AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Raut: ‘ಶಾರುಖ್​ ಚಿತ್ರ ಎಂಬ ಕಾರಣಕ್ಕೆ ವಿರೋಧ ಮಾಡೋದು ತಪ್ಪು’: ಶಿವಸೇನಾ ಮುಖಂಡ ಸಂಜಯ್​ ರಾವತ್​

Shah Rukh Khan | Pathaan Movie: ‘ದೇಶದಲ್ಲಿ ದೊಡ್ಡ ಸಮಸ್ಯೆಗಳಿವೆ. ಆ ಬಗ್ಗೆ ಎದುರಾಗುವ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ನೀವು ಇಂಥ ವಿಷಯ ಚರ್ಚೆ ಮಾಡುತ್ತೀರಿ’ ಎಂದು ಸಂಜಯ್​ ರಾವತ್​ ಹೇಳಿದ್ದಾರೆ.

Sanjay Raut: ‘ಶಾರುಖ್​ ಚಿತ್ರ ಎಂಬ ಕಾರಣಕ್ಕೆ ವಿರೋಧ ಮಾಡೋದು ತಪ್ಪು’: ಶಿವಸೇನಾ ಮುಖಂಡ ಸಂಜಯ್​ ರಾವತ್​
ಸಂಜಯ್ ರಾವತ್, ಶಾರುಖ್ ಖಾನ್, ದೀಪಿಕಾ ಪಡುಕೋಣೆ
TV9 Web
| Edited By: |

Updated on: Jan 16, 2023 | 9:53 AM

Share

ಬಿಡುಗಡೆಗೆ ಸಜ್ಜಾಗಿರುವ ‘ಪಠಾಣ್​’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಶಾರುಖ್​ ಖಾನ್​ (Shah Rukh Khan) ನಟನೆಯ ಈ ಸಿನಿಮಾಗೆ ಸಂಬಂಧಿಸಿದಂತೆ ಹಲವು ವಿವಾದ ಹುಟ್ಟಿಕೊಂಡಿವೆ. ‘ಪಠಾಣ್​’ (Pathaan Movie) ಸಿನಿಮಾದ ನಾಯಕಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿಸಿ ಧರಿಸಿದ್ದು ಸರಿಯಲ್ಲ ಎಂದು ಕೆಲವು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆದರೆ ಇದನ್ನು ಶಿವಸೇನಾ ಎಂಪಿ ಸಂಜಯ್​ ರಾವತ್​ (Sanjay Raut) ಅವರು ಖಂಡಿಸಿದ್ದಾರೆ. ‘ಇದು ಶಾರುಖ್​ ಖಾನ್​ ಸಿನಿಮಾ ಎಂಬ ಕಾರಣಕ್ಕೆ ವಿರೋಧಿಸೋದು ತಪ್ಪು’ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

‘ಪಠಾಣ್​’ ಪರ ಸಂಜತ್​ ರಾವತ್​ ಹೇಳಿಕೆ:

‘ಪಠಾಣ್ ಸಿನಿಮಾ ವಿರುದ್ಧ ಈ ರೀತಿ ವಿವಾದ ಮಾಡುವ ಅಗತ್ಯ ಇಲ್ಲ. ಬಿಜೆಪಿಯ ಓರ್ವ ಮುಖಂಡರು ಉರ್ಫಿ ಜಾವೇದ್​ ಧರಿಸಿದ ಬಟ್ಟೆ ಬಗ್ಗೆಯೂ ಆಕ್ಷೇಪ ಎತ್ತಿದ್ದಾರೆ. ದೇಶದಲ್ಲಿ ಅದಕ್ಕಿಂತಲೂ ದೊಡ್ಡ ಸಮಸ್ಯೆಗಳಿವೆ. ಆ ಬಗ್ಗೆ ಎದುರಾಗುವ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ನೀವು ಇಂಥ ವಿಷಯ ಚರ್ಚೆ ಮಾಡುತ್ತೀರಿ’ ಎಂದು ಸಂಜಯ್​ ರಾವತ್​ ಹೇಳಿದ್ದಾರೆ.

ಶಾರುಖ್​ ಖಾನ್​ ಸಿನಿಮಾ ಎಂಬ ಕಾರಣಕ್ಕೆ ವಿರೋಧ:

‘ಬಿಜೆಪಿ ಜೊತೆ ನಂಟು ಹೊಂದಿರುವ ಕಲಾವಿದರು ಕೂಡ ಕೇಸರಿ ಬಟ್ಟೆ ಧರಿಸಿದ್ದುಂಟು. ಸೆನ್ಸಾರ್ ಮಂಡಳಿಯು ಸರ್ಕಾರದ ಕೈಗೊಂಬೆ ಆಗಿದೆ. ಇದು ಶಾರುಖ್​ ಖಾನ್​ ಸಿನಿಮಾ ಎಂಬ ಕಾರಣಕ್ಕೆ ಆ ದೃಶ್ಯಕ್ಕೆ ಕತ್ತರಿ ಹಾಕಲಾಯಿತು. ದೊಡ್ಡ ಪರದೆಯಲ್ಲಿ ನಗ್ನತೆ ತೋರಿಸಿದರೆ, ಅದನ್ನು ಯಾರಾದರೂ ವಿರೋಧಿಸುವುದು ಸರಿ. ಆದರೆ ಕೇಸರಿ ಬಣ್ಣದ ಬಟ್ಟೆ ಎಂಬ ಕಾರಣಕ್ಕೆ ಆ ದೃಶ್ಯ ತೆಗೆದುಹಾಕುವುದು ತಪ್ಪು’ ಎಂದು ಸಂಜಯ್ ರಾವತ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ

‘ಪಠಾಣ್​’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಹಲವು ದೇಶಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಶಾರುಖ್​ ಖಾನ್​ ಅವರು ಈ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​ ಮಾಡಿಕೊಂಡು ಕಷ್ಟಪಟ್ಟಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ಅವರು ನಟಿಸಿದ್ದಾರೆ. ‘ಪಠಾಣ್​’ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಇದನ್ನೂ ಓದಿ: Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

ಈ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ‘ಪಠಾಣ್​’ ರಿಲೀಸ್​ ಆಗುತ್ತಿರುವುದರಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್ ಅವರು ಜೋಡಿಯಾಗಿ ನಟಿಸಿರುವ ನಾಲ್ಕನೇ ಸಿನಿಮಾ ಇದು. ಆ ಕಾರಣದಿಂದಲೂ ‘ಪಠಾಣ್​’ ಹೈಪ್​ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ