AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ

ಸಂಜಯ್​ ಲೀಲಾ ಬನ್ಸಾಲಿ ಅವರು ತಮ್ಮದೇ ಆದ ಶೈಲಿ ಹೊಂದಿದ್ದಾರೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ.

ಸಂಜಯ್​ ಲೀಲಾ ಬನ್ಸಾಲಿ ಚಿತ್ರರಂಗದ ಪಯಣಕ್ಕೆ 25 ವರ್ಷ; ಇಲ್ಲಿದೆ ಅವರ ಸಿನಿ ಜರ್ನಿ ಬಗ್ಗೆ ಮಾಹಿತಿ
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ
TV9 Web
| Edited By: |

Updated on: Aug 09, 2021 | 9:45 PM

Share

ಭಾರತ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕರ ಪೈಕಿ ಸಂಜಯ್​ ಲೀಲಾ ಬನ್ಸಾಲಿ ಮುಂಚೂಣಿಯಲ್ಲಿರುತ್ತಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಈ ವಿಶೇಷ ದಿನದಂದು ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. 1996ರಲ್ಲಿ ‘ಖಾಮೋಶಿ: ದಿ ಮ್ಯೂಸಿಕಲ್​’ ಸಿನಿಮಾ ತೆರೆಗೆ ಬಂದಿತ್ತು. ಇದು ಅವರ ಮೊದಲ ಸಿನಿಮಾ. ಹಮ್​ ದಿಲ್​ ದೆ ಚುಕೆ ಸನಮ್ (1999), ದೇವದಾಸ್​ (2002), ಬ್ಲ್ಯಾಕ್​​ (2005), ರಾಮ್​ ಲೀಲಾ (2013), ಬಾಜಿರಾವ್​ ಮಸ್ತಾನಿ (2015) ಮತ್ತು ಪದ್ಮಾವತ್​ (2018) ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಸಂಜಯ್​ ಲೀಲಾ ಬನ್ಸಾಲಿಗೆ ಇದೆ.

ಸಂಜಯ್​ ಲೀಲಾ ಬನ್ಸಾಲಿ ಅವರು ತಮ್ಮದೇ ಆದ ಶೈಲಿ ಹೊಂದಿದ್ದಾರೆ. ಅವರ ಸಿನಿಮಾದಲ್ಲಿ ಯಾವಾಗಲೂ ಭಾವನೆಗೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ. ಅವರು ಯಾವುದೇ ಸಿನಿಮಾ ಕೈಗೆತ್ತಿಕೊಳ್ಳಲಿ, ಅದಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡುತ್ತಾರೆ. ಪ್ರತಿ ದೃಶ್ಯವೂ ಅಚ್ಚುಕಟ್ಟಾಗಿ ಮೂಡಿ ಬರೋಕೆ ಎನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಾರೆ ಸಂಜಯ್​ ಲೀಲಾ ಬನ್ಸಾಲಿ. ಇನ್ನು, ಅದ್ದೂರಿ ಸೆಟ್ ಬನ್ಸಾಲಿ ಸಿನಿಮಾದ ಹೈಲೈಟ್​.

25 ವರ್ಷದ ನೆನೆಪಿಗೆ ಸಂಜಯ್​ ಲೀಲಾ ಬನ್ಸಾಲಿ ಅವರು ಪೋಸ್ಟ್​ ಒಂದನ್ನು ಮಾಡಿದ್ದಾರೆ. ‘ನನ್ನ ಪಯಣದಲ್ಲಿ ಅನೇಕ ಚಾಲೆಂಜ್​ಗಳನ್ನು ಎದುರಿಸಿದ್ದೇನೆ. ಆದರೆ, ಪ್ರತಿ ಕ್ಷಣವನ್ನೂ ನಾನು ಆನಂದಿಸಿದ್ದೇನೆ. ನನ್ನ ಕೆಲಸದ ಬಗ್ಗೆ ವೀಕ್ಷಕರು ನೀಡುವ ಪ್ರತಿಕ್ರಿಯೆ ನನಗೆ ಸಂತೋಷ ನೀಡುತ್ತದೆ. ನನ್ನ ಜತೆ ಕೆಲಸ ಮಾಡಿದ ತಂಡದ ಸಹಾಯ ಇಲ್ಲದೆ ನಾನು ಇಲ್ಲಿವರೆಗೆ ಬರಲು ಸಾಧ್ಯವಿಲ್ಲ’ ಎಂದಿದ್ದಾರೆ ಬನ್ಸಾಲಿ.

ಇನ್ನು, ಬಾಲಿವುಡ್​ ನಟ- ನಟಿಯರು ಸಂಜಯ್​ ಲೀಲಾ ಬನ್ಸಾಲಿಗೆ ಶುಭಕೋರಿದ್ದಾರೆ. ಚಿತ್ರರಂಗದಲ್ಲಿ 25 ವರ್ಷ ಶ್ರಮಿಸಿದ ಬನ್ಸಾಲಿ ಅವರ ಮುಂದಿನ ಕೆಲಸಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಸಂಜಯ್​ ಲೀಲಾ ಬನ್ಸಾಲಿ ಅವರು ಸದ್ಯ ಮುಂಬೈ ಮಾಫಿಯಾ ಕ್ವೀನ್​ ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಸಿದ್ಧಗೊಂಡಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್​ ನಾಯಕಿ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಸಿನಿಮಾ ಜುಲೈ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಎರಡನೇ  ಅಲೆ ಕಾರಣದಿಂದ ಈ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟವು.

ಇದನ್ನೂ ಓದಿ: ಆಲಿಯಾ ಭಟ್​ ವಿಚಾರಕ್ಕೆ ದೀಪಿಕಾ ಪಡುಕೋಣೆ- ಸಂಜಯ್​ ಲೀಲಾ ಬನ್ಸಾಲಿ ನಡುವೆ ಕೋಲ್ಡ್​ ವಾರ್!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್