AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​, ಸಂಜಯ್​ ಲೀಲಾ ಬನ್ಸಾಲಿಗೆ ಬಾಂಬೇ ಹೈಕೋರ್ಟ್​​ನಿಂದ ಮಧ್ಯಂತರ ರಿಲೀಫ್​

ಮುಂಬೈನ ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಚಿತ್ರದ ಟೀಸರ್​ ರಿಲೀಸ್​ ಆದ ನಂತರದಲ್ಲಿ ಗಂಗೂಬಾಯಿ ಅವರ ದತ್ತುಪುತ್ರ ಬಾಬುರಾವ್​ ಶಾ ದೂರು ದಾಖಲು ಮಾಡಿದ್ದರು.

ಆಲಿಯಾ ಭಟ್​, ಸಂಜಯ್​ ಲೀಲಾ ಬನ್ಸಾಲಿಗೆ ಬಾಂಬೇ ಹೈಕೋರ್ಟ್​​ನಿಂದ ಮಧ್ಯಂತರ ರಿಲೀಫ್​
ಆಲಿಯಾ ಭಟ್​, ಸಂಜಯ್​ ಲೀಲಾ ಬನ್ಸಾಲಿಗೆ ಬಾಂಬೇ ಹೈಕೋರ್ಟ್​​ನಿಂದ ಮಧ್ಯಂತರ ರಿಲೀಫ್​
TV9 Web
| Edited By: |

Updated on: Aug 19, 2021 | 3:46 PM

Share

ಮುಂಬೈ ಮಾಫಿಯಾ ಕ್ವೀನ್​ ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಸಿದ್ಧಗೊಂಡಿರುವ ಸಿನಿಮಾಗೆ ಸಂಕಷ್ಟ ಎದುರಾಗಿತ್ತು. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಇರುವ ಈ ಚಿತ್ರತಂಡಕ್ಕೆ ಮುಂಬೈ ಮ್ಯಾಜಿಸ್ಟ್ರೇಟ್​ ಕೋರ್ಟ್​ ಸಮನ್ಸ್​ ಜಾರಿ ಮಾಡಿ, ಕೋರ್ಟ್​ಗೆ ಹಾಜರಾಗಲು ಸೂಚಿಸಿತ್ತು. ಆದರೆ, ಈಗ ಆದೇಶಕ್ಕೆ ಬಾಂಬೆ ಹೈಕೋರ್ಟ್​ ತಡೆ ನೀಡಿದೆ. ಈ ಮೂಲಕ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕೆ ಎದುರಾಗಿದ್ದ ಸಂಕಷ್ಟ ಕೊಂಚಮಟ್ಟಿಗೆ ದೂರವಾಗಿದೆ.

ಮುಂಬೈನ ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಚಿತ್ರದ ಟೀಸರ್​ ರಿಲೀಸ್​ ಆದ ನಂತರದಲ್ಲಿ ಗಂಗೂಬಾಯಿ ಅವರ ದತ್ತುಪುತ್ರ ಬಾಬುರಾವ್​ ಶಾ ದೂರು ದಾಖಲು ಮಾಡಿದ್ದರು. ಅಲ್ಲದೆ, ಅವರು ಸಿನಿಮಾ ವಿರುದ್ಧ ಕಿಡಿಕಾರಿದ್ದರು. ‘ಈ ಚಿತ್ರದಲ್ಲಿ ಗಂಗೂಬಾಯಿ ಅವರನ್ನು ತಪ್ಪಾಗಿ ತೋರಿಸಲಾಗಿದೆ. ಸಿನಿಮಾದಲ್ಲಿ ತೋರಿಸಲು ಹೊರಟಿರುವ ದೃಶ್ಯಗಳು ವಾಸ್ತವಕ್ಕೆ ದೂರ ಇದ್ದಂತೆ ಕಾಣುತ್ತಿದೆ’ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ದೂರನ್ನು ಸ್ವೀಕರಿಸಿದ್ದ ಮ್ಯಾಜಿಸ್ಟ್ರೇಟ್​ ಕೋರ್ಟ್​ ಆಲಿಯಾ ಭಟ್​ ಹಾಗೂ ನಿರ್ದೇಶಕ ಸಂಜಯ್​ ಬನ್ಸಾಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಇದನ್ನು ಪ್ರಶ್ನಿಸಿ ಸಂಜಯ್​ ಲೀಲಾ ಬನ್ಸಾಲಿ, ಆಲಿಯಾ ಭಟ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈಗ ಅವರಿಗೆ ಕೊಂಚ ರಿಲೀಫ್​ ಸಿಕ್ಕಂತಾಗಿದೆ. ಸದ್ಯ, ಈ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಮುಂಬೈ ಕೋರ್ಟ್​ ಹೇಳಿದೆ. ಸೆಪ್ಟೆಂಬರ್ 7ರಂದು ಮುಂದಿನ ವಿಚಾರಣೆ ನಡೆಯಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜುಲೈ 30ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಕೋರ್ಟ್​ ಕೇಸ್​ ಹಾಗೂ ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ತಡವಾಗಿದೆ. ಹೊಸ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿಲ್ಲ. ಸದ್ಯ, ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಗಂಗೂಬಾಯಿ ಆಗಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಒದಿ:  ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!