೋಶಿ: ದಿ ಮ್ಯೂಸಿಕಲ್​’ ಸಿನಿಮಾ ತೆರೆಗೆ ಬಂದಿತ್ತು. ಇದು ಅವರ ಮೊದಲ ಸಿನಿಮಾ. ಹಮ್​ ದಿಲ್​ ದೆ ಚುಕೆ ಸನಮ್ (1999), ದೇವದಾಸ್​ (2002), ಬ್ಲ್ಯಾಕ್​​ (2005), ರಾಮ್​ ಲೀಲಾ (2013), ಬಾಜಿರಾವ್​ ಮಸ್ತಾನಿ (2015) ಮತ್ತು ಪದ್ಮಾವತ್​ (2018) ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಸಂಜಯ್​ ಲೀಲಾ ಬನ್ಸಾಲಿಗೆ ಇದೆ.

ಸಂಜಯ್​ ಲೀಲಾ ಬನ್ಸಾಲಿ ಅವರು ತಮ್ಮದೇ ಆದ ಶೈಲಿ ಹೊಂದಿದ್ದಾರೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ದೃಶ್ಯವೂ ಅಚ್ಚುಕಟ್ಟಾಗಿ ಮೂಡಿ ಬರೋಕೆ ಎನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಾರೆ ಸಂಜಯ್​ ಲೀಲಾ ಬನ್ಸಾಲಿ. ಇನ್ನು, ಅದ್ದೂರಿ ಸೆಟ್ ಬನ್ಸಾಲಿ ಸಿನಿಮಾದ ಹೈಲೈಟ್​.

25 ವರ್ಷದ ನೆನೆಪಿಗೆ ಸಂಜಯ್​ ಲೀಲಾ ಬನ್ಸಾಲಿ ಅವರು ಪೋಸ್ಟ್​ ಒಂದನ್ನು ಮಾಡಿದ್ದಾರೆ. ‘ನನ್ನ ಪಯಣದಲ್ಲಿ ಅನೇಕ ಚಾಲೆಂಜ್​ಗಳನ್ನು ಎದುರಿಸಿದ್ದೇನೆ. ಆದರೆ, ಪ್ರತಿ ಕ್ಷಣವನ್ನೂ ನಾನು ಆನಂದಿಸಿದ್ದೇನೆ. ನನ್ನ ಕೆಲಸದ ಬಗ್ಗೆ ವೀಕ್ಷಕರು ನೀಡುವ ಪ್ರತಿಕ್ರಿಯೆ ನನಗೆ ಸಂತೋಷ ನೀಡುತ್ತದೆ. ನನ್ನ ಜತೆ ಕೆಲಸ ಮಾಡಿದ ತಂಡದ ಸಹಾಯ ಇಲ್ಲದೆ ನಾನು ಇಲ್ಲಿವರೆಗೆ ಬರಲು ಸಾಧ್ಯವಿಲ್ಲ’ ಎಂದಿದ್ದಾರೆ ಬನ್ಸಾಲಿ.

ಇನ್ನು, ಬಾಲಿವುಡ್​ ನಟ- ನಟಿಯರು ಸಂಜಯ್​ ಲೀಲಾ ಬನ್ಸಾಲಿಗೆ ಶುಭಕೋರಿದ್ದಾರೆ. ಚಿತ್ರರಂಗದಲ್ಲಿ 25 ವರ್ಷ ಶ್ರಮಿಸಿದ ಬನ್ಸಾಲಿ ಅವರ ಮುಂದಿನ ಕೆಲಸಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಸಂಜಯ್​ ಲೀಲಾ ಬನ್ಸಾಲಿ ಅವರು ಸದ್ಯ ಮುಂಬೈ ಮಾಫಿಯಾ ಕ್ವೀನ್​ ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಸಿದ್ಧಗೊಂಡಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಜುಲೈ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಎರಡನೇ  ಅಲೆ ಕಾರಣದಿಂದ ಈ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟವು.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ